AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತ ಶಂಕೆ

ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಗರದ ರೈಲ್ವೆ ಫ್ಲೈಓವರ್​ ಬಳಿ ಘಟನೆ ನಡೆದಿದೆ.

Bengaluru: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತ ಶಂಕೆ
ಪ್ರಾತಿನಿಧಿಕ ಚಿತ್ರImage Credit source: indiatoday.in
ಗಂಗಾಧರ​ ಬ. ಸಾಬೋಜಿ
|

Updated on:Apr 03, 2023 | 6:20 PM

Share

ಬೆಂಗಳೂರು: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್ (railway flyover) ​ನಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಗರದ ರೈಲ್ವೆ ಫ್ಲೈಓವರ್​ ಬಳಿ ಘಟನೆ ನಡೆದಿದೆ. ಶ್ರೀರಾಂಪುರದ ಸ್ವತಂತ್ರಪಾಳ್ಯದ ನಿವಾಸಿ ಅಬ್ರಹಾಂ(30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಖಾಸಗಿ ಅಪಾರ್ಟ್​ಮೆಂಟ್​ ಬಳಿ ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳ ಜೊತೆ ಅಬ್ರಹಾಂ ಕೂಡ ಇದ್ದ ಎನ್ನಲಾಗಿದೆ. ಗಾಂಜಾ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಹಿಡಿದುಕೊಂಡಿದ್ದು, ತನನ್ನು ಪೊಲೀಸರು ಹಿಂಬಾಲಿಸುತ್ತಿರುವ ಭ್ರಮೆಯಲ್ಲಿ ಓಡಿದ್ದಾನೆ. ಗಾಂಜಾ ಮತ್ತಿನಲ್ಲಿ ಓಡುವಾಗ ಬಿದ್ದು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಸದ್ಯ ಅಬ್ರಹಾಂ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಮಗನ ಮೇಲೆ ಪೊಲೀಸರೇ ಹಲ್ಲೆ ಮಾಡಿ ಕೊಂದಿದ್ದಾರೆ: ಅಬ್ರಹಾಂ ತಂದೆ ಶಂಕರ್​ ಆರೋಪ

ಘಟನೆ ಕುರಿತಾಗಿ ಅಬ್ರಹಾಂ ತಂದೆ ಶಂಕರ್​ ಮಾತನಾಡಿದ್ದು, ನನ್ನ ಮಗನ ಮೇಲೆ ಪೊಲೀಸರೇ ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. ನನ್ನ ಮಗ ಅಬ್ರಹಾಂಗೆ ಈ ಹಿಂದೆ ಗಾಂಜಾ ಸೇದುವ ಚಟವಿತ್ತು. ಈಗ ಎಲ್ಲಾ ಚಟಗಳನ್ನು ಬಿಟ್ಟು  ಒಳ್ಳೆಯವನಾಗಿದ್ದ. ಇಂದು ಮಧ್ಯಾಹ್ನ ಊಟ ಮಾಡಲು ಮನೆಗೆ ಬಂದಿದ್ದು, ಊಟದ ನಂತರ ಕೆಲಸ ನಿಮಿತ್ತ ಹೊರಗೆ ಹೋಗಿದ್ದ. ಈ ವೇಳೆ ಅಬ್ರಹಾಂನನ್ನು ಹಿಡಿದು ಪೊಲೀಸರು ಹಲ್ಲೆ ಮಾಡಿದ್ದಾರೆ. ಆತನ ಶವದ ಮೇಲೆ ಪೊಲೀಸರ ಬೂಟಿನ ಗುರುತುಗಳಿವೆ. ನನ್ನ ಮಗನ ಸಾವಿಗೆ ನ್ಯಾಯಬೇಕೆಂದು ಶಂಕರ್​ ಪಟ್ಟುಹಿಡಿದಿದ್ದಾರೆ.​

ಬೆಂಗಳೂರಿನಲ್ಲಿ ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ, ಅಜ್ಜಿಯ ಎರಡೂ ಕಾಲು ಕಟ್

ನಿನ್ನೆ ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದರು. ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರು. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿದ್ದವು.

ಇದನ್ನೂ ಓದಿ: Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿತ್ತು.

ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಕೊಲೆ

ಅದೇ ರೀತಿಯಾಗಿ ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್​ನಲ್ಲಿ ನಡೆದಿದೆ. ಸತೀಶ್(22) ಕೊಲೆಯಾದ ಯುವಕ. ನಿನ್ನೆ (ಏ.02)ರ ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್​ನ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Music Volume ​ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿಯ ಸಹೋದರನ ಮೇಲೆ ಟೆಕ್ಕಿಗಳಿಂದ ಹಲ್ಲೆ

ರಸ್ತೆ ಅಪಘಾತ ತಂದೆ, ಮಗಳು ಸಾವು

ರಾಮನಗರ: ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ತಂದೆ, ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸಾಬರಪಾಳ್ಯ ಬಳಿ ನಡೆದಿದೆ. ಕಲ್ಯಾ ಗ್ರಾಮದ ನಿವಾಸಿ ಯೋಗೇಶ್(47), ಪುತ್ರಿ ಹರ್ಷಿತಾ(14) ಮೃತ ದುರ್ದೈವಿಗಳು. ಯೋಗೇಶ್ ಮಗಳನ್ನು ಬೈಕ್​ನಲ್ಲಿ ಶಾಲೆಗೆ ಬಿಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Mon, 3 April 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ