AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ

ಅಕ್ರಮ ಸಂಬಂಧ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 9:55 AM

Share

ಬೆಂಗಳೂರು: ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೋಲ್ಕತ್ತಾ ಮೂಲದ ಶೇಕ್ ಸೊಹೇಲ್​ ಪತ್ನಿಯ ಅಕ್ರಮ ಸಂಬಂಧ ವಿಚಾರ ತಿಳಿದು ಆರು ವರ್ಷಗಳ ಹಿಂದೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಿದ್ದ. ಆದರೆ ಮತ್ತೆ ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ಇರಲು ಬೆಂಗಳೂರಿಗೆ ಬಂದಿದ್ದಳು. ಇದೀಗ ಆರು ವರ್ಷಗಳ ಬಳಿಕ ಬೆಂಗಳೂರಿಗೆ ಬಂದಿದ್ದ ಪತಿ ಶೇಕ್​​ ಸೊಹೆಲ್. ನಿನ್ನೆ ರಾತ್ರಿ ಮಾತನಾಡಬೇಕೆಂದು ತಬ್ಸಿಮ್ ಬೇಬಿಯನ್ನ ಭೇಟಿಯಾಗಿದ್ದನು. ​ಈ ವೇಳೆ ಮಾತಿಗೆ ಮಾತು ಬೆಳೆದು ತಬ್ಸಿಮ್ ಬೇಬಿಯನ್ನ ಕೊಲೆಗೈದಿದ್ದಾನೆ. ಬಳಿಕ ತಬ್ಸಿಮ್ ಬೇಬಿ ಹಾಗೂ ಪ್ರಿಯಕರ ನಯೀಮ್​ಗೆ ಸೇರಿದ ಎರಡೂವರೆ ವರ್ಷದ ಮಗುವಿಗೂ ಗಾಯಗೊಳಿಸಿದ್ದಾನೆ. ಸದ್ಯ ಆರೋಪಿ ಸೊಹೇಲ್​ನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ ಬಾಣಂತಿಯ ಭೀಕರ ಹತ್ಯೆ; ನಿಧಿಗಾಗಿ ನಡೆಯಿತಾ ಕೊಲೆ?

ಕೊಪ್ಪಳ: ತಡರಾತ್ರಿ ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಎಂಬುವವರನ್ನ ಕೊಲೆ ಮಾಡಿರುವ ಘಟನೆ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ನಿಧಿಗಾಗಿ ಕೊಲೆ‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸ್ವಲ್ಪ ದೂರದರಲ್ಲೇ ಬೆಂಕಿ ಹಚ್ಚಿ ನೇತ್ರಾವತಿ ಕೊಲೆ ಎಂಬಾಕೆಯನ್ನ ಕೊಲೆ ಮಾಡಿದ್ದು, ಸ್ಥಳಕ್ಕೆ ಕೊಪ್ಪಳ‌ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಜಯಪುರ: ಭೀಮಾತೀರದ ಅಕ್ಕಳ ಭೀಭತ್ಸ ಕೃತ್ಯ: ಕೊಲೆ ಹಿಂದೆ ಇದೆ ಎರಡು ಪ್ರೇಮ ಕಹಾನಿ

ಲಾರಿ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್​ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ನಗರದ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿ ಲಾರಿ, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಉಮರ್ ಬುಡನಸಾಬ್ ಲಾಟಿ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 21 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ