AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್

ತಾನು ವೈದ್ಯ, ಇಂಜಿನಿಯರ್ ಅಂತ ಹೇಳಿ ಬರೋಬ್ಬರಿ 15 ಮಹಿಳೆಯರನ್ನು ವಿವಾಹವಾದ ಬೆಂಗಳೂರು ಮೂಲದ ವ್ಯಕ್ತಿಯನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್
10 ವರ್ಷಗಳಲ್ಲಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ
Rakesh Nayak Manchi
Rakesh Nayak Manchi|

Updated on:Jul 10, 2023 | 6:07 PM

Share

ಮೈಸೂರು: ಸುಳ್ಳು ಹೇಳಿ ಬರೋಬ್ಬರಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿರುವ 35 ವರ್ಷದ ಮಹೇಶ್ ಕೆಬಿ ನಾಯಕ್, ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಮಹಿಳೆಯರನ್ನು ಸಂಪರ್ಕಿಸಿ ತಾನು ವೈದ್ಯ ಮತ್ತು ಇಂಜಿನಿಯರ್ ಅಂತ ಹೇಳಿಕೊಂಡು ಪರಿಚಯ ಮಾಡಿಕೊಂಡು ಬುಟ್ಟಿಗೆ ಬೀಳಿಸುತ್ತಿದ್ದನು. ಅಷ್ಟೇ ಅಲ್ಲದೆ, ವಯಸ್ಸಾದ ಅವಿವಾಹಿತ ಮಹಿಳೆಯರು ಹಾಗೂ ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್ ಆಗಿತ್ತು.

ಇತ್ತೀಚೆಗಷ್ಟೇ ಮದುವೆಯಾದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕುವೆಂಪು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಶ್​ನನ್ನು ಬಂಧಿಸಿದ್ದಾರೆ. ಆರೋಪಿಗೆ ಬೇರೆ ಬೇರೆ ಮಹಿಳೆಯರೊಂದಿಗೆ ನಾಲ್ವರು ಮಕ್ಕಳನ್ನು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: PUBG Love: ಭಾರತ-ಪಾಕಿಸ್ತಾನ ಪಬ್ಜಿ ಲವ್​ ಸ್ಟೋರಿ, ಭಾರತ ಈಗ ನನ್ನ ದೇಶ ಎಂದ ಪಾಕ್ ಮಹಿಳೆ

ಆರೋಪಿ 5ನೇ ತರಗತಿವರೆಗೆ ಓದಿದ್ದು, ವೈದ್ಯ, ಇಂಜಿನಿಯರ್ ಅಥವಾ ಸಿವಿಲ್ ಕಂಟ್ರಾಕ್ಟರ್‌ನಂತೆ ವರ್ತಿಸಿ ಮಹಿಳೆಯರನ್ನು ಮದುವೆಯಾಗಿದ್ದಾನೆ. ಮಹೇಶ್​​ನನ್ನು ಬಂಧಿಸಿದ ಪೊಲೀಸರು ಆತನಿಂದ 2 ಲಕ್ಷ ರೂಪಾಯಿ ನಗದು, ಎರಡು ಕಾರುಗಳು, ಚಿನ್ನಾಭರಣಗಳು ಮತ್ತು ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಾನು ವೈದ್ಯ ಎಂದು ಜನರನ್ನು ನಂಬಿಸಲು ತುಮಕೂರಿನಲ್ಲಿ ಮಹೇಶ್ ನಕಲಿ ಕ್ಲಿನಿಕ್ ಸ್ಥಾಪಿಸಿದ್ದ ಎನ್ನಲಾಗಿದೆ. ಆದಾಗ್ಯೂ, ಇಂಗ್ಲಿಷ್‌ನಲ್ಲಿ ಮಾತನಾಡಲು ಹೆಣಗಾಡಿದ ನಂತರ ಅವನು ಮದುವೆಯಾಗಲು ಪ್ರಯತ್ನಿಸಿದ ಅನೇಕ ಮಹಿಳೆಯರು ಅನುಮಾನ ವ್ಯಕ್ತಪಡಿಸಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 10 July 23

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?