Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು

ನಕಲಿ ಡಿಡಿಯನ್ನು ಮುದ್ರಿಸಿ ವಂಚಿಸುತ್ತಿದ್ದ ದಂಪತಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ನಕಲಿ ಡಿಡಿಯನ್ನು ವಶಕ್ಕೆ ಪಡೆಯಲಾಗಿದೆ.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 10, 2021 | 1:43 PM

ಬೆಂಗಳೂರು: ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿಯಾದ ಇಂದ್ರಜಿತ್ ನಾಯಕ್, ಮಂಜುಳಾ ಸೇರಿ ನಾಲ್ವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ನಕಲಿ ಡಿಡಿಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನಕಲಿ ಡಿಡಿಯನ್ನು ಮುದ್ರಿಸಿ ಮಾರ್ವಾಡಿಗಳಿಗೆ ನೀಡುತ್ತಿದ್ದರು. ನಮಗೆ ತುರ್ತಾಗಿ ಹಣದ ಅವಶ್ಯಕತೆ ಇದೆ, ಡಿಡಿ ಮೇಲೆ ಕಮೀಷನ್ ಇಟ್ಟುಕೊಂಡು ಸ್ವಲ್ಪ ಹಣ ಕೊಡಿ ಎಂದು ಡೀಲ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಇಂದ್ರಜಿತ್ ನಾಯಕ್ ಡಿಪ್ಲೊಮಾ ಪದವೀಧರ. ತುಂಬಾ ಹಣ ಗಳಿಸಿ  ಐಷಾರಾಮಿಯಿಂದ ಜೀವನ ಸಾಗಿಸಬೇಕು ಎಂಬುದಾಗಿ ಈ ಕೃತ್ಯಕ್ಕೆ ಇಳಿದಿದ್ದಾನೆ. ಇಂದ್ರಜಿತ್​ ನಾಯಕ್, ಆತನ ಪತ್ನಿ ಮಂಜುಳಾ ಜೊತೆ ಸೇರಿ ನಕಲಿ ಡಿಡಿ ತಯಾರಿಗೆ ಇಳಿದಿದ್ದರು. ಸೀಲುಗಳ ತಯಾರಿ ಮತ್ತು ಕಂಪ್ಯೂಟರ್ ಕೆಲಸಕ್ಕೆ ಇಬ್ಬರು ಅಸಿಸ್ಟೆಂಟ್​ಗಳನ್ನು ಇಟ್ಟಿದ್ದರು. ಈ ನಾಲ್ವರು ಸೇರಿ ನಕಲಿ ಡಿಡಿ ತಯಾರಿಕೆಗೆ ಇಳಿದಿದ್ದು, ಈಗ ಪೊಲೀಸರಿಂದ ಬಂಧಿತರಾಗಿದ್ದಾರೆ.

ಆರೋಪಿ ದಂಪತಿ ಒಂದು ಲಕ್ಷ ಮೌಲ್ಯದ ಡಿಡಿಗೆ 50ದಿಂದ 60 ಸಾವಿರ ಹಣ ಪಡೆಯುತ್ತಿದ್ದರು. ಹೀಗೆ ಹತ್ತಾರು ಮಾರ್ವಾಡಿಗಳಿಗೆ ನಕಲಿ ಡಿಡಿ ಕೊಟ್ಟು ಮಕ್ಮಲ್ ಟೋಪಿ ಹಾಕಿದ್ದರು. ಇತ್ತೀಚಿಗೆ ಬೇಗೂರಿನ ಓರ್ವ ಮಾರ್ವಾಡಿಗೆ ನಾಲ್ಕು ಲಕ್ಷದ ನಕಲಿ ಡಿಡಿ ಕೊಟ್ಟು ಚೀಟಿಂಗ್ ಮಾಡಿದ್ದರು. ಈ ನಿಟ್ಟಿನಲ್ಲಿ ಮೋಸ ಹೋದ ಮಾರ್ವಾಡಿ ಬೇಗೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಡಿಡಿ ತಯಾರಿಸಲು ಬಳಸಿದ್ದ ಕಂಪ್ಯೂಟರ್, ನಕಲಿ ಸೀಲುಗಳನ್ನು ಜಪ್ತಿ ಮಾಡಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ