AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Police: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ

ನಂದಿನಿ ಲೇಔಟ್, ಸ್ವತಂತ್ರ ಯೋಧರನಗರ, ಕೂಲಿನಗರ ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್, ಕಳ್ಳತನ ಪ್ರಕರಣದ ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದಿನಿ ಲೇಔಟ್ ಪೊಲೀಸರ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

Bengaluru Police: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 25, 2021 | 11:11 PM

Share

ಬೆಂಗಳೂರು: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ, ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಜನಸಂಪರ್ಕ ಸಭೆಯಲ್ಲಿ ದೂರು ಹಿನ್ನೆಲೆಯಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ನಂದಿನಿ ಲೇಔಟ್, ಸ್ವತಂತ್ರ ಯೋಧರನಗರ, ಕೂಲಿನಗರ ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್, ಕಳ್ಳತನ ಪ್ರಕರಣದ ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದಿನಿ ಲೇಔಟ್ ಪೊಲೀಸರ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ, ಎಸಿಪಿ ವೆಂಕಟೇಶ ನಾಯ್ಡು, ಇನ್​ಸ್ಪೆಕ್ಟರ್ ವೆಂಕಟೇಗೌಡ ನೇತೃತ್ವದಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಾದಕ ಸೇವನೆ ಅನುಮಾನದಡಿಯಲ್ಲಿ ಕೆಲವರಿಗೆ ವೈದ್ಯಕೀಯ ಪರೀಕ್ಷೆ ಕೂಡ ನಡೆಸಲಾಗಿದೆ. ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಕೇಳಿ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.

ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

ಯುವಜನರು ದ್ವಿಚಕ್ರ ವಾಹನಗಳನ್ನು ಹಿಡಿದು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು, ವ್ಹೀಲಿಂಗ್ ನಡೆಸುವುದು ಕೆಲವೆಡೆ ಕಂಡುಬಂದಿತ್ತು. ವಾರಾಂತ್ಯಗಳಲ್ಲಿ, ಫ್ಲೈ ಓವರ್ ರಸ್ತೆ ಮೇಲೆ, ಅಷ್ಟೇ ಅಲ್ಲದೆ ಸಹಜ ಟ್ರಾಫಿಕ್ ಇರುವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲೂ ಹೀಗೆ ಕೆಲ ಯುವಕರು ಬೇಜಾವಾಬ್ದಾರಿಯುತ ನಡವಳಿಕೆ ತೋರುತ್ತಿದ್ದರು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ

ಪೊಲೀಸರು ಅಪರಾಧಿಗಳನ್ನು ಹೀಗೂ ಕರೆದೊಯ್ಯುತ್ತಾರಾ?

(Bengaluru City Police Crime Cases Nandini Layout Police Raid at many places)

Published On - 11:04 pm, Sun, 25 July 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!