AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು

ನಕಲಿ ಡಿಡಿಯನ್ನು ಮುದ್ರಿಸಿ ವಂಚಿಸುತ್ತಿದ್ದ ದಂಪತಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ನಕಲಿ ಡಿಡಿಯನ್ನು ವಶಕ್ಕೆ ಪಡೆಯಲಾಗಿದೆ.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Feb 10, 2021 | 1:43 PM

Share

ಬೆಂಗಳೂರು: ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿಯಾದ ಇಂದ್ರಜಿತ್ ನಾಯಕ್, ಮಂಜುಳಾ ಸೇರಿ ನಾಲ್ವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ನಕಲಿ ಡಿಡಿಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನಕಲಿ ಡಿಡಿಯನ್ನು ಮುದ್ರಿಸಿ ಮಾರ್ವಾಡಿಗಳಿಗೆ ನೀಡುತ್ತಿದ್ದರು. ನಮಗೆ ತುರ್ತಾಗಿ ಹಣದ ಅವಶ್ಯಕತೆ ಇದೆ, ಡಿಡಿ ಮೇಲೆ ಕಮೀಷನ್ ಇಟ್ಟುಕೊಂಡು ಸ್ವಲ್ಪ ಹಣ ಕೊಡಿ ಎಂದು ಡೀಲ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಇಂದ್ರಜಿತ್ ನಾಯಕ್ ಡಿಪ್ಲೊಮಾ ಪದವೀಧರ. ತುಂಬಾ ಹಣ ಗಳಿಸಿ  ಐಷಾರಾಮಿಯಿಂದ ಜೀವನ ಸಾಗಿಸಬೇಕು ಎಂಬುದಾಗಿ ಈ ಕೃತ್ಯಕ್ಕೆ ಇಳಿದಿದ್ದಾನೆ. ಇಂದ್ರಜಿತ್​ ನಾಯಕ್, ಆತನ ಪತ್ನಿ ಮಂಜುಳಾ ಜೊತೆ ಸೇರಿ ನಕಲಿ ಡಿಡಿ ತಯಾರಿಗೆ ಇಳಿದಿದ್ದರು. ಸೀಲುಗಳ ತಯಾರಿ ಮತ್ತು ಕಂಪ್ಯೂಟರ್ ಕೆಲಸಕ್ಕೆ ಇಬ್ಬರು ಅಸಿಸ್ಟೆಂಟ್​ಗಳನ್ನು ಇಟ್ಟಿದ್ದರು. ಈ ನಾಲ್ವರು ಸೇರಿ ನಕಲಿ ಡಿಡಿ ತಯಾರಿಕೆಗೆ ಇಳಿದಿದ್ದು, ಈಗ ಪೊಲೀಸರಿಂದ ಬಂಧಿತರಾಗಿದ್ದಾರೆ.

ಆರೋಪಿ ದಂಪತಿ ಒಂದು ಲಕ್ಷ ಮೌಲ್ಯದ ಡಿಡಿಗೆ 50ದಿಂದ 60 ಸಾವಿರ ಹಣ ಪಡೆಯುತ್ತಿದ್ದರು. ಹೀಗೆ ಹತ್ತಾರು ಮಾರ್ವಾಡಿಗಳಿಗೆ ನಕಲಿ ಡಿಡಿ ಕೊಟ್ಟು ಮಕ್ಮಲ್ ಟೋಪಿ ಹಾಕಿದ್ದರು. ಇತ್ತೀಚಿಗೆ ಬೇಗೂರಿನ ಓರ್ವ ಮಾರ್ವಾಡಿಗೆ ನಾಲ್ಕು ಲಕ್ಷದ ನಕಲಿ ಡಿಡಿ ಕೊಟ್ಟು ಚೀಟಿಂಗ್ ಮಾಡಿದ್ದರು. ಈ ನಿಟ್ಟಿನಲ್ಲಿ ಮೋಸ ಹೋದ ಮಾರ್ವಾಡಿ ಬೇಗೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಡಿಡಿ ತಯಾರಿಸಲು ಬಳಸಿದ್ದ ಕಂಪ್ಯೂಟರ್, ನಕಲಿ ಸೀಲುಗಳನ್ನು ಜಪ್ತಿ ಮಾಡಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ