AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು

ನಕಲಿ ಡಿಡಿಯನ್ನು ಮುದ್ರಿಸಿ ವಂಚಿಸುತ್ತಿದ್ದ ದಂಪತಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ನಕಲಿ ಡಿಡಿಯನ್ನು ವಶಕ್ಕೆ ಪಡೆಯಲಾಗಿದೆ.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Feb 10, 2021 | 1:43 PM

Share

ಬೆಂಗಳೂರು: ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿಯಾದ ಇಂದ್ರಜಿತ್ ನಾಯಕ್, ಮಂಜುಳಾ ಸೇರಿ ನಾಲ್ವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ನಕಲಿ ಡಿಡಿಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನಕಲಿ ಡಿಡಿಯನ್ನು ಮುದ್ರಿಸಿ ಮಾರ್ವಾಡಿಗಳಿಗೆ ನೀಡುತ್ತಿದ್ದರು. ನಮಗೆ ತುರ್ತಾಗಿ ಹಣದ ಅವಶ್ಯಕತೆ ಇದೆ, ಡಿಡಿ ಮೇಲೆ ಕಮೀಷನ್ ಇಟ್ಟುಕೊಂಡು ಸ್ವಲ್ಪ ಹಣ ಕೊಡಿ ಎಂದು ಡೀಲ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಇಂದ್ರಜಿತ್ ನಾಯಕ್ ಡಿಪ್ಲೊಮಾ ಪದವೀಧರ. ತುಂಬಾ ಹಣ ಗಳಿಸಿ  ಐಷಾರಾಮಿಯಿಂದ ಜೀವನ ಸಾಗಿಸಬೇಕು ಎಂಬುದಾಗಿ ಈ ಕೃತ್ಯಕ್ಕೆ ಇಳಿದಿದ್ದಾನೆ. ಇಂದ್ರಜಿತ್​ ನಾಯಕ್, ಆತನ ಪತ್ನಿ ಮಂಜುಳಾ ಜೊತೆ ಸೇರಿ ನಕಲಿ ಡಿಡಿ ತಯಾರಿಗೆ ಇಳಿದಿದ್ದರು. ಸೀಲುಗಳ ತಯಾರಿ ಮತ್ತು ಕಂಪ್ಯೂಟರ್ ಕೆಲಸಕ್ಕೆ ಇಬ್ಬರು ಅಸಿಸ್ಟೆಂಟ್​ಗಳನ್ನು ಇಟ್ಟಿದ್ದರು. ಈ ನಾಲ್ವರು ಸೇರಿ ನಕಲಿ ಡಿಡಿ ತಯಾರಿಕೆಗೆ ಇಳಿದಿದ್ದು, ಈಗ ಪೊಲೀಸರಿಂದ ಬಂಧಿತರಾಗಿದ್ದಾರೆ.

ಆರೋಪಿ ದಂಪತಿ ಒಂದು ಲಕ್ಷ ಮೌಲ್ಯದ ಡಿಡಿಗೆ 50ದಿಂದ 60 ಸಾವಿರ ಹಣ ಪಡೆಯುತ್ತಿದ್ದರು. ಹೀಗೆ ಹತ್ತಾರು ಮಾರ್ವಾಡಿಗಳಿಗೆ ನಕಲಿ ಡಿಡಿ ಕೊಟ್ಟು ಮಕ್ಮಲ್ ಟೋಪಿ ಹಾಕಿದ್ದರು. ಇತ್ತೀಚಿಗೆ ಬೇಗೂರಿನ ಓರ್ವ ಮಾರ್ವಾಡಿಗೆ ನಾಲ್ಕು ಲಕ್ಷದ ನಕಲಿ ಡಿಡಿ ಕೊಟ್ಟು ಚೀಟಿಂಗ್ ಮಾಡಿದ್ದರು. ಈ ನಿಟ್ಟಿನಲ್ಲಿ ಮೋಸ ಹೋದ ಮಾರ್ವಾಡಿ ಬೇಗೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಡಿಡಿ ತಯಾರಿಸಲು ಬಳಸಿದ್ದ ಕಂಪ್ಯೂಟರ್, ನಕಲಿ ಸೀಲುಗಳನ್ನು ಜಪ್ತಿ ಮಾಡಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್