AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಗಲಗುಂಟೆ ಪೊಲೀಸ್​​ರಿಂದ ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ

ರಾಜ್ಯದ ಮೂಲೆ ಮೂಲೆಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್​ನ್ನು ಬಾಗಲಗುಂಟೆ ಪೊಲೀಸ್​​ರು ಬಂಧಿಸಿದ್ದಾರೆ.

ಬೆಂಗಳೂರು: ಬಾಗಲಗುಂಟೆ ಪೊಲೀಸ್​​ರಿಂದ ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 10, 2022 | 2:55 PM

Share

ಬೆಂಗಳೂರು: ರಾಜ್ಯದ ಮೂಲೆ ಮೂಲೆಗಳಲ್ಲಿ ಸರಗಳ್ಳತನ (Chain snatching) ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್​ನ್ನು ಬಾಗಲಗುಂಟೆ ಪೊಲೀಸ್​​ರು ಬಂಧಿಸಿದ್ದಾರೆ. ಅಚ್ಯತ್ ಕುಮಾರ್ ಅಲಿಯಾಸ್ ಗಣಿ, ಪ್ರಸನ್ನ, ಸಿದ್ದರಾಜು ಬಂಧಿತ ಆರೋಪಿಗಳು. ಗ್ಯಾಂಗ್​​ ಹಲವು ಬಾರಿ ಜೈಲು ವಾಸ ಅನುಭವಿಸಿದ್ದಾರೆ. ಆದರೂ ತಮ್ಮ ಚಾಳಿ ಬಿಡದೆ ಸರಗಳ್ಳತನದಲ್ಲಿ ತೊಡಗಿಸಿಕೊಂಡಿದ್ದರು.ಈ ಗ್ಯಾಂಗ್ ನಾಯಕ ಮೇಲೆ 157 ಪ್ರಕರಣಗಳು ದಾಖಲಾಗಿವೆ.

ಗ್ಯಾಂಗ್​ ಬಾಗಲಗುಂಟೆ, ನಂದಿನಿಲೇಔಟ್, ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿತ್ತು. ಸುಮಾರು 30 ಸರಗಳ್ಳತನ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಗ್ಯಾಂಗ್​ನ್ನು ಬೆನ್ನಟ್ಟಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಾಗಲಗುಂಟೆ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

 ಸ್ವಿಗ್ಗಿ ಡಿಲವರಿ ಬೈಕ್​ಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ

ನಿನ್ನೆ (ಅ. 9) ರಾತ್ರಿ 10.30 ರ ಸುಮಾರಿಗೆ ನಗರದ ಸರ್ಜಾಪುರ ರಸ್ತೆಯಲ್ಲಿ ವೇಗವಾಗಿ ಬಂದ ಕಿಯಾ ಸೊನೆಟ್ ಕಾರು, ಹಿಂಬದಿಯಿಂದ ಸ್ವಿಗ್ಗಿ ಡಿಲವರಿ ಮಾಡುವ ಯವಕನ ಬೈಕ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಸೋನಿ ( 24), ಆಯುಸ್ ಸಿಂಗ್ (21) ಯುವಕರಿಗೆ ಗಾಯಗಳಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರಿನ ಚಕ್ರಕ್ಕೆ ಬೈಕ್ ಸಿಲುಕಿಕೊಂಡಿದೆ. ಕಿಯಾ ಕಾರು ಮತ್ತೆ ಮತ್ತೊಂದು ಕಾರಿಗೂ ಹಿಂಬದಿಯಿಂದ ಡಿಕ್ಕಿಯಾಗಿದೆ. ಹೆಚ್ಎಸ್ಆರ್ ಲೇಔಟ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೃದಯಾಘಾತದಿಂದ ಪ್ರವಾಸಿ ಸಾವು

ಕೊಡಗು: ಹೃದಯಾಘಾತದಿಂದ ಪ್ರವಾಸಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಟಿಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಅಭಿಷೇಕ್ (31) ಮೃತ ದುರ್ದೈವಿ. ಬೆಂಗಳೂರಿನ ಸಿನರ್ಜಿ ಟೆಕ್ನಾಲಜಿಸ್ ಸಂಸ್ಥೆಯ ಉದ್ಯೋಗಿಯಾಗಿದ್ದ ಅಭಿಷೇಕ್, ಸಹೋದ್ಯೋಗಿಗಳೊಂದಿಗೆ ಕೊಡಗು ಪ್ರವಾಸ ಕೈಗೊಂಡಿದ್ದರು. ಪ್ರವಾಸಿಗರು ಟಿಶೆಟ್ಟಿಗೇರಿ ಗ್ರಾಮದ ಹೋಂಸ್ಟೇ ಒಂದರಲ್ಲಿ ತಂಗಿದ್ದರು. ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​