AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಇನ್ವೆಸ್ಟ್​ಮೆಂಟ್ ಮಾಡುವ ಮುನ್ನ ಎಚ್ಚರ ಎಚ್ಚರ..ಬೆಂಗಳೂರಿನಲ್ಲಿ ನಕಲಿ ಗ್ಯಾಂಗ್​ ಪತ್ತೆ

ಬಂಡಲ್ ಗಟ್ಟಲೇ ಬ್ಯಾಂಕ್ ಪಾಸ್ ಬುಕ್​ಗಳು, ರಾಶಿಗಟ್ಟಲೇ ಚೆಕ್ ಬುಕ್ ಗಳು. ಎಟಿಎಂ ಕಾರ್ಡ್​ಗಳು, ಅಷ್ಟಲ್ಲದೇ ನೂರಾರು ಸಿಮ್ ಕಾರ್ಡ್ ಗಳು, ರಬ್ಬರ್ ಸ್ಟ್ಯಾಂಪ್ ಗಳನ್ನು ಇಟ್ಟುಕೊಂಡು ಸೈಬರ್ ಖದೀಮರು ಅಮಾಯಕ ಜನರನ್ನ ವಂಚಿಸುತ್ತಿದ್ದರು. ಇಂತ ದೊಡ್ಡ ಜಾಲವನ್ನ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಪೊಲೀಸರು ಬೇಧಿಸಿದ್ದು, 10 ಆರೋಪಿಗಳನ್ನ ಬಂಧಿಸಿದ್ದಾರೆ. ಅಷ್ಟಕ್ಕೂ ಈ ಖದೀಮರು ಅದೇಗೆ ವಂಚನೆ ಮಾಡುತ್ತಿದ್ದರು ಎನ್ನುವುದು ಇಲ್ಲಿದೆ ನೋಡಿ.

ಆನ್​ಲೈನ್ ಇನ್ವೆಸ್ಟ್​ಮೆಂಟ್ ಮಾಡುವ ಮುನ್ನ ಎಚ್ಚರ ಎಚ್ಚರ..ಬೆಂಗಳೂರಿನಲ್ಲಿ ನಕಲಿ ಗ್ಯಾಂಗ್​ ಪತ್ತೆ
Online Investment
ರಮೇಶ್ ಬಿ. ಜವಳಗೇರಾ
|

Updated on: Dec 17, 2024 | 9:35 PM

Share

ಬೆಂಗಳೂರು, (ಡಿಸೆಂಬರ್ 17): ನಿಮಗೆ ಸೋಷಿಯಲ್ ಮೀಡಿಯಾದಲ್ಲಿ ಇನ್ವೆಸ್ಟ್ ಮೆಂಟ್ ಆ್ಯಡ್ ಬರ್ತಿದ್ರೆ ಹುಷಾರಾಗಿರಿ. ಯಾಕೆಂದ್ರೆ ಇಲ್ಲೋಂದು ಟೀಂ ಫೇಕ್ ಆ್ಯಡ್ ಗಳನ್ನ ಕೊಟ್ಟು ಅಮಾಯಕರಿಗೆ ಲಕ್ಷಾಂತರ ರೂ. ಟೋಪಿ ಹಾಕಿತ್ತು. ಬೆಂಗಳೂರಿನವರೇ ಆದ ಆರೋಪಿಗಳು ಬೆಂಗಳೂರಿನ ವ್ಯಕ್ತಿಗೆ 88 ಲಕ್ಷ ರೂ. ವಂಚಿಸಿ ಸೈಬರ್ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಶ್ರೀನಿವಾಸ್ ರೆಡ್ಡಿ, ಆಕಾಶ್, ಪ್ರಕಾಶ್, ಸುನೀಲ್ ಕುಮಾರ್, ಸಾಯಿ ಪ್ರಜ್ವಲ್, ರವಿಶಂಕರ್, ಮಧುಸೂಧನ್ ರೆಡ್ಡಿ, ಸುರೇಶ್, ಕಿಶೋರ್ ಕುಮಾರ್, ಓಬಲ್ ರೆಡ್ಡಿ ಬಂಧಿತ ಆರೋಪಿಗಳು.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಕ್ತಿಗೆ 88 ಲಕ್ಷ ರೂ. ವಂಚನೆ ಮಾಡಿದ್ದ ಸೈಬರ್ ಕದೀಮರು ನಂತರ ಫೋನ್ ಸ್ವಿಚ್ಡ್ ಆಫ್ ಮಾಡಿ ನಾಪತ್ತೆ ಆಗುತ್ತಿದ್ದರು. ತನಿಖೆ ಕೈಗೊಂಡ ಪೊಲೀಸರು ಹಣ ವರ್ಗಾವಣೆ ಮಾಡಿದ್ದ ವಿವಿಧ ಖಾತೆಗಳ ಖಾತೆದಾರರ ಮಾಹಿತಿ ಸಂಗ್ರಹ ಮಾಡಿದಾಗ ಅದು ಯಶವಂತಪುರದಲ್ಲಿದ್ದ 10 ಆರೋಪಿಗಳಿಗೆ ಸಂಬಂಧಪಟ್ಟಿದ್ದು ಎಂದು ಗೊತ್ತಾಗಿದೆ. ಕೂಡಲೇ ಕಾರ್ಯಚರಣೆಗಿಳಿದ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು

ಬಳಿಕ ಆರೋಪಿಗಳಿಗೆ ಸಂಬಂಧಪಟ್ಟ ತ್ಯಾಗರಾಜ‌ನಗರ, ಸದಾಶಿವನಗರದ ಕಚೇರಿಗಳ ಮೇಲೆ ದಾಳಿ‌ ಮಾಡಿದಾಗ 51 ಮೊಬೈಲ್ಸ್, 2 ಲ್ಯಾಪ್ ಟಾಪ್, 2 CPU, 108 ಪಾಸ್ ಬುಕ್ ಗಳು ಮತ್ತು ಚೆಕ್ ಬುಕ್ ಗಳು, 480 ಸಿಮ್ ಕಾರ್ಡ್ ಗಳು, 27 ಎಟಿಎಂ ಕಾರ್ಡ್ ಗಳು, 42 ರಬ್ಬರ್ ಸ್ಟಾಂಪ್, 103 ಉದ್ಯಮ್ ಮತ್ತು ಜಿಎಸ್ ಟಿ ದಾಖಲೆಗಳು, 230 ಕರೆಂಟ್ ಅಕೌಂಟ್ ದಾಖಲಾತಿಗಳು ಸಿಕ್ಕಿವೆ.

ಹೇಗೆ ಮೋಸ ಮಾಡುತ್ತಿದ್ರು ಗೊತ್ತಾ?

ಸಾಮಾಜಿಕ ಜಾಲತಾಣದಲ್ಲಿ ಇನ್ವೆಸ್ಟ್​ಮೆಂಟ್ ಬಗ್ಗೆ ಜಾಹೀರಾತು ನೀಡುತ್ತಿದ್ದರು. ಮಾರ್ಕೆಂಟಿಂಗ್ ಲಿಂಕ್ ಕ್ಲಿಕ್ ಮಾಡಿದವರು ವಾಟ್ಸ್​ಪ್ ಗ್ರೂಪ್ ಸೇರುತ್ತಿದ್ದರು. ಬಳಿಕ Brandy Speed ಆ್ಯಪ್ ಇನ್ಸ್ಟಾಲ್ ಮಾಡಲು ಪುಸಲಾಯಿಸುತ್ತಿದ್ದರು. ಆ್ಯಪ್ ಇನ್ಸ್ಟಾಲ್ ಮಾಡಿದವರಿಗೆ ಹಣ ಡಬಲ್ ಮಾಡಿಕೊಡುವ ಆಮೀಷವೊಡ್ಡುತ್ತಿದ್ದರು. ಕಳ್ಳರ ಮಾತು ನಂಬಿ ಸಾರ್ವಜನಿಕರು ವಿವಿಧ ಖಾತೆಗಳಿಗೆ ಹಣ ಹಾಕುತ್ತಿದ್ದರು. ಬಳಿಕ ಹಾಕಿರೋ ಹಣವಾಗಲಿ ಲಾಭದ ಹಣವಾಗಲಿ ವಾಪಸ್ ಬರುತ್ತಿರಲಿಲ್ಲ. ಇದರಿಂದ ಮೋಸ ಹೋಗಿದ್ದೇವೆ ಎಂದು ಜನರಿಗೆ ಅರಿವಾಗುತ್ತಿತ್ತು.

ಇನ್ನೂ ಈ 10 ಆರೋಪಿಗಳಲ್ಲಿ ಕೆಲವರು ಅಕೌಂಟ್ ಹೋಲ್ಡರ್ ಆಗಿದ್ರೆ, ಇನ್ನು ಕೆಲವರು ಏಜೆಂಟ್ ಗಳಾಗಿದ್ದಾರೆ. ಇವರೆಲ್ಲ ದುಬೈನಲ್ಲಿ ಕೂತು ಸೈಬರ್ ವಂಚನೆ ಜಾಲ ಆಪರೇಟ್ ಮಾಡೋ ಕಿಂಗ್ ಪಿನ್ ಗಳಿಗೆ ಸಹಾಯ ಮಾಡ್ತಿದ್ರು ಅನ್ನೋ ವಿಚಾರವೂ ಗೊತ್ತಾಗಿದ್ದು, ದುಬೈನಲ್ಲಿರೋ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಸದ್ಯ ಆರೋಪಿಗಳ ಅಕೌಂಟ್ ಗಳಿಗೆ ಸಂಬಂಧಿಸಿದಂತೆ ಎನ್ ಸಿಆರ್ ಪೋರ್ಟನಲ್ಲಿ 1467 ದೂರುಗಳು ದಾಖಲಾಗಿರೋದು ಪತ್ತೆಯಾಗಿದೆ. ಉತ್ತರ ವಿಭಾಗ ಸೈಬರ್ ಪೊಲೀಸರು ತನಿಖೆ ಮುಂದುವರಿಸಿದ್ದು ಸೈಬರ್ ಜಾಲದ ಮತ್ತಷ್ಟು ರಹಸ್ಯ ಹೊರತೆಗೆಯಲು ಮುಂದಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ: ಪ್ರದೀಪ್ ಚಿಕ್ಕಾಟಿ. Tv9, ಬೆಂಗಳೂರು

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್