ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ

ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧನ
ಬೆಂಗಳೂರು: 16 ಎಕರೆ ಜಮೀನು ಕಬಳಿಕೆ ಪ್ರಕರಣ; ಮಾಜಿ ರೌಡಿಶೀಟರ್ ಜೆಕೆ ಬಂಧಿಸಿದ ಬ್ಯಾಡರಹಳ್ಳಿ ಠಾಣಾ ಪೊಲೀಸರು
Edited By: Rakesh Nayak Manchi

Updated on: Feb 06, 2024 | 6:58 PM

ಬೆಂಗಳೂರು, ಫೆ.6: ನಕಲಿ ದಾಖಲೆ ಸೃಷ್ಟಿಸಿ 16 ಎಕರೆ ಜಮೀನು ಕಬಳಿಸಿದ ಆರೋಪ ಸಂಬಂಧ ಮಾಜಿ ರೌಡಿಶೀಟರ್ ಆಗಿರುವ ಜೆಕೆ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ (Byadarahalli) ಠಾಣಾ ಪೊಲೀಸರು ಆರ್​ಟಿ ನಗರದಲ್ಲಿ ಬಂಧಿಸಿದ್ದಾರೆ. ಜೇಡರಹಳ್ಳಿ ಕೃಷ್ಣಪ್ಪ ವಿರುದ್ಧ ಬಸವರಾಜ್​ ಎಂಬವರು ಠಾಣೆಗೆ ದೂರು ನೀಡಿದ್ದರು.

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ, ಇಬ್ಬರು ದುರ್ಮರಣ

ಚಿತ್ರದುರ್ಗ: ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ (69), ಪಾಂಡುರಂಗ (32) ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಆನೇಕಲ್​ ನಲ್ಲಿ ಫಲವತ್ತಾದ ಪಿತ್ರಾರ್ಜಿತ ಜಮೀನು 2005ರಲ್ಲಿ ನೋಟಿಫಿಕೇಶನ್​​: ಪ್ರಭಾವಿಗಳಿಗೆ ನೀಡಲು ಕೆಐಎಡಿಬಿ ಹುನ್ನಾರ ಆರೋಪ

ತೋಟಕ್ಕೆ ಆಕಸ್ಮಿಕ ಬೆಂಕಿ; ತೆಂಗು, ಅಡಿಕೆ ಮರಗಳು ನಾಶ

ಮಂಡ್ಯ: ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ತೆಂಗು ಹಾಗೂ ಅಡಿಕೆ ಮರಗಳು ನಾಶಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಅಳವಡಿಸಿದ್ದ ಪೈಪ್​ಗಳು ಕೂಡ ಬೆಂಕಿಗೆ ಭಸ್ಮವಾಗಿವೆ. ಗ್ರಾಮದ ರಾಮಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us