AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ಸೈಡ್ ಕೊಡದ ಬೆಂಗಳೂರಿನ ಬೈಕ್ ಸವಾರನಿಗೆ ಶೂಟ್ ಮಾಡಿದ ಲ್ಯಾಂಡ್ ರೋವರ್ ಕಾರು ಚಾಲಕ

Bangalore Crime: ಬುಧವಾರ ರಾತ್ರಿ 9.30ರ ವೇಳೆಗೆ ಬೆಂಗಳೂರಿನ ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜಿನ ಬಳಿ ಬೈಕ್ ಸವಾರನ ಮೇಲೆ ಕಾರು ಚಾಲಕ ಗುಂಡಿನ ದಾಳಿ ನಡೆಸಿದ್ದಾನೆ.

Bangalore Crime: ಸೈಡ್ ಕೊಡದ ಬೆಂಗಳೂರಿನ ಬೈಕ್ ಸವಾರನಿಗೆ ಶೂಟ್ ಮಾಡಿದ ಲ್ಯಾಂಡ್ ರೋವರ್ ಕಾರು ಚಾಲಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 16, 2021 | 12:52 PM

Share

ಬೆಂಗಳೂರು: ರಸ್ತೆಯಲ್ಲಿ ತನಗೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನ ಬೈಕ್ ಸವಾರನ ಮೇಲೆ ಲ್ಯಾಂಡ್ ರೋವರ್ ಕಾರು ಚಾಲಕ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ರಸ್ತೆಯಲ್ಲಿ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಶೂಟ್ ಮಾಡಿದ್ದು, ಬೈಕ್ ಸವಾರ ಪರಾರಿಯಾಗಿದ್ದಾರೆ.

ಬುಧವಾರ ರಾತ್ರಿ 9.30ರ ವೇಳೆಗೆ ಬೆಂಗಳೂರಿನ ಎಂಎಸ್ ರಾಮಯ್ಯ ವೈದ್ಯಕೀಯ ಕಾಲೇಜಿನ ಬಳಿ ಗುಂಡಿನ ದಾಳಿ ನಡೆಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಅನಿಲ್ ಯಾವುದೇ ಅಪಾಯವಿಲ್ಲದೆ ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ತೆರಳಿದ ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ನೀಡಿದ ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಲ್ಯಾಂಡ್ ರೋವರ್ ಚಾಲಕನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ರವೀಶ್ ಗೌಡ ಎಂದು ಗುರುತಿಸಲಾಗಿದೆ. ಆತ ಐಷಾರಾಮಿ ಲ್ಯಾಂಡ್ ರೋವರ್ ಎಸ್‌ಯುವಿಯನ್ನು ಓಡಿಸುತ್ತಿದ್ದ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಧರ್ಮೇಂದರ್ ಕುಮಾರ್ ಮೀನಾ ಹೇಳಿದ್ದಾರೆ. ಆತನನ್ನು ಗುರುವಾರ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಿರಿದಾದ ರಸ್ತೆಯಲ್ಲಿ ಹಿಂದೆ ಬರುತ್ತಿದ್ದ ಲ್ಯಾಂಡ್ ರೋವರ್ ಕಾರಿಗೆ ಬೈಕ್ ಸವಾರ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಮೊದಲು ಜಗಳ ಆರಂಭವಾಯಿತು. ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದ ನಂತರ ಆರೋಪಿ ರವೀಶ್ ಗೌಡ ತನ್ನ ಬಂದೂಕನ್ನು ತೆಗೆದು ಶೂಟ್ ಮಾಡಿದ್ದಾರೆ. ಅಷ್ಟರಲ್ಲಿ ಬೈಕ್ ಸವಾರ ಪರಾರಿಯಾಗಿದ್ದರಿಂದ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಗನ್​ಗೆ ಲೈಸೆನ್ಸ್ ಇತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿ ವಿರುದ್ಧ ಕೊಲೆ ಪ್ರಯತ್ನದ ಆರೋಪದಲ್ಲಿ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ವಾಲಿದ 3 ಅಂತಸ್ತಿನ ಕಟ್ಟಡ; ಹಲವು ಕುಟುಂಬಗಳ ಸ್ಥಳಾಂತರ

ಮೂತ್ರ ವಿಸರ್ಜಿಸುವಾಗ ಕಿಸೆಯಲ್ಲಿದ್ದ ಪಿಸ್ತೂಲ್​ನಿಂದ ಆಕಸ್ಮಿಕವಾಗಿ ಹಾರಿದ ಗುಂಡು; ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ ವ್ಯಕ್ತಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!