AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್

ತಾನು ವೈದ್ಯ, ಇಂಜಿನಿಯರ್ ಅಂತ ಹೇಳಿ ಬರೋಬ್ಬರಿ 15 ಮಹಿಳೆಯರನ್ನು ವಿವಾಹವಾದ ಬೆಂಗಳೂರು ಮೂಲದ ವ್ಯಕ್ತಿಯನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್
10 ವರ್ಷಗಳಲ್ಲಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ
Follow us
Rakesh Nayak Manchi
|

Updated on:Jul 10, 2023 | 6:07 PM

ಮೈಸೂರು: ಸುಳ್ಳು ಹೇಳಿ ಬರೋಬ್ಬರಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿರುವ 35 ವರ್ಷದ ಮಹೇಶ್ ಕೆಬಿ ನಾಯಕ್, ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಮಹಿಳೆಯರನ್ನು ಸಂಪರ್ಕಿಸಿ ತಾನು ವೈದ್ಯ ಮತ್ತು ಇಂಜಿನಿಯರ್ ಅಂತ ಹೇಳಿಕೊಂಡು ಪರಿಚಯ ಮಾಡಿಕೊಂಡು ಬುಟ್ಟಿಗೆ ಬೀಳಿಸುತ್ತಿದ್ದನು. ಅಷ್ಟೇ ಅಲ್ಲದೆ, ವಯಸ್ಸಾದ ಅವಿವಾಹಿತ ಮಹಿಳೆಯರು ಹಾಗೂ ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್ ಆಗಿತ್ತು.

ಇತ್ತೀಚೆಗಷ್ಟೇ ಮದುವೆಯಾದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕುವೆಂಪು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಶ್​ನನ್ನು ಬಂಧಿಸಿದ್ದಾರೆ. ಆರೋಪಿಗೆ ಬೇರೆ ಬೇರೆ ಮಹಿಳೆಯರೊಂದಿಗೆ ನಾಲ್ವರು ಮಕ್ಕಳನ್ನು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: PUBG Love: ಭಾರತ-ಪಾಕಿಸ್ತಾನ ಪಬ್ಜಿ ಲವ್​ ಸ್ಟೋರಿ, ಭಾರತ ಈಗ ನನ್ನ ದೇಶ ಎಂದ ಪಾಕ್ ಮಹಿಳೆ

ಆರೋಪಿ 5ನೇ ತರಗತಿವರೆಗೆ ಓದಿದ್ದು, ವೈದ್ಯ, ಇಂಜಿನಿಯರ್ ಅಥವಾ ಸಿವಿಲ್ ಕಂಟ್ರಾಕ್ಟರ್‌ನಂತೆ ವರ್ತಿಸಿ ಮಹಿಳೆಯರನ್ನು ಮದುವೆಯಾಗಿದ್ದಾನೆ. ಮಹೇಶ್​​ನನ್ನು ಬಂಧಿಸಿದ ಪೊಲೀಸರು ಆತನಿಂದ 2 ಲಕ್ಷ ರೂಪಾಯಿ ನಗದು, ಎರಡು ಕಾರುಗಳು, ಚಿನ್ನಾಭರಣಗಳು ಮತ್ತು ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಾನು ವೈದ್ಯ ಎಂದು ಜನರನ್ನು ನಂಬಿಸಲು ತುಮಕೂರಿನಲ್ಲಿ ಮಹೇಶ್ ನಕಲಿ ಕ್ಲಿನಿಕ್ ಸ್ಥಾಪಿಸಿದ್ದ ಎನ್ನಲಾಗಿದೆ. ಆದಾಗ್ಯೂ, ಇಂಗ್ಲಿಷ್‌ನಲ್ಲಿ ಮಾತನಾಡಲು ಹೆಣಗಾಡಿದ ನಂತರ ಅವನು ಮದುವೆಯಾಗಲು ಪ್ರಯತ್ನಿಸಿದ ಅನೇಕ ಮಹಿಳೆಯರು ಅನುಮಾನ ವ್ಯಕ್ತಪಡಿಸಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 10 July 23

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ