ಬೆಂಗಳೂರು: ವರ್ಕ್ ಫ್ರಂ ಹೋಂ ಕೆಲಸ ನೀಡೋದಾಗಿ ಸಾವಿರಾರು ಜನರನ್ನು ನಂಬಿಸಿ 158 ಕೋಟಿ ವಂಚನೆ ಮಾಡಿದ್ದ ದೊಡ್ಡ ಗ್ಯಾಂಗ್ ಅರೆಸ್ಟ್

ವರ್ಕ್ ಫ್ರಂ ಹೋಂ ಕೆಲಸ ನೀಡೋದಾಗಿ ಜನರನ್ನು ನಂಬಿಸಿ ಇನ್ಸ್ಟಾಗ್ರಾಂ ಅಕೌಂಟ್​ಗೆ ಲಿಂಕ್ ಕಳಿಸಿ ನಂತರ ಹಣ ಎಗರಿಸ್ತಿದ್ದ ಗ್ಯಾಂಗನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಇಲ್ಲಿವರೆಗೆ 158 ಕೋಟಿ 94 ಲಕ್ಷಕ್ಕೂ ಅಧಿಕ ಹಣ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಬೆಂಗಳೂರು: ವರ್ಕ್ ಫ್ರಂ ಹೋಂ ಕೆಲಸ ನೀಡೋದಾಗಿ ಸಾವಿರಾರು ಜನರನ್ನು ನಂಬಿಸಿ 158 ಕೋಟಿ ವಂಚನೆ ಮಾಡಿದ್ದ ದೊಡ್ಡ ಗ್ಯಾಂಗ್ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jan 30, 2024 | 12:15 PM

ಬೆಂಗಳೂರು, ಜ.30: ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸರು (Cyber Crime Police) ಭರ್ಜರಿ ಕಾರ್ಯಾಚರಣೆ ನಡೆಸಿ ತೆಲಂಗಾಣದ ಇಬ್ಬರು, ಹೈದರಾಬಾದ್​ನ ಮೂವರು, ಮಹಾರಾಷ್ಟ್ರದ ಇಬ್ಬರು ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಕೆಲಸಕ್ಕಾಗಿ ಪರದಾಡುತ್ತಿರುವವರನ್ನು ಟಾರ್ಗೆಟ್ ಮಾಡಿ ವರ್ಕ್ ಫ್ರಂ ಹೋಂ (Work From Home) ಕೆಲಸ ನೀಡೋದಾಗಿ ನಂಬಿಸಿ ವಂಚಿಸ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 2143 ಪ್ರಕರಣಗಳಿಂದ 158 ಕೋಟಿ 94 ಲಕ್ಷಕ್ಕೂ ಅಧಿಕ ಹಣ ವಂಚನೆ ಮಾಡಿದ್ದ ಸೈಬರ್ ವಂಚನೆ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.

ಈ ಆರೋಪಿಗಳು 2143 ಅಕೌಂಟ್​ಗಳಿಂದ 158 ಕೋಟಿ 94 ಲಕ್ಷಕ್ಕೂ ಅಧಿಕ ಹಣ ಎಗರಿಸಿದ್ದರು. ಸದ್ಯ ಸೈಬರ್ ಪೊಲೀಸರು 30 ಅಕೌಂಟ್ ಫ್ರೀಜ್ ಮಾಡಿದ್ದಾರೆ. 62 ಲಕ್ಷದ 83 ಸಾವಿರ ರೂಪಾಯಿಗಳು ಬೆಂಗಳೂರು ಪೊಲೀಸರಿಂದ ಫ್ರೀಜ್ ಆಗಿದೆ. ಮನೆಯಿಂದಲೇ ಕೆಲಸ ಮಾಡಿ ದಿನಕ್ಕೆ ಸಾವಿರಾರು ರೂ ಗಳಿಸಿ ಎಂದು ಈ ಗ್ಯಾಂಗ್ ನಂಬಿಸುತ್ತಿತ್ತು. ಇನ್ಸ್ಟಾಗ್ರಾಂ ಅಕೌಂಟ್​ಗೆ ಲಿಂಕ್ ಕಳಿಸಿ ನಂತರ ಹಣ ಎಗರಿಸ್ತಿದ್ರು. ಸದ್ಯ ತೆಲಂಗಾಣ, ಹೈದರಾಬಾದ್, ಮಹಾರಾಷ್ಟ್ರ, ಮುಂಬೈ ಸೇರಿ ಒಟ್ಟು 11 ಮಂದಿ ಅರೆಸ್ಟ್ ಆಗಿದ್ದಾರೆ. 11 ಮೊಬೈಲ್, 2 ಲ್ಯಾಪ್ ಟಾಪ್, 15 ಸಿಮ್ ಕಾರ್ಡ್, 3 ಬ್ಯಾಂಕ್ ಚೆಕ್ ಬುಕ್ ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಡಿಸಿಪಿ ಅಬ್ದುಲ್ ಅಹಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಇದನ್ನೂ ಓದಿ: ಆಂಧ್ರಪ್ರದೇಶ: ಕೇಬಲ್ ಆಪರೇಟರ್​ನಿಂದ ಒಂಟಿ ಮಹಿಳೆಯ ಚಿನ್ನದ ಸರ ಕದಿಯಲು ಯತ್ನ, ವಿಡಿಯೋ ವೈರಲ್

ಶಾಲಾ ಬಸ್​ಗೆ ಟ್ರ್ಯಾಕ್ಟರ್ ಡಿಕ್ಕಿ, 4 ವಿದ್ಯಾರ್ಥಿಗಳು ಬಲಿ

ಶಾಲಾ ಬಸ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 8ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ, ಶಾಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳುವಾಗ ತಡರಾತ್ರಿ 12 ಗಂಟೆಗೆ ಟ್ರ್ಯಾಕ್ಟರ್, ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ 9ನೇ ತರಗತಿ ವಿದ್ಯಾರ್ಥಿಗಳಾದ ಶ್ವೇತಾ, ಗೋವಿಂದ, PUC ವಿದ್ಯಾರ್ಥಿಗಳಾದ ಸಾಗರ ಕಡಕೋಳ, ಬಸವರಾಜ ಸಾವನ್ನಪ್ಪಿದ್ದಾರೆ, ಈ ಎಲ್ಲರೂ ವರ್ಧಮಾನ ಮಹಾವೀರ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಾಗಿದ್ದಾರೆ. ಮಕ್ಕಳ ಶವಗಳನ್ನು ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ಊರ ಹೊರಗೆ ನಾಲ್ಕೂ ವಿದ್ಯಾರ್ಥಿಗಳ ಸಾಮೂಹಿಕ ಅಂತ್ಯಸಂಸ್ಕಾರ ನಡೆಸಲಾಗಿದೆ.

ಇನ್ನು, ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ.. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ