AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ಕದ್ದ ವಿಡಿಯೋ ವೈರಲ್, ಮನನೊಂದು ವಿದ್ಯಾರ್ಥಿನಿಗೆ ಆತ್ಮಹತ್ಯೆಗೆ ಶರಣು

ಚಾಕೋಲೇಟ್ ಕದ್ದ ವಿಡಿಯೋ ವೈರಲ್ ಆಗಿದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ,

ಚಾಕೊಲೇಟ್ ಕದ್ದ ವಿಡಿಯೋ ವೈರಲ್, ಮನನೊಂದು ವಿದ್ಯಾರ್ಥಿನಿಗೆ ಆತ್ಮಹತ್ಯೆಗೆ ಶರಣು
chocolate
TV9 Web
| Edited By: |

Updated on: Nov 01, 2022 | 3:48 PM

Share

ಅಲಿಪುರ್ದಾರ್(ಕೊಲ್ಕತ್ತ): ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು ಎನ್ನುವಂತೆ ಒಂದು ಚಾಕೊಲೇಟ್​ಗೆ ಹೋದ ಮರ್ಯಾದೆಗೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಷಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯಲ್ಲಿ ನಡೆದಿದೆ.

ಸಹೋದರಿಯೊಂದಿಗೆ ಶಾಪಿಂಗ್ ಮಾಲ್ ಗೆ ತೆರಳಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಈ ವೇಳೆ ಚಾಕೊಲೇಟ್ ಕದ್ದಿದ್ದು, ಇದರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಲಿಪುರ್ ದೌರ್ ಜಿಲ್ಲೆಯ ಈ ವಿದ್ಯಾರ್ಥಿನಿ ಸೆಪ್ಟೆಂಬರ್ 29ರಂದು ಶಾಪಿಂಗ್ ಮಾಲ್ ಗೆ ತೆರಳಿದ್ದು, ಈ ವೇಳೆ ಚಾಕೊಲೇಟ್ ಕದ್ದಿದ್ದಳು. ಬಳಿಕ ಚಾಕೊಲೇಟ್ ಕದ್ದಿರುವುದನ್ನು ಅಂಗಡಿ ಮಾಡಿ ಸಿಸಿಟಿವಿಯಲ್ಲಿ ಮೋಡಿ ವಿದ್ಯಾರ್ಥಿನಿಯನ್ನು ವಿಚಾರಿಸಿದ್ದಾನೆ. ಆಕೆಗೆ ತಪ್ಪಿನ ಅರಿವಾಗಿ ಅಂಗಡಿ ಮಾಲೀಕ ಬಳಿ ಕ್ಷಮೆಯಾಚಿಸಿ ಕದ್ದ ಚಾಕೊಲೇಟ್​ನ ಹಣವನ್ನೂ ಪಾವತಿಸಿದ್ದಾಳೆ. ಆ ವೇಳೆ ಅಲ್ಲೇ ಇದ್ದ ಒಂದು ಗುಂಪು ಅಂಗಡಿ ಮಾಲೀಕ ಹಾಗೂ ವಿದ್ಯಾರ್ಥಿನಿಯನ್ನು ಚಾಕೊಲೇಟ್ ಕದ್ದಿರುವ ಬಗ್ಗೆ ವಿಚಾರಿಸುವುದನ್ನು ವಿಡಿಯೋ ಮಾಡಿದೆ.

ಬಳಿಕ ವಿಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದೆ. ವಿಡಿಯೋ ವೈರಲ್ ಅಗುತ್ತಿದ್ದಂತೆಯೇ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು ವಿದ್ಯಾರ್ಥಿನಿಯ ಸಾವನ್ನು ಖಂಡಿಸಿದ ಸ್ಥಳೀಯರು ಶಾಪಿಂಗ್ ಮಾಲ್‌ನ ಹೊರಗೆ ಪ್ರತಿಭಟನೆ ನಡೆಸಿದ್ದು, ವಿಡಿಯೋ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಜೈಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಸ್ ಪಲ್ಲಿಯಲ್ಲಿರುವ ಮನೆಯಲ್ಲಿ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜೈಗಾಂವ್‌ನ ಪೊಲೀಸ್ ಅಧಿಕಾರಿ ಪ್ರಬೀರ್ ದತ್ತಾ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!