AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಜೆಯಲ್ಲಿ ಕನ್ನಡ, ತಮಿಳು ಹಾಡು ಹಾಕಲು ಸ್ನೇಹಿತರ ಮಧ್ಯೆ ವಾಗ್ವಾದ, ಕೊಲೆಯಲ್ಲಿ ಅಂತ್ಯ

ಬಾಣಸವಾಡಿ ಬಳಿ ಜಾತ್ರೆ ವೇಳೆ ಸ್ನೇಹಿತರ ನಡುವೆ ಜಗಳ ನಡೆದಿದೆ. ಜಾತ್ರೆಯಲ್ಲಿ ಕನ್ನಡ ಮತ್ತು ತಮಿಳು ಹಾಡುಗಳ ಬಗ್ಗೆ ಇಬ್ಬರೂ ಜಗಳವಾಡಿದ್ದಾರೆ. ಜಗಳದ ವೇಳೆ ಪ್ರವೀಣ್ ತನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್‌ನಿಂದ ಪ್ರವೀಣ್ ತಲೆಗೆ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ಪ್ರವೀಣ್ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು: ಡಿಜೆಯಲ್ಲಿ ಕನ್ನಡ, ತಮಿಳು ಹಾಡು ಹಾಕಲು ಸ್ನೇಹಿತರ ಮಧ್ಯೆ ವಾಗ್ವಾದ, ಕೊಲೆಯಲ್ಲಿ ಅಂತ್ಯ
ಮೃತ ಪ್ರವೀಣ್
TV9 Web
| Updated By: Ganapathi Sharma|

Updated on: Nov 10, 2023 | 5:59 PM

Share

ಬೆಂಗಳೂರು, ನವೆಂಬರ್ 10: ಬೆಂಗಳೂರಿನಲ್ಲಿ ನಡೆದ ಜಾತ್ರೆಯೊಂದರಲ್ಲಿ ಕನ್ನಡ ಮತ್ತು ತಮಿಳು ಹಾಡುಗಳನ್ನು ಹಾಕುವ (Kannada vs Tamil songs) ವಿಚಾರವಾಗಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿದೆ. ಬೆಂಗಳೂರಿನ ಲಿಂಗರಾಜಪುರ ಜಾತ್ರೆಯಲ್ಲಿ ಡಿಜೆಯಲ್ಲಿ ಯಾವ ಹಾಡು ಹಾಕಬೇಕು ಎಂದು ಜಗಳವಾಡಿದ ಹಳೇ ಬಾಗಲೂರು ಲೇಔಟ್ ನಿವಾಸಿ ಪ್ರವೀಣ್ ಎಂಬವರ ಮೇಲೆ ಅವರ ಸ್ನೇಹಿತ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯ ವೇಳೆ ಪ್ರವೀಣ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಬಾಣಸವಾಡಿ ಬಳಿ ಜಾತ್ರೆ ವೇಳೆ ಸ್ನೇಹಿತರ ನಡುವೆ ಜಗಳ ನಡೆದಿದೆ. ಜಾತ್ರೆಯಲ್ಲಿ ಕನ್ನಡ ಮತ್ತು ತಮಿಳು ಹಾಡುಗಳ ಬಗ್ಗೆ ಇಬ್ಬರೂ ಜಗಳವಾಡಿದ್ದಾರೆ. ಜಗಳದ ವೇಳೆ ಪ್ರವೀಣ್ ತನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಲ್ಮೆಟ್‌ನಿಂದ ಪ್ರವೀಣ್ ತಲೆಗೆ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ಪ್ರವೀಣ್ ತಲೆಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಂದರ್, ಆರ್ಮುಗಂ ಮತ್ತು ಪ್ರಭು ಅವರನ್ನು ಬಂಧಿಸಲಾಗಿದೆ ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಡಿ ದೇವರಾಜ ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು

ಮೃತ ಪ್ರವೀಣ್ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಪ್ರವೀಣ್ ಈ ಹಿಂದೆಯೂ ಹಲವು ಬಾರಿ ತನ್ನ ಸ್ನೇಹಿತರ ಜತೆ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 2021 ರಲ್ಲಿ, ಅವರು ಟ್ರಾಫಿಕ್ ಪೊಲೀಸರೊಂದಿಗೆ ಜಗಳವಾಡಿದ್ದರು ಮತ್ತು ಆ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್