AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

2017ರಲ್ಲಿ ನಡೆದಿದ್ದ ಮನೋಜ್ ಅಲಿಯಾಸ್​ ಬಬ್ಲು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಐದು ವರ್ಷ ಜೈಲಿನಲ್ಲಿದ್ದನು. ಇತ್ತೀಚಿಗೆ 7-8 ತಿಂಗಳ ಹಿಂದೆ ಬಿಡುಗಡೆಯಾಗಿ ಹೊರಗೆ ಬಂದಿದ್ದನು. ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಕೊಲೆಯಾದ ಮನೋಜ್​ ಸಹಚರರು ಇಂದು (ಫೆ.24) ವಿಜಯ ಕುಮಾರ್​ನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆನೇಕಲ್​: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಕೊಲೆಯಾದ ವಿಜಯ್ ಕುಮಾರ್
ರಾಮು, ಆನೇಕಲ್​
| Edited By: |

Updated on:Feb 25, 2024 | 5:15 PM

Share

ಆನೇಕಲ್​, ಫೆಬ್ರವರಿ 25: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ. ವಿಜಯ್ ಕುಮಾರ್ (27) ಕೊಲೆಯಾದ ಯುವಕ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 2017ರಲ್ಲಿ ನಡೆದಿದ್ದ ಮನೋಜ್ ಅಲಿಯಾಸ್​ ಬಬ್ಲು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಐದು ವರ್ಷ ಜೈಲಿನಲ್ಲಿದ್ದನು. ಇತ್ತೀಚಿಗೆ 7-8 ತಿಂಗಳ ಹಿಂದೆ ಬಿಡುಗಡೆಯಾಗಿ ಹೊರಗೆ ಬಂದಿದ್ದನು. ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ ಕೊಲೆಯಾದ ಮನೋಜ್​ ಸಹಚರರು, ಇಂದು (ಫೆ.25) ನಸುಕಿನ ಜಾವ 4 ಗಂಟೆ ಸುಮಾರಿಗೆ, ವಿಜಯ ಕುಮಾರ್​ನನ್ನು ಕರೆದೊಯ್ದು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ತನ್ನ ಮಗನನ್ನು ಮನೋಜ್ ಕುಮಾರ್ ಸಹೋದರ ಅರ್ಜುನ್ ಕೊಲೆ ಮಾಡಿದ್ದಾನೆಂದು ವಿಜಯ್ ಕುಮಾರ್​ ತಂದೆ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹೆಂಡ್ತಿ ಜತೆ ಮಲಗಿದ್ದಾಗಲೇ ರೌಡಿಶೀಟರ್ ಹತ್ಯೆ: ಪರಪ್ಪನ ಅಗ್ರಹಾರ ಜೈಲಲೇ ರೂಪಿಸಲಾಗಿತ್ತು ಕೊಲೆ ಸಂಚು

ಬಿಟೆಕ್ ವಿದ್ಯಾರ್ಥಿ ಶವವಾಗಿ ಪತ್ತೆ

ಆನೇಕಲ್​ ತಾಲೂಕಿನ ತೆಲಗರಹಳ್ಳಿ ಗ್ರಾಮದ ಬಳಿಯ ನೀಲಗಿರಿ ತೋಪಿನಲ್ಲಿ ಕಾಣೆಯಾಗಿದ್ದ ತಮಿಳುನಾಡು ಮೂಲದ ಬಿಟೆಕ್ ವಿದ್ಯಾರ್ಥಿಯ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿ ಹರ್ಷಿತ್​ ಕೊಟ್ನಾಲಾ (22) ಮೃತ ದುರ್ದೈವಿ.

ಹರ್ಷಿತ್​ ಕೊಟ್ನಾಲಾ ತಮಿಳುನಾಡಿನ ಗುಮ್ಮಳಾಪುರದ ಅಲಯನ್ಸ್​​ ವಿವಿಯ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಫೆ.21ರಂದು ವಿವಿ ಹಾಸ್ಟೆಲ್​ನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತಮಿಳುನಾಡಿನ ತಳಿ‌ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಆನೇಕಲ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Sun, 25 February 24

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ