AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ

ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಸಹಾಯವಾಣಿ ಮೂಲಕ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಲಾರಿಯನ್ನೇ ಕದ್ದ ಇಬ್ಬರು ಖದೀಮರನ್ನು ಬಂಧಿಸಲಾಗಿದೆ.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
ಸಾಂದರ್ಭಿಕ ಚಿತ್ರ
Follow us
Shivaprasad
| Updated By: Ganapathi Sharma

Updated on:May 01, 2024 | 9:07 AM

ಬೆಂಗಳೂರು, ಮೇ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಪರಾಧ ಚಟುವಟಿಕೆಗಳು (Criminal Activities) ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಕೊಡಿಗೇಹಳ್ಳಿಯ (Kodigehalli) ವಿರೂಪಾಕ್ಷಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್​ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಘಟನೆ ಸಂಬಂಧ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದರು.

ಲಾರಿಯನ್ನೇ ಕದ್ದಿದ್ದ ಕಳ್ಳರು ಅಂದರ್

12 ಲಕ್ಷ ರೂಪಾಯಿ ಮೌಲ್ಯದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಬಳಿ ನಡೆದಿದೆ. ಇದೀಗ ಘಟನೆ ಸಂಬಂಧ ಆರೋಪಿಗಳಾದ ರಾಜ, ರಂಜಿತ್ ಕುಮಾರ್ ಎಂಬವರನ್ನು ಭಾರತಿ ನಗರ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಕೋಲ್ಸ್ ಪಾರ್ಕ್ ಪಕ್ಕ ಪಾರ್ಕಿಂಗ್ ಮಾಡಿದ್ದ ತಮಿಳುನಾಡು ನೋಂದಣಿ ಲಾರಿಯನ್ನು ಇವರು ಕಳವು ಮಾಡಿದ್ದರು.

ಇದನ್ನೂ ಓದಿ: ಪ್ರತಿಷ್ಠಿತ ಐಕಿಯಾ ಕಂಪನಿಯ ಹೆಸರಿನಲ್ಲಿ ವಂಚನೆ, ಹಣ ಡಬಲ್ ಆಗುತ್ತದೆಂದು ನಂಬಿಸಿ ಲಕ್ಷಾಂತರ ರೂಪಾಯಿ ಪಂಗನಾಮ

ಆರೋಪಿಗಳನ್ನು ಅನುಮಾನಸ್ಪದ ನಡವಳಿಕೆಯ ಕಾರಣ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಲಾರಿ ಕಳವು ಕೃತ್ಯ ಬಯಲಿಗೆ ಬಂದಿದೆ. ನಂತರ ಅವರನ್ನು ಬಂಧಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Wed, 1 May 24

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್