AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ತುಮಕೂರು(Tumkuru) ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.

ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 16, 2024 | 10:14 PM

Share

ಚಿಕ್ಕಮಗಳೂರು, ಫೆ.16: ಜಿಲ್ಲೆಯ ಕಡೂರು(Kaduru)ತಾಲೂಕಿನ ಹುಲಿಗೊಂದಿ ಹೊಸೂರು ಗ್ರಾಮದ ಬಳಿ ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ತುಮಕೂರು(Tumkuru) ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ್(21) ಮೃತ ರ್ದುದೈವಿ. ಇನ್ನು ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್, ಹಾಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ. ಇತ್ತೀಚೆಗೆ ಬೇಲ್ ಪಡೆದು ಇಬ್ಬರು ಸ್ನೇಹಿತರ ಜೊತೆ ಕಡೂರಿನ ಮಾಡಾಳು ಗ್ರಾಮದ ತಾತನ ಮನೆಗೆ ಬಂದಿದ್ದ.

ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೊರಟವ ಮಸಣ ಸೇರಿದ

ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ ದರ್ಶನ್ ಸ್ನೇಹಿತರು, ನಿನ್ನೆ(ಫೆ.15) ರಾತ್ರಿ ಪುನಃ ಬಂದಿದ್ದಾರೆ. ಈ ಹಿನ್ನಲೆ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ದರ್ಶನ್ ಹೋಗಿದ್ದನಂತೆ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದಾನೆ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್​ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು. ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಎನ್ನುವುದು ನಿಗೂಢವಾಗಿದೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ

ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

ರಾಮನಗರ: ಕಬ್ಬಿಣ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವನ್ನಪ್ಪಿದ ಧಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜಕ್ಕೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಕೋಲ್ಕತ್ತಾ ಮೂಲದ  ಇವರು BWSSB ಕುಡಿವ ನೀರಿನ ಪೈಪ್​ಲೈನ್ ಕಾಮಗಾರಿಗೆ ಬಂದಿದ್ದರು. ಕನಕಪುರದಿಂದ ಜಕ್ಕೇಗೌಡನದೊಡ್ಡಿ ಕಡೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಸಾತನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ