AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 20ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವು

ಬೆಂಗಳೂರಿನ ಕಾಡುಗೋಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಿಂದ 15 ವರ್ಷದ ಬಾಲಕಿ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಪ್ರದೇಶ ಮೂಲದ ಈ ಬಾಲಕಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಡುಗೋಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: 20ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವು
ಬೆಂಗಳೂರು: 20ನೇ ಮಹಡಿಯಿಂದ ಬಿದ್ದು 15 ವರ್ಷದ ಬಾಲಕಿ ಸಾವು
ಜಗದೀಶ ಬಿ.
| Edited By: |

Updated on:Feb 12, 2025 | 4:54 PM

Share

ಬೆಂಗಳೂರು, ಫೆಬ್ರವರಿ 12: ಅಪಾರ್ಟ್​ಮೆಂಟ್​ನ 20ನೇ ಮಹಡಿಯಿಂದ ಜಿಗಿದು 15 ವರ್ಷದ ಬಾಲಕಿ (girl) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಅವಂತಿಕಾ ಚೌರಾಸಿಯಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಕಾಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೊಬೈಲ್ ಬಿಟ್ಟು ಓದು ಎಂದಿದ್ದೇ ತಪ್ಪಾಯ್ತಾ?

ಮಧ್ಯಪ್ರದೇಶ ಮೂಲದ ಕುಟುಂಬ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದರು. ಬಾಲಕಿಯ ತಂದೆ ಖಾಸಗಿ ಕಂಪನಿಯ ಇಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಬಾಲಕಿ ಅವಂತಿಕಾ ಚೌರಾಸಿಯಾ ಎಸ್​​ಎಸ್​ಎಲ್​ಸಿ ಓದುತ್ತಿದ್ದಳು. ಕಳೆದ ಪರಿಕ್ಷೆಯಲ್ಲಿ ಅವಂತಿಕಾ ಸರಳವಾದ ಅಂಕ ಪಡೆದಿದ್ದಳು. ಈ ನಡುವೆ 15ನೇ ತಾರೀಖಿನಿಂದ ಪರೀಕ್ಷೆ ಸಹ ಶುರುವಾಗಲಿತ್ತು. ಈ ನಡುವೆ ಮನೆಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿದ್ದಳು.

ಇದನ್ನು ಕಂಡು ತಾಯಿ ಬುದ್ಧಿಮಾತು ಹೇಳಿದ್ದಾರೆ. ಪರೀಕ್ಷೆ ಬರುತ್ತಿದೆ ಓದುವುದು ಬಿಟ್ಟು ಮೊಬೈಲ್​ನಲ್ಲಿ ಇರ್ತಿಯಾ ಎಂದು ತಾಯಿ ಬೈದಿದ್ದಾರೆ. ಈ ಮಾತು ಕೇಳಿ ಬಳಿಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಖಾಸಗಿ ಆಸ್ಪತ್ರೆಗೆ ಮೃತ ಬಾಲಕಿಯ ಮೃತದೇಹ ಶಿಫ್ಟ್ ಮಾಡಲಾಗಿದೆ.

ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಕುಲ್ಷಕ ಕಾರಣಕ್ಕೆ ಸ್ನೇಹಿತರ ನಡುವಿನ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಹೊಸೂರು ಸರ್ವಿಸ್ ರಸ್ತೆ ಸಿಂಗಸಂದ್ರದಲ್ಲಿ ನಡೆದಿದೆ. ಕಲ್ಲು ಎತ್ತಿಹಾಕಿ ಜಗದೀಶ್​(40) ಕೊಲೆ ಮಾಡಿದ ಸಿದ್ದೇಶ್.​

ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬದುಕುವ ಆಸೆಪಟ್ಟಿದ್ದ ಬಾಗಪ್ಪ ಹರಿಜನ ಬರ್ಬರ ಹತ್ಯೆ!

ಹೋಟೆಲ್​ನಲ್ಲಿ ಸಿದ್ದೇಶ್, ಜಗದೀಶ್ ಕೆಲಸ ಮಾಡುತ್ತಿದ್ದ. ಆರೋಪಿ ಸಿದ್ದೇಶ್​ನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಯಲು ಹಣ ನೀಡಿಲ್ಲವೆಂದು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

ಕುಡಿಯಲು ಹಣ ನೀಡಿಲ್ಲವೆಂದು ಯುವಕ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ತಾಲೂಕಿನ ಕರಜಗಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಪ್ರಮೋದ್ ಹೊಸಮನಿ (31) ಆತ್ಮಹತ್ಯೆ ಮಾಡಿಕೊಂಡ ಯುವಕ. ಹಾವೇರಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ. ಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಎಂಬುವರ ಮನೆಯಲ್ಲಿ ಆರೋಪಿ ಕಳ್ಳತನ ಮಾಡಿದ್ದ.

ಇದನ್ನೂ ಓದಿ: ಯುವತಿ ಅನುಮಾನಸ್ಪದ ಸಾವು: ಇದೊಂದು ಮರ್ಯಾದಾ ಹತ್ಯೆ ಎಂದ ಪ್ರಿಯಕರ!

ಮನೆಯ ಬೀರುವಿನಲ್ಲಿದ್ದ 20 ಸಾವಿರ ರೂ ನಗದು ಹಾಗೂ 4 ಗ್ರಾಂ ಮಾಟಿ, 12 ಗ್ರಾಂ ಚಿನ್ನದ ಸರ ಜೊತೆಗೆ ಮಾಂಗಲ್ಯ ಸರ ಕಳ್ಳತನ ಮಾಡಿದ್ದ. ಪಾವಗಡ ಮೂಲದ ಬಂಧಿತ ಆರೋಪಿ ಶ್ರೀನಿವಾಸನಿಂದ 1,45000 ಬೆಲೆಬಾಳುವ ಬಂಗಾರದ ಮಾಟಿ, ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:57 pm, Wed, 12 February 25

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ