AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಬೆಳಗ್ಗೆ ಎದ್ದಾಗ ಕತ್ತು ಸೀಳಿದ ಗೆಳತಿಯ ಶವ ಕಂಡು ಯುವತಿ ಶಾಕ್; ಬೆಂಗಳೂರಿನಲ್ಲೊಂದು ಬರ್ಬರ ಹತ್ಯೆ

Shocking News: ಬೆಂಗಳೂರಿನಲ್ಲಿ ಒಂದು ಆಚ್ಚರಿಯ ಕೃತ್ಯ ನಡೆದಿದ್ದು, ರಾತ್ರಿ ಮಲಗಿದ್ದಾಗ ತನ್ನ ಗಂಡ ತನಗೆ ಹಿಂಸೆ ಕೊಡುತ್ತಿದ್ದಾನೆ ಎಂದು ಸ್ನೇಹಿತೆಯ ಬಳಿ ಹೇಳಿಕೊಂಡಿದ್ದ ಗೆಳತಿಯೊಬ್ಬಳು ಬೆಳಗ್ಗೆ ಆಕೆಯ ಪಕ್ಕದಲ್ಲಿ ಬೆಡ್​ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ. ವಿಚಿತ್ರವೆಂದರೆ ಆಕೆಯ ಪಕ್ಕದಲ್ಲೇ ಮಲಗಿದ್ದ ಯುವತಿಗೆ ತನ್ನ ಪಕ್ಕದಲ್ಲಿ ಕೊಲೆಯಾಗಿದ್ದೇ ಗೊತ್ತಾಗಿಲ್ಲ.

Bengaluru Crime: ಬೆಳಗ್ಗೆ ಎದ್ದಾಗ ಕತ್ತು ಸೀಳಿದ ಗೆಳತಿಯ ಶವ ಕಂಡು ಯುವತಿ ಶಾಕ್; ಬೆಂಗಳೂರಿನಲ್ಲೊಂದು ಬರ್ಬರ ಹತ್ಯೆ
ಗಂಡ ಕಿರಣ್ ಜೊತೆ ನವ್ಯಶ್ರೀImage Credit source: news18
ಸುಷ್ಮಾ ಚಕ್ರೆ
|

Updated on: Aug 29, 2024 | 5:56 PM

Share

ಬೆಂಗಳೂರು: ಬೆಂಗಳೂರಿನ ಯುವತಿಯೊಬ್ಬರು ಬೆಳಿಗ್ಗೆ ಎದ್ದಾಗ ತನ್ನ ಸ್ನೇಹಿತೆ ಹಾಸಿಗೆಯಲ್ಲಿ ತನ್ನ ಪಕ್ಕದಲ್ಲಿ ಶವವಾಗಿ ಬಿದ್ದಿರುವುದನ್ನು ಕಂಡು ಶಾಕ್ ಆಗಿದ್ದಾರೆ. ರಾತ್ರಿ ಮಲಗಿದಾಗ ಆಕೆಯ ಗಂಟಲು ಸೀಳಿ ಕೊಲೆ ಮಾಡಲಾಗಿತ್ತು. ಆಕೆಯ ದೇಹವು ರಕ್ತದ ಮಡುವಿನಲ್ಲಿ ಮುಳುಗಿತ್ತು. ಆದರೂ ಈ ವಿಷಯ ಪಕ್ಕದಲ್ಲಿ ಮಲಗಿದ್ದ ಗೆಳತಿಗೆ ಗೊತ್ತಾಗಲೇ ಇಲ್ಲ. ಕೊಲೆ ನಡೆಯುವ ಹಿಂದಿನ ರಾತ್ರಿ ಆಕೆಯ ಬಳಿ ಆಕೆಯ ಸ್ನೇಹಿತೆ ತನ್ನ ಗಂಡನ ದುರ್ನಡತೆಯ ಬಗ್ಗೆ ಹೇಳಿಕೊಂಡಿದ್ದಳು. ನಮ್ಮ ಸಂಸಾರ ಚೆನ್ನಾಗಿಲ್ಲ. ಇಬ್ಬರ ಮಧ್ಯೆ ವೈವಾಹಿಕ ಭಿನ್ನಾಭಿಪ್ರಾಯವಿದೆ ಎಂದು ಅವಳಲ್ಲಿ ಹೇಳಿಕೊಂಡಿದ್ದಳು. ನನಗೆ ಜೀವ ಬೆದರಿಕೆಯಿದೆ. ನನ್ನ ಪ್ರಾಣಕ್ಕೆ ಯಾವಾಗ ಬೇಕಾದರೂ ತೊಂದರೆ ಆಗಬಹುದು ಎಂದು ಹೇಳಿದ್ದಳು. ಆದರೆ, ಅದೇ ರಾತ್ರಿ ಆಕೆಯ ಕೊಲೆಯಾಗಿದೆ.

ಮೃತ ಮಹಿಳೆಯನ್ನು ಬಿ. ನವ್ಯಶ್ರೀ ಎಂದು ಗುರುತಿಸಲಾಗಿದ್ದು, 28ರ ಹರೆಯದ ನೃತ್ಯ ತರಬೇತುದಾರಳಾಗಿ ಕೆಲಸ ಮಾಡುತ್ತಿದ್ದಳು. ಇದರ ಜೊತೆ ಆ್ಯಂಕರ್ ಆಗಿಯೂ ಕೆಲಸ ನಿರ್ವಹಿಸುತ್ತಿದ್ದಳು. ಬೆಂಗಳೂರಿನ ಕೆಂಗೇರಿ ಉಪನಗರದ ಎಸ್‌ಎಂವಿ ಲೇಔಟ್‌ನಲ್ಲಿರುವ ಬಾಡಿಗೆ ಮನೆಯಲ್ಲಿ ಪತಿ ಕಿರಣ್ ಜೊತೆ ಆಕೆ ವಾಸವಿದ್ದರು. ಕೊಲೆ ಆರೋಪದ ಮೇಲೆ ಕ್ಯಾಬ್ ಚಾಲಕನಾಗಿರುವ ಆಕೆಯ ಪತಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನವ್ಯಶ್ರೀ ಅವರ ಸ್ನೇಹಿತೆ ಐಶ್ವರ್ಯ ಎಂಬಾಕೆಯ ಮನೆಯಲ್ಲಿ ಈ ಕೊಲೆ ನಡೆದಿದೆ. ರಾತ್ರಿ ಐಶ್ವರ್ಯಳ ಬಳಿ ತನ್ನ ವೈವಾಹಿಕ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದ ನವ್ಯಶ್ರೀ ಆಕೆಯ ಪಕ್ಕದಲ್ಲೇ ಹಾಸಿಗೆ ಮೇಲೆ ಮಲಗಿದ್ದಳು. ಮರುದಿನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಐಶ್ವರ್ಯ ಎದ್ದಾಗ ಆಕೆಯ ಪಕ್ಕದಲ್ಲಿ ಮಲಗಿದ್ದ ನವ್ಯಶ್ರೀ ಕೊಲೆಯಾಗಿತ್ತು. ಆಕೆಯ ಕತ್ತು ಸೀಳಲಾಗಿತ್ತು. ಇದನ್ನು ಕಂಡು ಶಾಕ್ ಆದ ಆಕೆ ನೆರೆಹೊರೆಯವರಿಗೆ ವಿಷಯ ತಿಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ನ್ಯೂಸ್​18 ವರದಿ ಮಾಡಿದೆ.

ಇದನ್ನೂ ಓದಿ: Viral Video: ಚಿಕ್ಕ ಮಗುವನ್ನು ಕೂರಿಸಿಕೊಂಡು ಸ್ಟಂಟ್ ಮಾಡುವಾಗ ಬೈಕ್​ಗೆ ಅಡ್ಡಬಂದ ಗೂಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಪೊಲೀಸರಿಗೆ ನೀಡಿದ ದೂರಿನಲ್ಲಿ, ನವ್ಯಶ್ರೀ ತನ್ನ ಮನೆಯಲ್ಲಿ ಗಂಡನಿಂದ ಸುರಕ್ಷತೆಯಿಲ್ಲದ ಕಾರಣದಿಂದ ಹೆದರಿ ತನ್ನ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಳು. ಇಬ್ಬರೂ ರಾತ್ರಿ ಬಿಯರ್ ಕುಡಿದು ಮಲಗಿದ್ದೆವು. ಆದರೆ ಬೆಳಗಾಗುವಷ್ಟರಲ್ಲಿ ನಮ್ಮ ರೂಮಿನಲ್ಲೇ ಆಕೆಯ ಕೊಲೆಯಾಗಿದೆ ಎಂದು ತಿಳಿಸಿದ್ದಾರೆ.

ನವ್ಯಶ್ರೀ ಅವರ ಪತಿ ಕಿರಣ್ ಬೆಳಗಿನ ಜಾವ 5.30ರ ಸುಮಾರಿಗೆ ತಮ್ಮ ಮನೆಗೆ ನುಗ್ಗಿ, ಇಬ್ಬರೂ ಗಾಢ ನಿದ್ದೆಯಲ್ಲಿದ್ದಾಗ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕತ್ತು ಸೀಳುವ ಮುನ್ನ ನವ್ಯಶ್ರೀಗೆ ಚಿತ್ರಹಿಂಸೆ ನೀಡಿದ ಕುರುಹುಗಳಿವೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ ನವ್ಯಶ್ರೀ ಶಿವಮೊಗ್ಗ ಜಿಲ್ಲೆಯವರು. ಮೂರು ವರ್ಷಗಳ ಹಿಂದೆ, ಅವರು ಮತ್ತು ಕಿರಣ್ ತಮ್ಮ ಕುಟುಂಬದಿಂದ ತೀವ್ರ ವಿರೋಧವನ್ನು ಎದುರಿಸಿ, ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಳೆದ ವರ್ಷದಿಂದ ಅವರಿಬ್ಬರ ಮಧ್ಯೆ ಸಮಸ್ಯೆಗಳಿದ್ದವು.

ಇದನ್ನೂ ಓದಿ: Shocking Video: ಗುಪ್ತಾಂಗಕ್ಕೆ ಮೆಣಸಿನ ಪುಡಿ ತುಂಬಿ ಚಿತ್ರಹಿಂಸೆ; ಶಾಕಿಂಗ್ ವಿಡಿಯೋ ವೈರಲ್

ನವ್ಯಶ್ರೀ ತಮ್ಮ ಬಾಲ್ಯದ ಗೆಳತಿಯಾಗಿರುವ ಐಶ್ವರ್ಯಾ ಜೊತೆ ಬಹಳ ಅನ್ಯೋನ್ಯವಾಗಿದ್ದರು. ಮನೆಯಲ್ಲಿ ಜಗಳ ನಡೆದಾಗಲೆಲ್ಲ ಐಶ್ವರ್ಯಳ ಮನೆಗೆ ಬಂದು ಉಳಿಯುತ್ತಿದ್ದರು. ನವ್ಯಶ್ರೀ ಡ್ಯಾನ್ಸರ್ ಮತ್ತು ಆ್ಯಂಕರ್ ಆಗಿರುವುದರಿಂದ ಆಕೆಯ ವೃತ್ತಿಗಾಗಿi ಹೊರಗೆ ಕಾಲ ಕಳೆಯುತ್ತಿದ್ದ ಬಗ್ಗೆ ಅತೃಪ್ತಿ ಹೊಂದಿದ್ದ ಕಿರಣ್‌ ಸದಾ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ಈ ಘಟನೆಯ ಹಿಂದಿನ ರಾತ್ರಿಯೂ ಜೋರಾಗಿ ಗಲಾಟೆ ಮಾಡಿಕೊಂಡು ನವ್ಯಶ್ರೀ ತನ್ನ ಸ್ನೇಹಿತೆಯ ಮನೆಗೆ ಬಂದಿದ್ದರು. ಅವರಿಬ್ಬರೂ ಸೇರಿ ಪೊಲೀಸರಿಗೆ ಕಿರಣ್ ವಿರುದ್ಧ ದೂರು ನೀಡಿದ್ದರು. ಅದಾದ ನಂತರ ಅವರ ಸ್ನೇಹಿತನೊಬ್ಬ ಅವರಿಬ್ಬರನ್ನೂ ಐಶ್ವರ್ಯಳ ಮನೆಗೆ ಡ್ರಾಪ್ ಮಾಡಿದ್ದ. ರಾತ್ರಿ 12 ಗಂಟೆ ಸುಮಾರಿಗೆ ಆ ಇಬ್ಬರೂ ಯುವತಿಯರು ಊಟ ಮಾಡಿ ಬಿಯರ್ ಸೇವಿಸಿ ಗಾಢ ನಿದ್ರೆಗೆ ಜಾರಿದ್ದರು. ಬೆಳಿಗ್ಗೆ ಐಶ್ವರ್ಯಳ ಕೈಗೆ ತಣ್ಣನೆಯ ವಸ್ತು ತಾಗಿದಂತಾಗಿ ಎಚ್ಚರಗೊಂಡರು. ಆಗ ಆಕೆಯ ಪಕ್ಕದಲ್ಲಿ ಮಲಗಿದ್ದ ನವ್ಯಶ್ರೀ ಕುತ್ತಿಗೆ ಸೀಳಿ ಕೊಲೆ ಮಾಡಿರುವುದನ್ನು ಕಂಡು ಆಘಾತಕ್ಕೊಳಗಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?