AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ಮಾಫಿಯಾದಲ್ಲಿ ಮೆರೆದಾಡಲು ಬಯಸಿದ್ದ ಟ್ಯಾಟೂ ಆರ್ಟಿಸ್ಟ್​ಗಳು ಸಿಸಿಬಿ ಬಲೆಗೆ

ಪಾಬ್ಲೋ ಎಸ್ಕೋಬಾರ್ ನಂತೆ ಡ್ರಗ್ ಮಾಫಿಯಾದಲ್ಲಿ ಮೆರೆದಾಡಲು ಬಯಸಿದ್ದವರನ್ನು ಸಿಸಿಬಿ ಪೊಲೀಸರು ಬಂಧಿಸಿ 25 ಲಕ್ಷ ಮೌಲ್ಯದ ವಿವಿಧ ಮಾದಕಗಳನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ ಮಾಫಿಯಾದಲ್ಲಿ ಮೆರೆದಾಡಲು ಬಯಸಿದ್ದ ಟ್ಯಾಟೂ ಆರ್ಟಿಸ್ಟ್​ಗಳು ಸಿಸಿಬಿ ಬಲೆಗೆ
ಡ್ರಗ್ ಮಾಫಿಯಾದಲ್ಲಿ ಮೆರೆದಾಡಲು ಬಯಸಿದ್ದ ಟ್ಯಾಟೂ ಆರ್ಟಿಸ್ಟ್​ಗಳು ಸಿಸಿಬಿ ಬಲೆಗೆ
TV9 Web
| Edited By: Rakesh Nayak Manchi|

Updated on:Dec 03, 2022 | 2:45 PM

Share

ಬೆಂಗಳೂರು: ಡ್ರಗ್ ಮಾಫಿಯಾದಲ್ಲಿ (Drug Mafia) ಮೆರೆದಾಡಲು ಬಯಸಿದ್ದ ಇಬ್ಬರು ಟ್ಯಾಟೂ ಆರ್ಟಿಸ್ಟ್ (Tattoo Artists)​ಗಳನ್ನು ನಗರದ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಲಿವಿಂಗ್ ಟುಗೆದರ್ನಲ್ಲಿದ್ದ ವಿಷ್ಣುಪ್ರಿಯ ಹಾಗೂ ಸಿಗಿಲ್ ವರ್ಗೀಸ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ ಲಕ್ಷಾಂತರ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ಉತ್ತಮ ಆದಾಯ ಗಳಿಸಬಹುದಾಗಿದ್ದ ಟ್ಯಾಟೂ ಉದ್ಯಮ ಕ್ಷೇತ್ರದಲ್ಲಿದ್ದ ವಿಷ್ಣುಪ್ರಿಯ ಹಾಗೂ ಸಿಗಿಲ್ ವರ್ಗೀಸ್​ ಮಾದಕ ಜಗತ್ತಿಗೆ ಕಾಲಿಡಲು ಜಗತ್ತು ಕಂಡ ಕುಖ್ಯಾತ ಮಾದಕ ದಂಧೆಕೋರನೇ ಸ್ಪೂರ್ತಿಯಾಗಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಜಗತ್ತು ಕಂಡ ಕುಖ್ಯಾತ ಮಾದಕ ದಂಧೆಕೋರ ಕೊಲಂಬಿಯಾದ ಪಾಬ್ಲೋ ಎಸ್ಕೋಬಾರ್ (Pablo Escobar)​ನಿಂದ ಸ್ಫೂರ್ತಿಗೊಂಡು, ಅವನಂತೆ ಡ್ರಗ್ ಮಾಫಿಯಾದಲ್ಲಿ ಮೆರೆದಾಡಲು ವಿಷ್ಣುಪ್ರಿಯ ಮತ್ತು ಸಿಗಿಲ್ ವರ್ಗೀಸ್ ಬಯಸಿದ್ದರು. ಅದರಂತೆ ಗಿರಾಕಿಗಳಿಂದ ಹಣ ಪಡೆದು ಮಾದಕ ವಸ್ತುಗಳನ್ನು ಒಂದೆಡೆ ಬಚ್ಚಿಟ್ಟು ಲೊಕೇಷನ್ ಶೇರ್ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಇಲ್ಲಿ ತನಿಖಾಧಿಕಾರಿಗಳು ಹೆಚ್ಚಿನ ವಿಚಾರಣೆ ಕೈಗೊಂಡಾಗ ಆರೋಪಿಗಳ ಅಸಲಿಯತ್ತು ಬಯಲಿಗೆ ಬಂದಿದೆ. ಸದ್ಯ ಆರೋಪಿಗಳಿಂದ 25 ಲಕ್ಷ ಮೌಲ್ಯದ ವಿವಿಧ ಮಾದಕ, ಪಾಬ್ಲೋ ಎಸ್ಕೋಬಾರ್ ಫೋಟೋ ವಶಕ್ಕೆ ಪಡೆಯಲಾಗಿದೆ.

ವಿಷಸೇವಿಸಿದ್ದ ಆರೋಪಿ ಸುಹೇಲ್ ಕೊಬ್ರಾ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ವಿಷಸೇವಿಸಿದ್ದ ಆರೋಪಿ ಸುಹೇಲ್ ಕೊಬ್ರಾ ಮಂಗಳೂರಿನ ಯೆನಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಿವಾಸಿ ಸುಹೇಲ್ ವಿರುದ್ಧ ತೀರ್ಥಹಳ್ಳಿ, ಮಾಳೂರು ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದ್ದವು. ಅದರಂತೆ ಪೊಲೀಸ್ ಇಲಾಖೆಯ ಆತನ ಗಡಿಪಾರಿಗೆ ಆದೇಶಿಸಿತ್ತು. ಪೊಲೀಸರ ನೋಟಿಸ್ ತಲುಪುತ್ತಿದ್ದಂತೆ ಹೆದರಿದ ಆರೋಪಿ ಸುಹೇಲ್, ನವೆಂಬರ್ 28ರಂದು ಮನೆಯಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆ ಹಾಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಯೆನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:02 pm, Sat, 3 December 22

Follow Us
Web contact
Web contact

TV9 Kannada

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?