AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು

ನಕಲಿ ಡಿಡಿಯನ್ನು ಮುದ್ರಿಸಿ ವಂಚಿಸುತ್ತಿದ್ದ ದಂಪತಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ನಕಲಿ ಡಿಡಿಯನ್ನು ವಶಕ್ಕೆ ಪಡೆಯಲಾಗಿದೆ.

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ; ಆರೋಪಿಗಳನ್ನು ಬಂಧಿಸಿದ ಬೇಗೂರು ಪೊಲೀಸರು
ಪ್ರಾತಿನಿಧಿಕ ಚಿತ್ರ
shruti hegde
| Edited By: ಸಾಧು ಶ್ರೀನಾಥ್​|

Updated on: Feb 10, 2021 | 1:43 PM

Share

ಬೆಂಗಳೂರು: ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿಯಾದ ಇಂದ್ರಜಿತ್ ನಾಯಕ್, ಮಂಜುಳಾ ಸೇರಿ ನಾಲ್ವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ನಕಲಿ ಡಿಡಿಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ನಕಲಿ ಡಿಡಿಯನ್ನು ಮುದ್ರಿಸಿ ಮಾರ್ವಾಡಿಗಳಿಗೆ ನೀಡುತ್ತಿದ್ದರು. ನಮಗೆ ತುರ್ತಾಗಿ ಹಣದ ಅವಶ್ಯಕತೆ ಇದೆ, ಡಿಡಿ ಮೇಲೆ ಕಮೀಷನ್ ಇಟ್ಟುಕೊಂಡು ಸ್ವಲ್ಪ ಹಣ ಕೊಡಿ ಎಂದು ಡೀಲ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಇಂದ್ರಜಿತ್ ನಾಯಕ್ ಡಿಪ್ಲೊಮಾ ಪದವೀಧರ. ತುಂಬಾ ಹಣ ಗಳಿಸಿ  ಐಷಾರಾಮಿಯಿಂದ ಜೀವನ ಸಾಗಿಸಬೇಕು ಎಂಬುದಾಗಿ ಈ ಕೃತ್ಯಕ್ಕೆ ಇಳಿದಿದ್ದಾನೆ. ಇಂದ್ರಜಿತ್​ ನಾಯಕ್, ಆತನ ಪತ್ನಿ ಮಂಜುಳಾ ಜೊತೆ ಸೇರಿ ನಕಲಿ ಡಿಡಿ ತಯಾರಿಗೆ ಇಳಿದಿದ್ದರು. ಸೀಲುಗಳ ತಯಾರಿ ಮತ್ತು ಕಂಪ್ಯೂಟರ್ ಕೆಲಸಕ್ಕೆ ಇಬ್ಬರು ಅಸಿಸ್ಟೆಂಟ್​ಗಳನ್ನು ಇಟ್ಟಿದ್ದರು. ಈ ನಾಲ್ವರು ಸೇರಿ ನಕಲಿ ಡಿಡಿ ತಯಾರಿಕೆಗೆ ಇಳಿದಿದ್ದು, ಈಗ ಪೊಲೀಸರಿಂದ ಬಂಧಿತರಾಗಿದ್ದಾರೆ.

ಆರೋಪಿ ದಂಪತಿ ಒಂದು ಲಕ್ಷ ಮೌಲ್ಯದ ಡಿಡಿಗೆ 50ದಿಂದ 60 ಸಾವಿರ ಹಣ ಪಡೆಯುತ್ತಿದ್ದರು. ಹೀಗೆ ಹತ್ತಾರು ಮಾರ್ವಾಡಿಗಳಿಗೆ ನಕಲಿ ಡಿಡಿ ಕೊಟ್ಟು ಮಕ್ಮಲ್ ಟೋಪಿ ಹಾಕಿದ್ದರು. ಇತ್ತೀಚಿಗೆ ಬೇಗೂರಿನ ಓರ್ವ ಮಾರ್ವಾಡಿಗೆ ನಾಲ್ಕು ಲಕ್ಷದ ನಕಲಿ ಡಿಡಿ ಕೊಟ್ಟು ಚೀಟಿಂಗ್ ಮಾಡಿದ್ದರು. ಈ ನಿಟ್ಟಿನಲ್ಲಿ ಮೋಸ ಹೋದ ಮಾರ್ವಾಡಿ ಬೇಗೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಡಿಡಿ ತಯಾರಿಸಲು ಬಳಸಿದ್ದ ಕಂಪ್ಯೂಟರ್, ನಕಲಿ ಸೀಲುಗಳನ್ನು ಜಪ್ತಿ ಮಾಡಲಾಗಿದೆ.

ನಕಲಿ ನೋಟು ಜಾಲ ಪತ್ತೆ : ಮೂವರು ಆರೋಪಿಗಳ ಬಂಧನ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ