AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜಾಜ್ ಫೈನಾನ್ಸ್ ಕಾರ್ಡ್ ಗ್ರಾಹಕರೇ.. ನಿಮ್ಮ ಕಾರ್ಡ್​ ಬಳಸಿ ಶಾಪಿಂಗ್ ಮಾಡೋ ವಂಚಕರಿದ್ದಾರೆ ಎಚ್ಚರ

ನೀವು ಬಜಾಜ್ ಫೈನಾನ್ಸ್ ಕಾರ್ಡ್ ಹೊಂದಿದ್ದೀರಾ? ನಿಮ್ಮ ಕಾರ್ಡ್ ಹಳೆಯದಾಗಿದೆ ಅಂತ ಸುಮ್ಮನಾಗಿದ್ದೀರಾ? ಹಾಗಿದ್ದರೆ ಇರಲಿ ಎಚ್ಚರ...

ಬಜಾಜ್ ಫೈನಾನ್ಸ್ ಕಾರ್ಡ್ ಗ್ರಾಹಕರೇ.. ನಿಮ್ಮ ಕಾರ್ಡ್​ ಬಳಸಿ ಶಾಪಿಂಗ್ ಮಾಡೋ ವಂಚಕರಿದ್ದಾರೆ ಎಚ್ಚರ
ಬಜಾಜ್ ಫಿನಾನ್ಸ್ ಗ್ರಾಹಕರ ಕಾರ್ಡ್ ದುರ್ಬಳಕೆ ಮಾಡಿ ಹಣ ಸಂಪಾದಿಸುತ್ತಿದ್ದ ವಂಚಕ ಅರೆಸ್ಟ್
TV9 Web
| Edited By: |

Updated on:Jan 05, 2023 | 8:44 AM

Share

ಬೆಂಗಳೂರು: ನೀವು ಬಜಾಜ್ ಫೈನಾನ್ಸ್ ಕಾರ್ಡ್ (Bajaj Finance Card) ಹೊಂದಿದ್ದು ಕಾರ್ಡ್ ಹಳೆಯದಾಗಿದೆ ಅಂತ ಸುಮ್ಮಾಗಿದ್ದರೆ ಈ ಸುದ್ದಿಯನ್ನೊಮ್ಮೆ ಸರಿಯಾಗಿ ಓದಿಬಿಡಿ. ಇಲ್ಲವಾದರೆ ನಿಮ್ಮ ಕಾರ್ಡ್ ಅನ್ನು ವಂಚಕರು ದುರ್ಬಳಕೆ ಮಾಡುತ್ತಾರೆ ಇರಲಿ ಎಚ್ಚರ. ಹೌದು, ಬಜಾಜ್ ಫೈನಾನ್ಸ್ ಕಾರ್ಡ್ ಕೆಲಸಗಾರನಿಂದಲೇ ಇಂತಹ ಒಂದು ದೋಖಾ ನಡೆಯುತ್ತಿದೆ. ಹಳೆಯ ಬಜಾಜ್ ಫೈನಾನ್ಸ್ ಗ್ರಾಹಕರನ್ನ ಟಾರ್ಗೇಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ನಗರದ ಕೇಂದ್ರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಬಜಾಜ್ ಪೈನಾನ್ಸ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡ ವಿಕಾಸ್, ಗ್ರಾಹಕರಿಗೆ ವಂಚನೆ ಎಸಗಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾನೆ. ಅದರಂತೆ ಹಳೆಯ ಬಜಾಜ್ ಫೈನಾನ್ಸ್ ಗ್ರಾಹಕರನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಈತ, ಅಂತಹ ಗ್ರಾಹಕರ ದಾಖಲೆ ನೀಡಿ ಹೊಸ ಸಿಮ್ ಖರೀದಿ ಮಾಡಿಕೊಳ್ಳುತ್ತಿದ್ದನು. ಬಳಿಕ ಅದೇ ಸಿಮ್ ಕಾರ್ಡ್ ಬಳಸಿ ಬಜಾಜ್ ಕಾರ್ಡ್ ಖರೀದಿ ಮಾಡುತ್ತಿದ್ದನು.

ಇದನ್ನೂ ಓದಿ: ಕಲಬುರಗಿಯಲ್ಲಿ ಸಿನಿಮಾ ಶೈಲಿಯಲ್ಲಿ ನಡೆಯಿತು ಬಾಲಕನ ಅಪಹರಣ, ಸಿಂಗಂ ಸ್ಟೈಲ್​ನಲ್ಲಿ ಪೊಲೀಸರ ಕಾರ್ಯಾಚರಣೆ

ಗ್ರಾಹಕರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಬಜಾಜ್ ಕಂಪನಿಯ ಕಾರ್ಡ್ ಖರೀದಿಸಿದ ನಂತರ ಅಂತಹ ಕಾರ್ಡ್ ಮೂಲಕ ಅಮೇಜಾನ್​ನಲ್ಲಿ ಬೆಲೆಬಾಳುವ ಮೊಬೈಲ್ ಖರೀದಿ ಮಾಡುತ್ತಿದ್ದನು. ಹೀಗೆ ಖರೀದಿಸಿದ ಮೊಬೈಲ್​ಗಳನ್ನು ಓಎಲ್​ಎಕ್ಸ್​​ನಲ್ಲಿ ಮಾರಾಟ ಮಾಡುತ್ತಿದ್ದನು. ಇದೇ ರೀತಿ ಮೊಬೈಲ್​ಗಳನ್ನು ಮಾರಾಟ ಮಾಡಿದ ಆರೋಪಿ ವಿಕಾಸ್, 14 ಲಕ್ಷ ಹಣ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: U.T.Khader: ರಾಹುಲ್‌ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚನೆಗೆ ಯತ್ನ: ಸೈಬರ್ ಕ್ರೈಂಗೆ ದೂರು ನೀಡಿದ U.T.ಖಾದರ್‌

ಸದ್ಯ ಗ್ರಾಹಕರಿಗೆ ಆಗುತ್ತಿದ್ದ ವಂಚನೆ ಬಗ್ಗೆ ಬಜಾಜ್ ಕಂಪನಿಯು ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದೆ. ದೂರಿನ ಅನ್ವಯ ತನಿಖೆಗೆ ಇಳಿದ ಪೊಲೀಸರು, ವಿಕಾಸ್​ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪುಣೆಯ ವಿಮಂತಲ ಠಾಣೆಯಲ್ಲೂ ಈತನ ವಿರುದ್ಧ ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ತಿಳಿದುಬಂದಿದೆ. ಅಲ್ಲೂ ಇದೇ ರೀತಿ ವಂಚಿಸಿದ್ದ ಆರೋಪಿ ವಿಕಾಸ್, ಬೆಂಗಳೂರಿನಲ್ಲಿ ಬಜಾಜ್ ಪೈನಾನ್ಸ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಇಲ್ಲೂ ವಂಚನೆ ಎಸಗುತ್ತಿದ್ದನು. ಸದ್ಯ ಆರೋಪಿಯನ್ನು ಪೊಲೀಸರು ಮತ್ತಷ್ಟು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Thu, 5 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ