ಲಾಕ್​ಡೌನ್ ಮಧ್ಯೆ ಅಕ್ರಮ ಹುಕ್ಕಾ ಬಾರ್ ಮೇಲೆ ಸಿಸಿಬಿ ರೇಡ್

ಬೆಂಗಳೂರು: ಲಾಕ್​ಡೌನ್ ಸಂದರ್ಭದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾಲೀಕ ಹಾಗೂ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂರಜ್ ಕುಮಾರ್(29), ಲಕ್ಷ್ಮಣ್(26), ಜೀತು(21) ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾಬಾರ್ ನಡೆಸಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಹುಕ್ಕಾ ಪಾಟ್ಸ್ , ತಂಬಾಕು, ಲಿಕ್ಕರ್ ಬಾಟಲ್ಸ್​ ಜಪ್ತಿ ಮಾಡಿದ್ದಾರೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ, ಅಬಕಾರಿ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲಾಕ್​ಡೌನ್ ಮಧ್ಯೆ ಅಕ್ರಮ ಹುಕ್ಕಾ ಬಾರ್ ಮೇಲೆ ಸಿಸಿಬಿ ರೇಡ್
ಸಾಧು ಶ್ರೀನಾಥ್​

Updated on: May 03, 2020 | 11:41 AM

ಬೆಂಗಳೂರು: ಲಾಕ್​ಡೌನ್ ಸಂದರ್ಭದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾಲೀಕ ಹಾಗೂ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂರಜ್ ಕುಮಾರ್(29), ಲಕ್ಷ್ಮಣ್(26), ಜೀತು(21) ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ.

ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾಬಾರ್ ನಡೆಸಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಹುಕ್ಕಾ ಪಾಟ್ಸ್ , ತಂಬಾಕು, ಲಿಕ್ಕರ್ ಬಾಟಲ್ಸ್​ ಜಪ್ತಿ ಮಾಡಿದ್ದಾರೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ, ಅಬಕಾರಿ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us