AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು ನಗರದಲ್ಲಿ ಡ್ರಗ್ಸ್​ ಹಾವಳಿ ಮಿತಿ ಮೀರಿದೆ. ಬೆಂಗಳೂರಿನಲ್ಲಿ ಡ್ರಗ್ಸ್​ ಮಾಫಿಯಾವನ್ನು ಮಟ್ಟ ಹಾಕಲು ಪೊಲೀಸರು ಟೊಂಕ ಕಟ್ಟಿ ನಿಂತಿದ್ದಾರೆ. ಇದೀಗ, ನಗರದಲ್ಲಿ ಡ್ರಗ್ಸ್​ ಸರಬರಾಜು ಮಾಡುತ್ತಿದ್ದ ಸ್ನೇಹಿತರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ​ ಸ್ನೇಹಿತರು ಅರೆಸ್ಟ್​, 1 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ
ಬಂಧಿತ ದಂಪತಿ
ಜಗದೀಶ ಬಿ.
| Edited By: |

Updated on:Sep 23, 2024 | 3:11 PM

Share

ಬೆಂಗಳೂರು, ಸೆಪ್ಟೆಂಬರ್​ 23:  ಡ್ರಗ್ಸ್ ಪೆಡ್ಲಿಂಗ್ (Drug Peddling) ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು (CCB Police) ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ.

ಆರೋಪಿ ಮೈಕೆಲ್​ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್​​.ಪುರಂನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇದ್ದನು.  ಸಹನಾ ಮತ್ತು ಮೈಕಲ್​ ಸ್ನೇಹಿತರಾಗಿದ್ದು, ಒಟ್ಟಿಗೆ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ​​ನಂತರ, ಮೈಕಲ್ ಮತ್ತು ಸಹನಾ ಒಟ್ಟಿಗೆ ಕೆಆರ್​ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್​​ ಆಗಿದ್ದಾರೆ. ಇಲ್ಲಿ, ಒಂದೇ ಮನೆಯಲ್ಲಿ ವಾಸವಾಗಿದ್ದ ಮೈಕಲ್ ಮತ್ತು ಸಹನಾ, ಇಲ್ಲಿಂದಲೇ ಡ್ರಗ್ಸ್​ ಸರಬರಾಜು ಮಾಡಲು ಆರಂಭಿಸಿದರು.

ಇದನ್ನೂ ಓದಿ: FSL​ ತಜ್ಞರಿಗೆ ತಲೆನೋವಾದ ಬೆಂಗಳೂರು ಮಹಾಲಕ್ಷ್ಮೀ ಕೊಲೆ, ಪತ್ತೆಯಾಗದ ರಕ್ತದ ಕಲೆ!

ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್​ ಪೆಡ್ಲರ್​ನನ್ನು​ ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್​ನ ಬಂಧನಕ್ಕೆ ಬಲೆಬೀಸಿದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಿದರು. ಬಳಿಕ ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್​​​​​, ಎರಡು ಎಲೆಕ್ಟ್ರಾನಿಕ್​ ತೂಕದ ಯಂತ್ರವನ್ನು ಸಿಸಿಬಿ ಪೊಲೀಸರುಸ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:37 pm, Mon, 23 September 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ