ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು. ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ. ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ […]

ರೌಡಿಯಿಂದ ಸನ್ಮಾನ! ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ ಗೆ ಇದು ಬೇಕಿತ್ತಾ?
ಸಾಧು ಶ್ರೀನಾಥ್​

Updated on: Oct 16, 2019 | 11:10 PM

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುರಕ್ಷತೆ ಕಾಪಾಡುವ ಹೊಣೆಹೊತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರೌಡಿಶೀಟರ್‌ ಸನ್ಮಾನ ಮಾಡಿರುವ ಪ್ರಸಂಗ ನಡೆದಿದೆ. ಬೆಂಗಳೂರು ನಗರದ ಹಾಲಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್‌ ಹೀಗೆ ಸನ್ಮಾನ ಮಾಡಿಸಿಕೊಂಡವರು.

ಇನ್ನು, ರೌಡಿಶೀಟರ್‌ ಯಶಸ್ವಿನಿ ತನ್ನ ಪತಿ ಸಮೇತ ಪೊಲೀಸ್ ಆಯುಕ್ತರಿಗೆ ಸನ್ಮಾನ ಮಾಡಿರುವ ಫೋಟೋ ಇದೀಗ ವೈರಲ್ ಆಗಿದೆ. ಇದಕ್ಕೆ ಸಾಕ್ಷೀಭೂತರಾಗಿ ಪ್ರಮೊದ್ ಮುತಾಲಿಕ್ ಸಹ ವೇದಿಕೆಯಲ್ಲಿರುವುದು ಗಮನಾರ್ಹವಾಗಿದೆ.

ನಗರದ ಶಾಂತಿ ಸುವ್ಯವಸ್ಥೆ ಜವಾಬ್ದಾರಿ ಹೊತ್ತಿರುವ ಆಯುಕ್ತ ಭಾಸ್ಕರ್ ರಾವ್‌ ಅವರಿಗೆ ಇಂತಹ ಸನ್ಮಾನ ಮಾಡಿಸಿಕೊಳ್ಳುವುದರ ಜರೂರತ್ತು ಇತ್ತಾ ಎಂದು ಬೆಂಗಳೂರಿಗರು ತಮ್ಮ ಆಕ್ರೋಶ, ಅಸಮಾಧಾನ ಹೊರಹಾಕಿದ್ದಾರೆ.

Published On - 1:13 pm, Wed, 16 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us