AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು ನಗರದಲ್ಲಿ ಡ್ರಗ್ಸ್​ ಹಾವಳಿ ಮಿತಿ ಮೀರಿದೆ. ಬೆಂಗಳೂರಿನಲ್ಲಿ ಡ್ರಗ್ಸ್​ ಮಾಫಿಯಾವನ್ನು ಮಟ್ಟ ಹಾಕಲು ಪೊಲೀಸರು ಟೊಂಕ ಕಟ್ಟಿ ನಿಂತಿದ್ದಾರೆ. ಇದೀಗ, ನಗರದಲ್ಲಿ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಸ್ನೇಹಿತರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ
ಬಂಧಿತ ದಂಪತಿ
Jagadisha B
| Edited By: |

Updated on:Sep 23, 2024 | 3:11 PM

Share

ಬೆಂಗಳೂರು, ಸೆಪ್ಟೆಂಬರ್​ 23:  ಡ್ರಗ್ಸ್ ಪೆಡ್ಲಿಂಗ್ (Drug Peddling) ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು (CCB Police) ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.

ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್​​.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು.  ಸಹನಾ ಮತ್ತು ಮೈಕಲ್​ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ​​ನಂತರ, ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್​ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್​​ ಆಗಿದ್ದಾರೆ. ಇಲ್ಲಿ, ಒಂದೇ ಮನೆಯಲ್ಲಿ ವಾಸವಾಗಿದ್ದ ಮೈಕಲ್ ಮತ್ತು ಸಹನಾ, ಇಲ್ಲಿಂದಲೇ ಡ್ರಗ್ಸ್​ ಸರಬರಾಜು ಮಾಡಲು ಆರಂಭಿಸಿದರು.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್​ ಪೆಡ್ಲರ್​ನನ್ನು​ ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್​ನ ಬಂಧನಕ್ಕೆ ಬಲೆಬೀಸಿದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಿದರು. ಬಳಿಕ ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್​​​​​, ಎರಡು ಎಲೆಕ್ಟ್ರಾನಿಕ್​ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರುಸ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:37 pm, Mon, 23 September 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ