ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ

ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಸಹಾಯವಾಣಿ ಮೂಲಕ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಲಾರಿಯನ್ನೇ ಕದ್ದ ಇಬ್ಬರು ಖದೀಮರನ್ನು ಬಂಧಿಸಲಾಗಿದೆ.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:May 01, 2024 | 9:07 AM

ಬೆಂಗಳೂರು, ಮೇ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಪರಾಧ ಚಟುವಟಿಕೆಗಳು (Criminal Activities) ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಕೊಡಿಗೇಹಳ್ಳಿಯ (Kodigehalli) ವಿರೂಪಾಕ್ಷಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್​ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಘಟನೆ ಸಂಬಂಧ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದರು.

ಲಾರಿಯನ್ನೇ ಕದ್ದಿದ್ದ ಕಳ್ಳರು ಅಂದರ್

12 ಲಕ್ಷ ರೂಪಾಯಿ ಮೌಲ್ಯದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಬಳಿ ನಡೆದಿದೆ. ಇದೀಗ ಘಟನೆ ಸಂಬಂಧ ಆರೋಪಿಗಳಾದ ರಾಜ, ರಂಜಿತ್ ಕುಮಾರ್ ಎಂಬವರನ್ನು ಭಾರತಿ ನಗರ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಕೋಲ್ಸ್ ಪಾರ್ಕ್ ಪಕ್ಕ ಪಾರ್ಕಿಂಗ್ ಮಾಡಿದ್ದ ತಮಿಳುನಾಡು ನೋಂದಣಿ ಲಾರಿಯನ್ನು ಇವರು ಕಳವು ಮಾಡಿದ್ದರು.

ಇದನ್ನೂ ಓದಿ: ಪ್ರತಿಷ್ಠಿತ ಐಕಿಯಾ ಕಂಪನಿಯ ಹೆಸರಿನಲ್ಲಿ ವಂಚನೆ, ಹಣ ಡಬಲ್ ಆಗುತ್ತದೆಂದು ನಂಬಿಸಿ ಲಕ್ಷಾಂತರ ರೂಪಾಯಿ ಪಂಗನಾಮ

ಆರೋಪಿಗಳನ್ನು ಅನುಮಾನಸ್ಪದ ನಡವಳಿಕೆಯ ಕಾರಣ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಲಾರಿ ಕಳವು ಕೃತ್ಯ ಬಯಲಿಗೆ ಬಂದಿದೆ. ನಂತರ ಅವರನ್ನು ಬಂಧಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Wed, 1 May 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ