AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಅವರನ್ನು ಕಂಪನಿಯ ಮಾಜಿ ಉದ್ಯೋಗಿಯೂ ಆಗಿರುವ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್
ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್
Jagadisha B
| Edited By: Rakesh Nayak Manchi|

Updated on:Jul 11, 2023 | 7:59 PM

Share

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ (Aeronics Internet) ಕಂಪನಿ ಎಂಡಿ ಫಣಿಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್​ ಅವರನ್ನು ಕಂಪನಿಯ ಮಾಜಿ ಉದ್ಯೋಗಿಯೂ ಆಗಿರುವ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಎಂಬಾತ  ಕೊಲೆ (Double Murder) ಮಾಡಿದ ಘಟನೆ ನಗರದ ಅಮೃತಹಳ್ಳಿಯಲ್ಲಿ ಇಂದು ನಡೆದಿದೆ. ​

ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಇಂದು ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿ ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Yuva Brigade; ವೇಣುಗೋಪಾಲ್ ಕೊಲೆಯಲ್ಲಿ ಸಚಿವ ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಸಹಚರರು ಭಾಗಿಯಾಗಿದ್ದಾರೆ: ಚಕ್ರವರ್ತಿ ಸೂಲಿಬೆಲೆ

ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೇರೆ ಬೇರೆ ಮಹಡಿಯಲ್ಲಿ ಇಬ್ಬರ ಕೊಲೆ

ಪ್ರಕರಣದಲ್ಲಿ ಫೆಲಿಕ್ಸ್ ಸೇರಿದಂತೆ ಮೂವರು ಆರೋಪಿಗಳು ಕಂಪನಿಗೆ ನುಗ್ಗಿ  ಮೊದಲ‌‌ ಮಹಡಿಯಲ್ಲಿ ಒಬ್ಬರನ್ನ ಕೊಲೆ ಮಾಡಿ, ಎರಡನೇ ಮಹಡಿಯಲ್ಲಿ ಮತ್ತೊಬ್ಬರನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್, ಮೂರು ಜನರು ಭಾಗಿಯಾಗಿ ಕೊಲೆ ಮಾಡಿದ್ದಾರೆ. ಒಬ್ಬ ಆರೋಪಿಯ ಬಗ್ಗೆ ಈಗಾಗಲೇ ಸುಳಿವು ಸಿಕ್ಕಿದೆ. ಕೊಲೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲಾ ಆಯಾಮದಲ್ಲೂ ತನಿಖೆ ಆಗುತ್ತಿದೆ. ಈಗಾಗಲೇ ಆರೋಪಿ ಬಗ್ಗೆ ಮಾಹಿತಿ ಇದೆ. ಈ ಹಂತದಲ್ಲಿ ಏನೂ ಹೇಳಲು ಸಾಧ್ಯವಿಲ್ಲ ಎಂದರು.

ಮಾತುಕತೆ ಬಳಿಕ ಏಕಾಏಕಿ ಅಟ್ಯಾಕ್

ಎಂಡಿ ಮತ್ತು ಸಿಇಒ ಅವರನ್ನು ಕೊಲೆ ಮಾಡುವ ಮುನ್ನ ಚೇಂಬರಿಗೆ ಆಗಮಿಸಿದ ಮೂವರು ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ಕಂಪನಿಯಲ್ಲಿ 10-12 ಜನರು ಕೆಲಸ ಮಾಡುತ್ತಿದ್ದರು. ಮಾತುಕತೆ ಬಳಿಕ ಆರೋಪಿಗಳು ಏಕಾಏಕಿಯಾಗಿ ದಾಳಿ ನಡೆಸಿದ್ದು, ಎಂಡಿ ಮತ್ತು ಸಿಇಒ ತಪ್ಪಿಸಿಕೊಳ್ಳು ಪ್ರಯತ್ನಿಸಿದ್ದು, ಕೆಲಸ ಮಾಡುತ್ತಿದ್ದವರು ರಕ್ಷಣೆ ಮಾಡಲು ದಾವಿಸಿದ್ದಾರೆ. ಈ ವೇಳೆ ಇವರಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿದ್ದದು, ನಂತರ ಇಬ್ಬರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ‌‌ ಮೊದಲು ಕೊಲೆಯಾದವರು ಹಾಗೂ ಮೊದಲ ಆರೋಪಿ ಬನ್ನೇರುಘಟ್ಟ ರಸ್ತೆಯ ಖಾಸಗಿ ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Tue, 11 July 23

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ