ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು. ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸರಬರಾಜುಗಾರರ ಬಂಧನ
ಸಾಧು ಶ್ರೀನಾಥ್​

Updated on: Nov 17, 2019 | 12:55 PM

ಬೆಂಗಳೂರು: ಸಿಸಿಬಿ ಪೊಲೀಸರು ಮೂವರು ಅಂತರ್​ ರಾಜ್ಯ ಮಾದಕ ವಸ್ತು ಸರಬರಾಜುಗಾರರನ್ನು ಬಂಧಿಸಿದ್ದಾರೆ. ಶಾಖೀರ್, ನಜೀಲ್, ಮಹಮ್ಮದ್ ಜಿಯಾದ್ ಬಂಧಿತ ಆರೋಪಿಗಳು. ಆಂಧ್ರದ ಡ್ರಗ್ ಪೆಡ್ಲರ್​ಗಳ ಮೂಲಕ ಖರೀದಿಸಿ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಆರೋಪಿಗಳು ತರುತ್ತಿದ್ದರು.

ಬಂಧಿತ ಆರೋಪಿಗಳಿಂದ 1 ಕೆ.ಜಿ 125 ಗ್ರಾಂ ಹ್ಯಾಶಿಶ್ ಆಯಿಲ್, 2 ಕೆ.ಜಿ 200 ಗ್ರಾಂ‌ಂ ಗಾಂಜಾ, 12 ಗ್ರಾಂ ಎಂಡಿಎಂಎ, 3 ಮೊಬೈಲ್, 1 ಕಾರು, 2 ಬೈಕು ಜಪ್ತಿ ಮಾಡಿದ್ದಾರೆ. ಒಟ್ಟಾರೆಯಾಗಿ ಸುಮಾರು 10 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us