AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಹೆಸರಲ್ಲಿ ಯುವತಿಯ ಒಡವೆ ಲಪಟಾಯಿಸಿದ ಆರೋಪ; ವ್ಯಕ್ತಿ ಬಂಧನ, 8 ಲಕ್ಷ ಮೌಲ್ಯದ ಒಡವೆ ವಶ

ಮನೆಯಲ್ಲಿ ಚಿನ್ನಾಭರಣ ನಾಪತ್ತೆಯಾಗುತ್ತಿರುವುದರಿಂದ ಚಿಂತೆಗೀಡಾದ ಯುವತಿಯ ಪೋಷಕರು ಮನೆಗಳ್ಳತನ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಪ್ರೀತಿ ಹೆಸರಲ್ಲಿ ಯುವತಿಯ ಒಡವೆ ಲಪಟಾಯಿಸಿದ ಆರೋಪ; ವ್ಯಕ್ತಿ ಬಂಧನ, 8 ಲಕ್ಷ ಮೌಲ್ಯದ ಒಡವೆ ವಶ
ಪ್ರಾತಿನಿಧಿಕ ಚಿತ್ರ
TV9 Web
| Updated By: guruganesh bhat|

Updated on:Aug 26, 2021 | 4:10 PM

Share

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡು ಪ್ರೀತಿಯ ಹೆಸರಲ್ಲಿ ಆಭರಣಗಳನ್ನು ಲಪಟಾಯಿಸಿದ ಆರೋಪದಡಿ ಬೆಂಗಳೂರಿನ ಗಂಗಮ್ಮನಗುಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಆರೋಪಿ ಇನ್ಸ್ಟಾಗ್ರಾಮ್ನಲ್ಲಿ ಯುವತಿಯೋರ್ವಳನ್ನು ಪರಿಚಯ ಮಾಡಿಕೊಂಡಿದ್ದ. ಆಕೆಯೊಂದಿಗೆ ಸುತ್ತಾಡುತ್ತಿದ್ದ. ಪ್ರೀತಿ ಮಾಡುವುದಾಗಿ ನಂಬಿಸಿ ಕಷ್ಟ ಎಂದು ಹೇಳಿ ಯುವತಿ ಬಳಿಯಿಂದ ಚಿನ್ನದ ಸರ ಪಡೆದುಕೊಂಡಿದ್ದ. ಗಿರವಿ ಇಟ್ಟು ಬಂದ ಹಣವನ್ನು ಪಡೆದು ಮೋಜು ಮಾಡಿದ್ದ. ಬಳಿಕವೂ ಯುವತಿ ಬಳಿ ಹಂತಹಂತವಾಗಿ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದ. ಒಂದು ದಿನ ಮನೆಯಲ್ಲಿ ಯಾರು ಇಲ್ಲದ ವೇಳೆ ಬಂದು ಮನೆಯಲ್ಲಿದ್ದ ಒಡವೆಗಳನ್ನು ಸಹ ಮೋಸದಿಂದ ಪಡೆದುಕೊಂಡಿದ್ದ ಎಂಬ ಆರೋಪ ಬಂಧಿತ ವ್ಯಕ್ತಿಯ ಮೇಲೆ ಕೇಳಿಬಂದಿದೆ. ಬಂಧಿತನಿಂದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಮನೆಯಲ್ಲಿ ಚಿನ್ನಾಭರಣ ನಾಪತ್ತೆಯಾಗುತ್ತಿರುವುದರಿಂದ ಚಿಂತೆಗೀಡಾದ ಯುವತಿಯ ಪೋಷಕರು ಮನೆಗಳ್ಳತನ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗಲೆ ತಮ್ಮ ಮಗಳಿಂದ ಆಭರಣ ಮತ್ತು ಒಡವೆಗಳನ್ನು ವ್ಯಕ್ತಿಯೋರ್ವ ಪಡೆದುಕೊಳ್ಳುತ್ತಿರುವುದು ಬೆಳಕಿಗೆ ಬಂದಿತ್ತು. ಸದ್ಯ ಮನೆಗಳ್ಳತನ ಆರೋಪದಡಿ ದೂರು ದಾಖಲಾಗಿದೆ.

ಬಂಧಿತ ಆರೋಪಿ ತಾನು ಒಡವೆಗಳನ್ನು ತೆಗೆದುಕೊಂಡಿರುವುದನ್ನು ಪೋಷಕರಿಗೆ ತಿಳಿಸಿದರೆ ಇನ್ನಷ್ಟು ತೊಂದರೆ ನೀಡುವುದಾಗಿ ಯುವತಿಯನ್ನು ಬೆದರಿಸಿದ್ದ ಎಂದು ಸಹ ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಗಂಗಮ್ಮನಗುಡಿ ಪೊಲೀಸರು ಬಂಧಿತನಿಂದ 8 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 

ಕಾಂಗ್ರೆಸ್​ನವರು ನನ್ನ ಮೇಲೆ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ

Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

(Bengaluru Crime Allegations of laundering a house in the name of love The man was arrested and detained for Rs 8 lakh)

Published On - 4:07 pm, Thu, 26 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ