AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಕೊಲೆ: ತನಿಖೆಯಲ್ಲಿ ಪರಸ್ತ್ರೀಯೊಂದಿಗಿನ ಲವ್ವಿಡವ್ವಿ ಬಯಲು

ಬೆಂಗಳೂರಿನ ಬಂಡೆಪಾಳ್ಯದಲ್ಲಿ ಉತ್ತರ ಪ್ರದೇಶ ಮೂಲದ ಶೈಲೇಂದ್ರ ಎಂಬಾತನ ಕೊಲೆಯಾಗಿದೆ. ಕೊಲೆ ಆರೋಪಿಗಳಾದ ಸತೀಶ್ ಮತ್ತು ಅರುಣ್ ಯಾದವ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಬೀರೇಂದ್ರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷಾ ವರದಿಯು ಕೊಲೆ ಹೇಗೆ ನಡೆದಿದೆ? ಎಂಬುವುದನ್ನು ಬಯಲು ಮಾಡಿದೆ.

ಸ್ನೇಹಿತನ ಕೊಲೆ: ತನಿಖೆಯಲ್ಲಿ ಪರಸ್ತ್ರೀಯೊಂದಿಗಿನ ಲವ್ವಿಡವ್ವಿ ಬಯಲು
ಬಂಡೆಪಾಳ್ಯ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on: Jun 24, 2025 | 10:48 PM

Share

ಬೆಂಗಳೂರು, ಜೂನ್​ 24: ಬೆಂಗಳೂರಿನ (Bengaluru) ಬಂಡೆಪಾಳ್ಯದ ಅಂಬೇಡ್ಕರ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ ಸತೀಶ್ ಯಾದವ್ ಎಂಬಾತ ಕಳೆದ ಗುರುವಾರ ಮಧ್ಯರಾತ್ರಿ ಪೊಲೀಸರಿಗೆ ಕರೆ ಮಾಡಿ ತನ್ನ ಸ್ನೇಹಿತ ಶೈಲೆಂದ್ರ ಯಾದವ್ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣವೇ ಬಂಡೇಪಾಳ್ಯ ಪೊಲೀಸರು (Bandepalya Police) ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹದ ಮೈ ಮೇಲೆ ಯಾವ ಗಾಯದ ಗುರುತು ಇಲ್ಲದ್ದರಿಂದ ಯುಡಿಆರ್ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದರು. ಆದರೆ, ಸೋಮವಾರ (ಜೂ.23) ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಶೈಲೆಂದ್ರ ಸಾವಿನ ಅಸಲಿ ಕಹಾನಿ ಬಯಲಾಗಿದೆ.

ಸತೀಶ್ ಯಾದವ್​ ಬಂಡೆಪಾಳ್ಯದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದನು. ಈತನ ಸ್ನೇಹಿತ ಬೀರೇಂದ್ರ ಯಾದವ್ ಎಂಬಾತನಿಗೆ ಓರ್ವ ಮಹಿಳೆ ಜೊತೆ ಅಕ್ರಮ ಸಂಬಂಧ ಇತ್ತು. ಈ ಅಕ್ರಮ ಸಂಬಂಧದ ಬಗ್ಗೆ ಶೈಲೆಂದ್ರ ಎಲ್ಲರಿಗೂ ಹೇಳಿಕೊಂಡು ಬರುತ್ತಿದ್ದನು. ಹೀಗಾಗಿ, ಶೈಲೆಂದ್ರನ ಕಥೆ ಮುಗಿಸಬೇಕು ಅಂತ ನಿರ್ಧಾರ ಮಾಡಿದ ಬೀರೇಂದ್ರ, ಕಳೆದ ಬುಧವಾರ ರಾತ್ರಿ ತನ್ನ ಸ್ನೇಹಿತ ಸತೀಶ್ ಯಾದವ್ ಮನೆಗೆ ಶೈಲೇಂದ್ರನನ್ನು ಕರೆಸಿಕೊಂಡಿದ್ದಾನೆ.‌ ತನ್ನ ಸ್ನೇಹಿತರಾದ ಸತೀಶ್ ಮತ್ತು ಅರುಣ್ ಯಾದವ್ ಜೊತೆ ಎಣ್ಣೆ ಪಾರ್ಟಿ ಮಾಡಿದ್ದಾನೆ. ಇದೇ ಎಣ್ಣೆ ಮತ್ತಲ್ಲಿ ಶೈಲೆಂದ್ರ ಮೇಲೆ ಕೈಯಿಂದ ಹಲ್ಲೆ‌ ಮಾಡಿ ಹತ್ಯೆ ಮಾಡಿದ್ದಾನೆ.

ಶೈಲೆಂದ್ರ ಉಸಿರು‌ ನಿಂತಿದ್ದರಿಂದ ಗಾಬರಿಯಾದ ಬೀರೆಂದ್ರ ಮತ್ತು ಅರುಣ್ ಮನೆಯಿಂದ ಪರಾರಿಯಾಗಿದ್ದಾರೆ. ಆದರೆ ಮೃತದೇಹವನ್ನು ಏನ್ ಮಾಡಬೇಕು ಅಂತ ಗೊತ್ತಾಗದ ಸತೀಶ್ 24 ಗಂಟೆ ಮನೆಯಲ್ಲೇ ಶವವನ್ನು ಇಟ್ಟುಕೊಂಡಿದ್ದನು. ಯಾವಾಗ ಮೃತದೇಹ ವಾಸನೆ ಬರಲು ಶುರುವಾಯಿತು ಮನೆಯ ಮಾಲೀಕರಿಗೆ ವಿಚಾರ ಮುಟ್ಟಿಸಿದ್ದಾನೆ. ಬಳಿಕ ಪೊಲೀಸರಿಗೆ ಕರೆ ಮಾಡಿದ್ದಾನೆ.

ಇದನ್ನೂ ಓದಿ
Image
ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!
Image
ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ
Image
ಹಾವೇರಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಕೊಲೆ
Image
ಅಂಗಡಿಗೆ ತೆರಳುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ: ಮನೆ ಬಳಿ ಹೋಗಿ ಗಲಾಟೆ

ಶೈಲೆಂದ್ರನ ಸಾವು ಆಕಸ್ಮಿಕ ಅಂತ ಹೇಳಿ ಪೊಲೀಸರನ್ನು ಯಾಮಾರಿಸಲು‌ ನೋಡಿದ್ದಾನೆ. ಆದರೆ, ಮರಣೋತ್ತರ ಪರೀಕ್ಷೆ ವೇಳೆ ಶೈಲೇಂದ್ರನ‌ ಎದೆ ಮೇಲೆ ಬಲವಾದ ಏಟು ಬಿದ್ದಿದ್ದು, ಇದರಿಂದಲೇ ಮೃತಪಟ್ಟಿರುವುದು ಎಂಬುವುದು ಪೊಲೀಸರಿಗೆ ಗೊತ್ತಾಗಿದೆ. ಹೀಗಾಗಿ ಪೊಲೀಸರು ಕೊಲೆ ಕೇಸ್ ದಾಖಲು ಮಾಡಿ ಸತೀಶ್ ಮತ್ತು ಅರುಣ್​ನನ್ನು ಬಂಧಿಸಿದ್ದು, ಬೀರೇಂದ್ರನಿಗಾಗಿ ಬಲೆಬೀಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಕೊಲೆ

ಸದ್ಯ ಬಂಡೆಪಾಳ್ಯ ಪೊಲೀಸರು ಇಬ್ಬರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಪ್ರಮುಖ ಆರೋಪಿ ಬೀರೇಂದ್ರ ಪರಾರಿಯಾಗಿದ್ದಾನೆ. ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ