AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸೈಬರ್​ ವಂಚಕರ ಜಾಲಕ್ಕೆ ಸಿಲುಕಿ 1.98 ಕೋಟಿ ರೂ. ಕಳೆದುಕೊಂಡ ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಮಾತ್ರ ಸೈಬರ್​ ವಂಚಕರ ಜಾಲಕ್ಕೆ ಬೀಳುತ್ತಿದ್ದಾರೆ. ಇದೆ ರೀತಿಯಾಗಿ ಬೆಂಗಳೂರಿನ 52 ವರ್ಷದ ಉದ್ಯಮಿಯೊಬ್ಬರು ಜಾಲಕ್ಕೆ ಸಿಲುಕಿ 1.98 ಕೋಟಿ ರೂ. ಕಳೆದುಕೊಂಡಿದ್ದಾರೆ.

Cyber Crime: ಸೈಬರ್​ ವಂಚಕರ ಜಾಲಕ್ಕೆ ಸಿಲುಕಿ 1.98 ಕೋಟಿ ರೂ. ಕಳೆದುಕೊಂಡ ಉದ್ಯಮಿ
ಸೈಬರ್​ ಕ್ರೈಂ
ವಿವೇಕ ಬಿರಾದಾರ
|

Updated on: Dec 10, 2023 | 12:29 PM

Share

ಬೆಂಗಳೂರು, ಡಿಸೆಂಬರ್​​ 10: ನಗರದ 52 ವರ್ಷದ ಉದ್ಯಮಿಯೊಬ್ಬರು (Businessman) ಸೈಬರ್​ ವಂಚಕರ (Cyber Crime) ಜಾಲದಲ್ಲಿ ಸಿಲುಕಿ 1.98 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಉದ್ಯಮಿ ಚೇತನ್ ಶರ್ಮಾ (ಹೆಸರು ಬದಲಾಯಿಸಲಾಗಿದೆ) ಅವರಿಗೆ ಡಿಸೆಂಬರ್ 2 ರಂದು ಫೆಡ್ಎಕ್ಸ್ ಕೊರಿಯರ್ ಬಾಯ್​ ಕರೆ ಮಾಡುತ್ತಾನೆ. ನಿಮಗೆ (ಚೇತನ್​ ಶರ್ಮಾ) ತೈವಾನ್​ನಿಂದ ಒಂದು ಪ್ಯಾಕೇಟ್​​​​ನಲ್ಲಿ ಸಿಂಥೆಟಿಕ್ ಡ್ರಗ್ ಮೆಥಿಲೆನೆಡಿಯೋಕ್ಸಿಮೆಥಾಂಫೆಟಮೈನ್ (MDMA) ಪಾರ್ಸಲ್​​ ಬಂದಿದೆ ಎಂದು ಹೇಳಿದನು.

ನಂತರ ಕೋರಿಯರ್​​ ಬಾಯ್​ ಕರೆಯನ್ನು ಮುಂಬೈ ಸೈಬರ್ ಕ್ರೈಮ್ ಬ್ರ್ಯಾಂಚ್​ಗೆ ವರ್ಗಾಯಿಸಿದನು. ಬಳಿಕ ಓರ್ವ ಅಧಿಕಾರಿ ಮಾತನಾಡಿ “ಸ್ಕೈಪ್ ವೀಡಿಯೊ ಕರೆಯಲ್ಲಿ ನಿಮ್ಮ ಹೆಸರು ಕೇಳಿಬಂದಿದೆ” ಎಂದು ಹೇಳಿದನು. ಇದರಿಂದ ಚೇತನ್​​ ಶರ್ಮಾ ಗಾಭರಿಗೊಂಡಿದ್ದಾರೆ. ನಂತರ ಅಧಿಕಾರಿ ಈ ಬಗ್ಗೆ ತನಿಖೆ ನಡೆಸಲು ನನ್ನ ಬ್ಯಾಂಕ್​​ ಖಾತೆ ಹಣ ವರ್ಗಾಯಿಸುವಂತೆ ಚೇತನ್​ ಶರ್ಮಾ ಅವರಿಗೆ ಹೇಳಿದ್ದಾನೆ.

ಈ ನಡುವೆ ಶರ್ಮಾ ಸಂಜೆಯಾದರೂ ಮನೆಗೆ ಬಾರದೇ ಇದ್ದುದರಿಂದ ಆತಂಕಗೊಂಡು ಅವರ ಪತ್ನಿ ಕಚೇರಿಗೆ ಬಂದರು. ವಂಚಕರು ಚೇತನ್​ ಶರ್ಮಾ ಅವರನ್ನು ಮಹಿಳೆ ಯಾರು ಎಂದು ಕೇಳಿದರು. ಆಗ ಚೇತನ್​ ಶರ್ಮಾ, ಅವರು ನನ್ನ ಪತ್ನಿ ಎಂದು ಹೇಳಿದರು. ಆಗ ವಂಚಕರು ಇಬ್ಬರನ್ನೂ ವಿಚಾರಣೆ ಮಾಡಬೇಕಾಗಿದೆ ಖಾಸಗಿ ಹೋಟೆಲ್‌ವೊಂದಕ್ಕೆ ಹೋಗಲು ಹೇಳಿದ್ದಾರೆ. ಅದರಂತೆ ದಂಪತಿಗಳು ಹೋಟೇಲ್​ಗೆ ಹೋಗಿ, ಪ್ರತ್ಯೇಕ ಕೊಠಡಿಯಲ್ಲಿದ್ದರು.

ಇದನ್ನೂ ಓದಿ: Cyber Crime: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಈ ಸ್ಕ್ಯಾಮ್​ಗಳ ಬಗ್ಗೆ ಎಚ್ಚರದಿಂದಿರಿ

ನಂತರ ವಂಚಕರು ಆನ್​ಲೈನ್​​ಲ್ಲಿ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಉದ್ಯಮಿ ಚೇತನ್​ ಶರ್ಮಾ ಅವರಿಂದ 1.98 ಕೋಟಿ ರೂ.ವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಐಟಿ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಡಿಸೆಂಬರ್ 7 ರಂದು ಆಗ್ನೇಯ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಆಗ್ನೇಯ ವಿಭಾಗದ ಉಪ ಪೊಲೀಸ್ ಕಮಿಷನರ್ ಸಿಕೆ ಬಾಬಾ ಮಾತನಾಡಿ, ಇಂತಹ ಫೇಕ್​ ಕರೆಗಳು ಬಂದರೆ ಜನರು ತಕ್ಷಣ ಕರೆಗಳನ್ನು ಕಟ್​ ಮಾಡಬೇಕು. ಮತ್ತು ಸ್ಥಳೀಯ ಪೊಲೀಸರಿಗೆ ತಿಳಿಸಬೇಕು. ನಿಜವಾದ ಸೈಬರ್ ಕ್ರೈಮ್ ಪೋಲೀಸರು ಸ್ಕೈಪ್ ಅಥವಾ ಫೋನ್‌ನಲ್ಲಿ ವಿಚಾರಣೆ ನಡೆಸುವುದಿಲ್ಲ. ಆರೋಪಗಳಿದ್ದರೆ, ನೋಟಿಸ್ ನೀಡಲಾಗುವುದು. ಮತ್ತು ನಿಮ್ಮನ್ನು ಠಾಣೆಗೆ ಕರೆಸಲಾಗುತ್ತದೆ ಅಥವಾ ಕರೆದೊಯ್ಯಲಾಗುತ್ತದೆ. ಸ್ಕೈಪ್ ಅಥವಾ ವೀಡಿಯೊ ಕರೆಯಲ್ಲಿ ವಿಚಾರಣೆಯನ್ನು ಎಂದಿಗೂ ನಡೆಸಲಾಗುವುದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ