AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ

ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಸಹಾಯವಾಣಿ ಮೂಲಕ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಲಾರಿಯನ್ನೇ ಕದ್ದ ಇಬ್ಬರು ಖದೀಮರನ್ನು ಬಂಧಿಸಲಾಗಿದೆ.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:May 01, 2024 | 9:07 AM

Share

ಬೆಂಗಳೂರು, ಮೇ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಪರಾಧ ಚಟುವಟಿಕೆಗಳು (Criminal Activities) ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಕೊಡಿಗೇಹಳ್ಳಿಯ (Kodigehalli) ವಿರೂಪಾಕ್ಷಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್​ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಘಟನೆ ಸಂಬಂಧ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದರು.

ಲಾರಿಯನ್ನೇ ಕದ್ದಿದ್ದ ಕಳ್ಳರು ಅಂದರ್

12 ಲಕ್ಷ ರೂಪಾಯಿ ಮೌಲ್ಯದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಬಳಿ ನಡೆದಿದೆ. ಇದೀಗ ಘಟನೆ ಸಂಬಂಧ ಆರೋಪಿಗಳಾದ ರಾಜ, ರಂಜಿತ್ ಕುಮಾರ್ ಎಂಬವರನ್ನು ಭಾರತಿ ನಗರ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಕೋಲ್ಸ್ ಪಾರ್ಕ್ ಪಕ್ಕ ಪಾರ್ಕಿಂಗ್ ಮಾಡಿದ್ದ ತಮಿಳುನಾಡು ನೋಂದಣಿ ಲಾರಿಯನ್ನು ಇವರು ಕಳವು ಮಾಡಿದ್ದರು.

ಇದನ್ನೂ ಓದಿ: ಪ್ರತಿಷ್ಠಿತ ಐಕಿಯಾ ಕಂಪನಿಯ ಹೆಸರಿನಲ್ಲಿ ವಂಚನೆ, ಹಣ ಡಬಲ್ ಆಗುತ್ತದೆಂದು ನಂಬಿಸಿ ಲಕ್ಷಾಂತರ ರೂಪಾಯಿ ಪಂಗನಾಮ

ಆರೋಪಿಗಳನ್ನು ಅನುಮಾನಸ್ಪದ ನಡವಳಿಕೆಯ ಕಾರಣ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಲಾರಿ ಕಳವು ಕೃತ್ಯ ಬಯಲಿಗೆ ಬಂದಿದೆ. ನಂತರ ಅವರನ್ನು ಬಂಧಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Wed, 1 May 24

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!