AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಮಾಡ್ತಿದ್ದ ವೈದ್ಯ ಅರೆಸ್ಟ್, ಡಾಕ್ಟರ್​ನ ಅಸಲಿ ಮುಖ​ ಬಿಚ್ಚಿಟ್ಟ ಮೊಬೈಲ್​

ಚಿಕಿತ್ಸೆಗೆಂದು ಬರುವ ಮಹಿಳೆಯರ ಖಾಸಗಿ ಅಂಗಾಗಗಳನ್ನ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದ ಬೆಂಗಳೂರಿನ ವೈದ್ಯನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ವೈದ್ಯನ ಅಸಲಿ ಮುಖ ಬಟಾಬಯಲಾಗಿದೆ.

ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಮಾಡ್ತಿದ್ದ ವೈದ್ಯ ಅರೆಸ್ಟ್, ಡಾಕ್ಟರ್​ನ ಅಸಲಿ ಮುಖ​ ಬಿಚ್ಚಿಟ್ಟ ಮೊಬೈಲ್​
Accused doctor venkataramana
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 16, 2022 | 4:44 PM

ಬೆಂಗಳೂರು: ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳೆಯರ ಬಟ್ಟೆ ಬಿಚ್ಚಿಸುತ್ತಿದ್ದ ವಿಕೃತ ಮನಸ್ಥಿತಿಯ ವೈದ್ಯನೊಬ್ಬನನ್ನು (doctor)  ಬೆಂಗಳೂರು ಸಿಸಿಬಿ ಪೊಲೀಸರು (Bengaluru CCB Police) ಬಂಧಿಸಿದ್ದಾರೆ. ಆಂಧ್ರದ ಗುತ್ತಿ ಬಳಿ ವೈದ್ಯ ವೆಂಕಟರಮಣ ಸಿಕ್ಕಿಬಿದ್ದಿದ್ದು, ತನಿಖೆ ವೇಳೆ ವೈದ್ಯನ ಅಸಲಿ ಮುಖ ಬಯಲಾಗಿದೆ. ಅಲ್ಲದೇ ಪೊಲೀಸರು ಆರೋಪಿಯ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ನಡೆಸಿದಾಗ ವೈದ್ಯನ ಕೈಚಳಕದ ವಿಡಿಯೋಗಳು ಪತ್ತೆಯಾಗಿವೆ.

ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಕನಿಂದಲೇ ಲೈಂಗಿಕ ದೌರ್ಜನ್ಯ ಆರೋಪ: ಬೀಟ್​ನಲ್ಲಿದ್ದ ಪೊಲೀಸರಿಗೆ ಸಿಕ್ಕಬಿದ್ದ ಹುಡುಗ-ಹುಡುಗಿ

ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯ ಕ್ಲಿನಿಕ್​ನಲ್ಲಿ ನ್ಯಾಚುರೋಪತಿ, ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದ ವೈದ್ಯ ವೆಂಕಟರಮಣ, ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಅಂಗಾಂಗಗಳನ್ನು ವಿಡಿಯೋ ಚಿತ್ರೀಕರಿಸುತ್ತಿದ್ದ. ಅಷ್ಟೇ ಅಲ್ಲ ಚಿಕಿತ್ಸೆ ಕೊಡುವ ನೆಪದಲ್ಲಿ ಬೇಕಂತಲೇ ಖಾಸಗಿ ಅಂಗಗಳಿಗೂ ಇಂಜೆಕ್ಷನ್​ ಕೊಡಲು ಮುಂದಾಗುತ್ತಿದ್ದ ಎಂದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

ಇತ್ತೀಚಿಗೆ ಯುವತಿಯೊಬ್ಬರು ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಕ್ಲಿನಿಕ್​ಗೆ ತೆರಳಿದ್ದರು. ಆ ವೇಳೆ ಖಾಸಗಿ ಅಂಗಗಳಿಗೂ ಇಂಜೆಕ್ಷನ್ ನೀಡಲು ವೈದ್ಯ ಮುಂದಾಗಿದ್ದ. ಇದಾದ ಕೆಲ ದಿನಗಳ ಬಳಿಕ ಯುವತಿಯ ಮೊಬೈಲ್​ಗೆ ತಾನು ಚಿಕಿತ್ಸೆ ಪಡೆದ ವಿಡಿಯೋ ಬಂದಿತ್ತು. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಯುವತಿಯ ಕಡೆಯವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆಯೇ ವೈದ್ಯ ಆಂಧ್ರಕ್ಕೆ ಪರಾರಿಯಾಗಿದ್ದ.

ಚಿಕಿತ್ಸೆ ಹೆಸರಲ್ಲಿ ರಹಸ್ಯವಾಗಿ ತನ್ನ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವೈದ್ಯನನನ್ನು ಮಹಿಳೆಯರು ಪ್ರಶ್ನೆ ಮಾಡಿದರೆ ಚಿಕಿತ್ಸೆ ಕೊಡುವಾಗ ಕಾಯಿಲೆಯ ಮೂಲವನ್ನ ಹುಡುಕಬೇಕು. ಹಾಗಾಗಿ ವಿಡಿಯೋ ಮಾಡುತ್ತಿರುವುದಾಗಿ ಸಮಜಾಯಿಷಿ ಕೊಡುತ್ತಿದ್ದ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದರೆ ಚಿಕಿತ್ಸೆ ಬೇಕಾದರೆ ಪಡೆಯಿರಿ, ಇಲ್ಲವಾದರೆ ಹೋಗಿ ಎನ್ನುತ್ತಿದ್ದ.

ಬೆಂಗಳೂರಿನ ಜಾಲಹಳ್ಳಿಯಲ್ಲಿ ದ್ವಿತೀಯ ಪಿಯುಸಿ ಓದಿದ್ದ ವೈದ್ಯ ವೆಂಕಟರಮಣ, ಮಾರತ್ತಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್​ ಆಗಿದ್ದ. 10 ವರ್ಷ ಕಮರ್ಷಿಯಲ್​ ಮ್ಯಾನೇಜರ್ ಆಗಿದ್ದ ವೆಂಕಟರಮಣ, ನಂತರ ಜಯನಗರದ ಖಾಸಗಿ ಕಾಲೇಜಿನಲ್ಲಿ 2 ವರ್ಷ ತರಬೇತಿ ಪಡೆದಿದ್ದ ವೆಂಕಟರಮಣ, 3-4 ವರ್ಷಗಳಿಂದ ಮನೆ ಬಳಿ ಅಕ್ಯೂಪಂಕ್ಚರ್ ಕ್ಲಿನಿಕ್​ ತೆರೆದಿದ್ದ. ಬಳಿಕ ಕ್ಲಿನಿಕ್​ಗೆ ಬರುವ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ. ಮೊಬೈಲ್​ನಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ವಿಕೃತಿ ಮೆರೆಯುತ್ತಿದ್ದ. ವೆಂಕಟರಮಣನನ್ನು ಬಂಧಿಸಿ ವೈದ್ಯನ ಮೊಬೈಲ್​ ಜಪ್ತಿ ಮಾಡಿದಾಗ ಬಹಳಷ್ಟು ವಿಡಿಯೋ ಇರುವುದು ಕಂಡುಬಂದಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Wed, 16 November 22

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?