AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶ್ವಾನ ಬೊಗಳಿದ್ದಕ್ಕೆ ರೊಚ್ಚಿಗೆದ್ದ ವ್ಯಕ್ತಿ, ನಾಯಿ ಮಾಲೀಕನೆಂದು ಬೇರೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ

ನಾಯಿ ಮಾಲೀಕ ತನ್ನ ಮೇಲೆ ಶ್ವಾನವನ್ನು ಛೂಬಿಟ್ಟಿದ್ದಾನೆಂದು ತಪ್ಪಾಗಿ ಭಾವಿಸಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ಓರ್ವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಮಲ್ಲೇಶ್ವರಂನ 7ನೇ ಕ್ರಾಸ್‌ನಲ್ಲಿ ನಡೆದಿದೆ. ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸ್​ ಎಚ್‌ ರಾಜು ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಶ್ವಾನ ಬೊಗಳಿದ್ದಕ್ಕೆ ರೊಚ್ಚಿಗೆದ್ದ ವ್ಯಕ್ತಿ, ನಾಯಿ ಮಾಲೀಕನೆಂದು ಬೇರೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Aug 27, 2023 | 6:59 PM

Share

ಬೆಂಗಳೂರು, ಆಗಸ್ಟ್​ 27: ನಾಯಿ ಮಾಲೀಕ ತನ್ನ ಮೇಲೆ ಶ್ವಾನವನ್ನು (dog barked) ಛೂಬಿಟ್ಟಿದ್ದಾನೆಂದು ತಪ್ಪಾಗಿ ಭಾವಿಸಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ಓರ್ವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಮಲ್ಲೇಶ್ವರಂನ 7ನೇ ಕ್ರಾಸ್‌ನಲ್ಲಿ ನಡೆದಿದೆ. ರಾಜಾಜಿನಗರ ನಿವಾಸಿ ಬಾಲಸುಬ್ರಹ್ಮಣ್ಯ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಹಲ್ಲೆ ಮಾಡಿದ ದಿನಗೂಲಿ ಕೆಲಸಗಾರ ಎಚ್ ರಾಜು ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.  ಮಾಹಿತಿ ಪ್ರಕಾರ ಎಚ್ ರಾಜು ಆಗಸ್ಟ್ 21 ರಂದು ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ನಾಯಿಯೊಂದು ಬೊಗಳಿದೆ. ಆಗ ಎದುರಿನಿಂದ ಬಂದ ವ್ಯಕ್ತಿಯನ್ನು ನೋಡಿದ ರಾಜು ಇವರೇ ಸಾಕು ನಾಯಿಯ ಮಾಲೀಕ ಎಂದು ತಪ್ಪಾಗಿ ಭಾವಿಸಿ, ಕೋಪಗೊಂಡು ಚಾಕುವಿನಿಂದ ಇರಿದಿದ್ದಾನೆ.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ಬಾಲಸುಬ್ರಮಣ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತಾಗಿ ಬಾಲಸುಬ್ರಮಣ್ಯ ಮಾತನಾಡಿದ್ದು, ಆತ ನನ್ನ ಕಡೆಗೆ ಬರಲು ಆರಂಭಿಸಿದ್ದು, ಜೊತೆಗೆ ನನ್ನನ್ನು ನಿಂದಿಸಿದ. ಆತ ಏನು ಹೇಳುತ್ತಿದ್ದಾನೆಂದು ನನಗೆ ಅರ್ಥವಾಗಿಲ್ಲ. ನಾನು ವಿವರಿಸುವ ಮೊದಲೇ ನನ್ನ ಮೇಲೆ ಚಾಕುವಿನಿಂದ ಇರಿಯಲಾಗಿತ್ತು.

ಇದನ್ನೂ ಓದಿ: ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡ್ತಿದ್ದ ಮಗ; ಕಾಟ ತಾಳಲಾರದೇ ಕೊಲೆ ಮಾಡಿಸಿದ ತಂದೆ

ನನ್ನ ಕೈ ಮತ್ತು ಬೆರಳುಗಳಿಗೂ ಚಾಕುವಿನಿಂದ ಇರಿದಿದ್ದಾನೆ. ನಾನು ನೋವಿನಿಂದ ನರಳಾಡಲು  ಪ್ರಾರಂಭಿಸಿದೆ. ಬಳಿಕ ಕೆಲವು ದಾರಿಹೋಕರು ನನ್ನನ್ನು ಆಸ್ಪತ್ರೆಗೆ ಸೇರಿಸಿದರು ಎಂದು ಬಾಲಸುಬ್ರಮಣ್ಯ ಹೇಳಿರುವುದಾಗಿ ಹಿಂದೂಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಇದನ್ನೂ ಓದಿ: ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸ್​ ಎಚ್‌ ರಾಜು ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಚ್ಚುನಾಯಿ ಹಾವಳಿ: ಪ್ರವಾಸಿಗರು ಆಕ್ರೋಶ

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನ ಬೃಂದಾವನದಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಳವಾಗಿದ್ದು, ಬೃಂದಾವನ ವೀಕ್ಷಣೆಗೆ ಬಂದಿದ್ದ ಐವರು ಪ್ರವಾಸಿಗರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿ ಕಚ್ಚಿದೆ. ಹುಚ್ಚು ನಾಯಿ ದಾಳಿಗೆ ಸಿಲುಕಿದ ಐವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಬೃಂದಾವನ ಅಧಿಕಾರಿಗಳ ವಿರುದ್ದ ಪ್ರವಾಸಿಗರು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ