AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ವ್ಯಸನಿ ಮಗನಿಗೆ ಸೀಮೆಎಣ್ಣೆ ಸುರಿದು ಕೊಲ್ಲುವುದಾಗಿ ಬೆದರಿಸಲು ಹೋದ ಮಹಿಳೆ; ಸಂಭವಿಸಿತು ದುರಂತ

ಪಾಷಾ ಹತ್ತು ವರ್ಷಗಳ ಹಿಂದೆ ಪತ್ನಿಯನ್ನು ತೊರೆದು ಚಿಕ್ಕಬಾಣಾವರದ ಜನತಾ ಕಾಲೋನಿಯಲ್ಲಿರುವ ತನ್ನ ತಾಯಿ ಮನೆಯಲ್ಲಿ ವಾಸವಾಗಿದ್ದರು. ಅವರು ಪ್ರತಿದಿನ ಕುಡಿಯುತ್ತಿದ್ದರು ಮತ್ತು ಹೆಚ್ಚಿನ ದಿನಗಳಲ್ಲಿ ಬೀದಿಗಳಲ್ಲಿ ಮಲಗುತ್ತಿದ್ದರು ಎಂದು ವರದಿಯಾಗಿದೆ.

ಮದ್ಯ ವ್ಯಸನಿ ಮಗನಿಗೆ ಸೀಮೆಎಣ್ಣೆ ಸುರಿದು ಕೊಲ್ಲುವುದಾಗಿ ಬೆದರಿಸಲು ಹೋದ ಮಹಿಳೆ; ಸಂಭವಿಸಿತು ದುರಂತ
ಚಾಂದ್ ಪಾಷಾ
Follow us
TV9 Web
| Updated By: Ganapathi Sharma

Updated on: Jul 18, 2023 | 5:48 PM

ಬೆಂಗಳೂರು: ಮದ್ಯ ವ್ಯಸನಿ ಮಗನಿಗೆ ಸೀಮೆಎಣ್ಣೆ ಸುರಿದು ಕೊಲ್ಲುವುದಾಗಿ ಬೆದರಿಸಲು ಹೋದ ಮಹಿಳೆಯೊಬ್ಬರು ಬೆಂಕಿ ಕಡ್ಡಿ ಗೀರಿದ್ದರಿಂದ ಅನಾಹುತ ಸಂಭವಿಸಿದೆ. ಧಗ್ಗನೆ ಹೊತ್ತಿಕೊಂಡ ಬೆಂಕಿ ಆತನನ್ನು ಸಂಪೂರ್ಣ ಸುಟ್ಟುಹಾಕಿದ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಚಿಕ್ಕಬಾಣಾವರದಲ್ಲಿ (Chikkabanavara) ಸೋಮವಾರ ನಡೆದಿದೆ. ಮೃತರನ್ನು 40 ವರ್ಷ ವಯಸ್ಸಿನ ಚಾಂದ್ ಪಾಷಾ ಎಂದು ಗುರುತಿಸಲಾಗಿದೆ. ಇವರು ಮದ್ಯವ್ಯಸನಿಯಾಗಿದ್ದು, ಪ್ರತಿನಿತ್ಯ ಮದ್ಯಪಾನ ಮಾಡಿ ಬಂದು ತನ್ನ ತಾಯಿಗೆ ತೊಂದರೆ ನೀಡುತ್ತಿದ್ದರು ಎನ್ನಲಾಗಿದೆ.

ಮದ್ಯಪಾನ ಮಾಡಿ ಬಂದ ಪಾಷಾರನ್ನು ಹೆದರಿಸಲೆಂದು ಅವರ ತಾಯಿ ಸೂಫಿಯಾ ಬಿ ಮಗನ ಮೇಲೆ ಸೀಮೆಎಣ್ಣೆ ಸುರಿದಿದ್ದಾರೆ. ನಂತರ ಬೆಂಕಿ ಕಡ್ಡಿ ಗೀರಿ ಹೆದರಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ಗೀರಿದ್ದ ಬೆಂಕಿಕಡ್ಡಿಯಿಂದ ಕಿಡಿ ಸೀಮೆಎಣ್ಣೆಗೆ ತಗುಲಿ ಧಗ್ಗನೆ ಬೆಂಕಿ ಹೊತ್ತಿಕೊಂಡಿದೆ. ಹೊಗೆಯನ್ನು ಕಂಡ ನೆರೆಹೊರೆಯವರು ಸೂಫಿಯಾ ಅವರ ಮನೆಗೆ ಧಾವಿಸಿದರು. ಆದರೆ, ಆ ವೇಳೆಗೆ ಪಾಷಾ ಬೆಂಕಿಯಲ್ಲಿ ಸುಟ್ಟು ಹೋಗಿದ್ದರು.

ಹೊಗೆ ಬರುವುದನ್ನು ನೋಡಿದ ನಂತರ ನಾನು ಪಾಷಾ ಅವರ ಮನೆಗೆ ಪ್ರವೇಶಿಸಿದೆ. ನಾನು ಬೆಂಕಿಯನ್ನು ನಂದಿಸಲು ನೀರು ಸುರಿಯಲು ಪ್ರಯತ್ನಿಸಿದೆ. ಆದರೆ ಮಹಿಳೆ ನನ್ನನ್ನು ತಡೆದರು. ನಾನು ಬೆಂಕಿಯನ್ನು ನಂದಿಸಿದ ನಂತರ ವ್ಯಕ್ತಿ ನಿಶ್ಚಲವಾಗಿದ್ದರು. ಪಾಷಾ ಯಾವಾಗಲೂ ಕುಡಿದು ಮನೆಗೆ ಬರುತ್ತಿದ್ದರು ಎಂದು ಅವರ ನೆರೆಹೊರೆಯವರಾದ ಮೊಹಮ್ಮದ್ ತಮೀಮ್ ಹೇಳಿದ್ದಾರೆ.

ಪಾಷಾ ಹತ್ತು ವರ್ಷಗಳ ಹಿಂದೆ ಪತ್ನಿಯನ್ನು ತೊರೆದು ಚಿಕ್ಕಬಾಣಾವರದ ಜನತಾ ಕಾಲೋನಿಯಲ್ಲಿರುವ ತನ್ನ ತಾಯಿ ಮನೆಯಲ್ಲಿ ವಾಸವಾಗಿದ್ದರು. ಅವರು ಪ್ರತಿದಿನ ಕುಡಿಯುತ್ತಿದ್ದರು ಮತ್ತು ಹೆಚ್ಚಿನ ದಿನಗಳಲ್ಲಿ ಬೀದಿಗಳಲ್ಲಿ ಮಲಗುತ್ತಿದ್ದರು ಎಂದು ವರದಿಯಾಗಿದೆ. ಮಗನ ವರ್ತನೆಯ ಬಗ್ಗೆ ನಿವಾಸಿಗಳು ಸೂಫಿಯಾ ಅವರಿಗೆ ದೂರು ನೀಡಿದ್ದರು. ವರದಿಗಳ ಪ್ರಕಾರ ಸೂಫಿಯಾ ತನ್ನ ಮಗನ ಚಟದಿಂದ ಬೇಸತ್ತಿದ್ದರು.

ಇದನ್ನೂ ಓದಿ: IKEAದಲ್ಲಿ ಮಹಿಳೆಯೊಬ್ಬರ ಊಟದ ಟೇಬಲ್​ ಮೇಲೆ ಬಿದ್ದ ಸತ್ತ ಇಲಿ

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಫಿಯಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು