Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ

ಅಕ್ರಮ ಸಂಬಂಧ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 9:55 AM

ಬೆಂಗಳೂರು: ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೋಲ್ಕತ್ತಾ ಮೂಲದ ಶೇಕ್ ಸೊಹೇಲ್​ ಪತ್ನಿಯ ಅಕ್ರಮ ಸಂಬಂಧ ವಿಚಾರ ತಿಳಿದು ಆರು ವರ್ಷಗಳ ಹಿಂದೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಿದ್ದ. ಆದರೆ ಮತ್ತೆ ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ಇರಲು ಬೆಂಗಳೂರಿಗೆ ಬಂದಿದ್ದಳು. ಇದೀಗ ಆರು ವರ್ಷಗಳ ಬಳಿಕ ಬೆಂಗಳೂರಿಗೆ ಬಂದಿದ್ದ ಪತಿ ಶೇಕ್​​ ಸೊಹೆಲ್. ನಿನ್ನೆ ರಾತ್ರಿ ಮಾತನಾಡಬೇಕೆಂದು ತಬ್ಸಿಮ್ ಬೇಬಿಯನ್ನ ಭೇಟಿಯಾಗಿದ್ದನು. ​ಈ ವೇಳೆ ಮಾತಿಗೆ ಮಾತು ಬೆಳೆದು ತಬ್ಸಿಮ್ ಬೇಬಿಯನ್ನ ಕೊಲೆಗೈದಿದ್ದಾನೆ. ಬಳಿಕ ತಬ್ಸಿಮ್ ಬೇಬಿ ಹಾಗೂ ಪ್ರಿಯಕರ ನಯೀಮ್​ಗೆ ಸೇರಿದ ಎರಡೂವರೆ ವರ್ಷದ ಮಗುವಿಗೂ ಗಾಯಗೊಳಿಸಿದ್ದಾನೆ. ಸದ್ಯ ಆರೋಪಿ ಸೊಹೇಲ್​ನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ ಬಾಣಂತಿಯ ಭೀಕರ ಹತ್ಯೆ; ನಿಧಿಗಾಗಿ ನಡೆಯಿತಾ ಕೊಲೆ?

ಕೊಪ್ಪಳ: ತಡರಾತ್ರಿ ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಎಂಬುವವರನ್ನ ಕೊಲೆ ಮಾಡಿರುವ ಘಟನೆ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ನಿಧಿಗಾಗಿ ಕೊಲೆ‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸ್ವಲ್ಪ ದೂರದರಲ್ಲೇ ಬೆಂಕಿ ಹಚ್ಚಿ ನೇತ್ರಾವತಿ ಕೊಲೆ ಎಂಬಾಕೆಯನ್ನ ಕೊಲೆ ಮಾಡಿದ್ದು, ಸ್ಥಳಕ್ಕೆ ಕೊಪ್ಪಳ‌ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಜಯಪುರ: ಭೀಮಾತೀರದ ಅಕ್ಕಳ ಭೀಭತ್ಸ ಕೃತ್ಯ: ಕೊಲೆ ಹಿಂದೆ ಇದೆ ಎರಡು ಪ್ರೇಮ ಕಹಾನಿ

ಲಾರಿ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್​ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ನಗರದ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿ ಲಾರಿ, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಉಮರ್ ಬುಡನಸಾಬ್ ಲಾಟಿ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 21 March 23

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ