AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಟ್ಟ ಮಾಲೀಕನಿಂದ ಹಣ ದೋಚಲು ಕೆಲಸಗಾರನ ಮಾಸ್ಟರ್​ ಪ್ಲಾನ್​: ಆರೋಪಿ ಅರೆಸ್ಟ್​

ಕಿಡ್ನಾಪ್​ ನಾಟಕವಾಡಿ ಮಾಲಿಕನಿಂದ ಹಣ ಪಡೆದು ಬಿಹಾರದಲ್ಲಿ ಸೆಟಲ್​​ ಆಗಲು ಪ್ಲಾನ್​ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಆರ್​ಟಿ ನಗರ ಪೊಲೀಸರು ಬಂಧಿಸಿದ್ದಾರೆ. ನೂರುಲ್ಲಾ ಹುಸೇನ್, ಅಬೂಬಕರ್ ಹಾಗೂ ಆಲಿ ರೇಝಾ ಬಂಧಿತ ಆರೋಪಿಗಳು.

ಕೆಲಸ ಕೊಟ್ಟ ಮಾಲೀಕನಿಂದ ಹಣ ದೋಚಲು ಕೆಲಸಗಾರನ ಮಾಸ್ಟರ್​ ಪ್ಲಾನ್​: ಆರೋಪಿ ಅರೆಸ್ಟ್​
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 06, 2023 | 9:49 AM

Share

ಬೆಂಗಳೂರು/ಮಂಡ್ಯ ಅ.06: ಕಿಡ್ನಾಪ್​ (Kidnap) ನಾಟಕವಾಡಿ ಮಾಲಿಕನಿಂದ ಹಣ ಪಡೆದು ಬಿಹಾರದಲ್ಲಿ ಸೆಟಲ್​​ ಆಗಲು ಪ್ಲಾನ್​ ಮಾಡಿದ್ದ ಆರೋಪಿಗಳನ್ನು ಆರ್​ಟಿ ನಗರ ಪೊಲೀಸರು (Police) ಬಂಧಿಸಿದ್ದಾರೆ. ನೂರುಲ್ಲಾ ಹುಸೇನ್, ಅಬೂಬಕರ್ ಹಾಗೂ ಆಲಿ ರೇಝಾ ಬಂಧಿತ ಆರೋಪಿಗಳು. ನೂರುಲ್ಲಾ ಹುಸೇನ್ ಎಂಬುವ ವ್ಯಕ್ತಿ ಬೆಂಗಳೂರಿನ ಆರ್​​ಟಿ ನಗರದಲ್ಲಿರುವ ಮೊಹಮ್ಮದ್ ಆಸೀಫ್ ಹಬೀಬ್ ಎಂಬುವರ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದನು.

ನೂರುಲ್ಲಾ ಹುಸೇನ್​​ನನ್ನು ಮಾಲಿಕ ಮೊಹಮ್ಮದ್ ಆಸೀಫ್ ಹಬೀಬ್ ಮನೆ ಮಗನಂತೆ ನೋಡಿಕೊಂಡಿಕೊಳ್ಳುತ್ತಿದ್ದರು. ಆದರೆ ಉಂಡ ಮನೆಗೆ ಎರಡು ಬಗೆಯುವಂತೆ ನೂರುಲ್ಲಾ ಹುಸೇನ್ ಮಾಲೀಕನಿಂದ ಹಣ ಲಪಟಾಯಿಸಲು ಯೋಜನೆ ರೂಪಿಸಿದ್ದನು. ತನ್ನ ಸ್ನೇಹಿತರಾದ ಅಬೂಬಕರ್ ಹಾಗು ಆಲಿ ರೇಝಾ ಎಂಬುವರ ಜೊತೆ ಸೇರಿ ಕಿಡ್ನಾಪ್ ಪ್ಲಾನ್ ಮಾಡಿದ್ದನು.

ಪ್ಲಾನ್​​ನಂತೆ ಆರೋಪಿಗಳು ಕ್ಯಾಬ್ ಮಾಡಿಕೊಂಡು ಮಂಡ್ಯಗೆ ಹೋಗಿದ್ದರು. ನಂತರ ಮಾಲೀಕ ಹಬೀಬ್​ ಅವರಿಗೆ ಕರೆ ಮಾಡಿ ನನ್ನನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿ ನೂರುಲ್ಲಾ ಹುಸೇನ್ ಹೇಳಿದ್ದನು. ಇದನ್ನು ಕೇಳಿ ಮಾಲಿಕ ಮೊಹಮ್ಮದ್ ಆಸೀಫ್ ಹಬೀಬ್ ಗಾಭರಿಯಾಗಿದ್ದರು. ಬಳಿಕ ನೂರುಲ್ಲಾ ಹುಸೇನ್ “ನನ್ನನ್ನು ಕಿಡ್ನಾಪ್​ ಮಾಡಿದವರು ಎರಡು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ” ಎಂದು ಮಾಲಿಕ ಮೊಹಮ್ಮದ್ ಆಸೀಫ್ ಹಬೀಬ್​ಗೆ ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಬಾಲ ಬಿಚ್ಚಿದ ರೌಡಿಗಳು; ಉದ್ಯಮಿ ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ, ಬೆದರಿಕೆ ಆಡಿಯೋ ಇಲ್ಲಿದೆ

ಮನೆ ಮಗನಂತಿದ್ದವನಿಗೆ ತೊಂದರೆಯಾಗಿದೆ ಎಂದು ಮಾಲಿಕ ಮೊಹಮ್ಮದ್ ಆಸೀಫ್ ಹಬೀಬ್ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ ಎರಡು ಲಕ್ಷ ರೂ. ಹಣ ಕೊಡಲು ಮುಂದಾಗಿದ್ದರು. ಈ ವೇಳೆ ಆರೋಪಿ ನೂರುಲ್ಲಾ ತನ್ನ ಅಕೌಂಟ್ ನಂಬರ್​ಗೆ ಹಣ ಹಾಕಲು ಹೇಳಿದ್ದಾನೆ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಗಳ ಮೊಬೈಲ್ ಟ್ರ್ಯಾಕ್ ಮಾಡಿದ್ದು, ಮಂಡ್ಯದಲ್ಲಿರುವುದು ಪತ್ತೆಯಾಗಿದೆ.

ಕೂಡಲೇ ಆಕ್ಟಿವ್​ ಆದ ಆರ್​ಟಿ ನಗರ ಪೊಲೀಸರು, ಮಂಡ್ಯ ಪೊಲೀಸರ ಸಹಾಯದಿಂದ ಮೂಲಕ ಮೂವರನ್ನ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ. ಇಲ್ಲಿ ವಿಚಾರಣೆ ನಡೆಸಿದಾಗಿ, ನೂರುಲ್ಲಾ ಹುಸೇನ್ ಖತರ್ನಾಕ್ ಪ್ಲಾನ್ ಬಯಲಾಗಿದೆ. ಆರೋಪಿಗಳು ಹಣ ಪಡೆದು ಬಿಹಾರಕ್ಕೆ ಎಸ್ಕೇಪ್ ಆಗಲು ಸಂಚು ರೂಪಿಸಿದ್ದರು. ಈ ಸಂಬಂಧ ಆರ್​ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ