AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ

ರಾಜಸ್ಥಾನದ ಉದಯಪುರದಲ್ಲಿ,  ಬೆಂಗಳೂರು ನಗರದ ಎಲೆಕ್ಟ್ರಾನಿಕ್​ಸಿಟಿ ಠಾಣೆ ಪೊಲೀಸರು ಮತ್ತು ರಾಜಸ್ಥಾನ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jul 06, 2022 | 7:35 PM

Share

ಬೆಂಗಳೂರು/ ರಾಜಸ್ಥಾನ: ರಾಜಸ್ಥಾನದ (Rajsthan) ಉದಯಪುರದಲ್ಲಿ,  ಬೆಂಗಳೂರು (Bengaluru) ನಗರದ ಎಲೆಕ್ಟ್ರಾನಿಕ್​ಸಿಟಿ (Electronic City) ಠಾಣೆ ಪೊಲೀಸರು (Police) ಮತ್ತು ರಾಜಸ್ಥಾನ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಎಲೆಕ್ಟ್ರಾನಿಕ್​ಸಿಟಿ ಠಾಣೆ ಪೊಲೀಸರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ (Arrested). ಬೆಂಗಳೂರಿನ ಹಲವೆಡೆ ದರೋಡೆ ಮಾಡಿದ್ದ ಕುಖ್ಯಾತ  ದರೋಡೆಕೋರರ ಗುಂಪನ್ನು ಬಂಧಿಸಲು ಕಾರ್ಯಾಚರಣೆಗೆ ಇಳಿದಿದ್ದ  ಪೊಲೀಸರ ಮೇಲೆ ಗ್ಯಾಂಗ್​ ಗುಂಡುಹಾರಿಸಿದೆ.

ಇದನ್ನು ಓದಿ: Crime News: ಬಕ್ರೀದ್​ಗಾಗಿ 250 ಮೇಕೆ ಕದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್​..!

ಈ ವೇಳೆ  ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ‌ ಪೊಲೀಸರು ಪ್ರತಿದಾಳಿ ನಡೆಸಿ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಕೆಜಿ ಚಿನ್ನ, 30 ಕೆಜಿ ಬೆಳ್ಳಿ, ಬಂದೂಕು, ಸಜೀವ ಗುಂಡುಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಪ್ರಾಣ ಪಣಕ್ಕಿಟ್ಟು ಎಲೆಕ್ಟ್ರಾನಿಕ್ ಸಿಟಿ‌ ಪೊಲೀಸರು ನಡೆಸಿದ ಕಾರ್ಯಾಚರಣೆಗೆ ರಾಜಸ್ಥಾನ ಪೊಲೀಸ್​​ ಅಭಿನಂದಿಸಿದ್ದಾರೆ.

ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ ಸಂಭವಿಸಿ ಇಬ್ಬರಿಗೆ ಚಾಕು ಇರಿಯಲಾಗಿದೆ. ದುಷ್ಕರ್ಮಿಗಳು ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಎಂಬುವರಿಗೆ ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ: 5 ದಿನಗಳ ಹಿಂದೆಯೇ ಚಂದ್ರಶೇಖರ್ ಗುರೂಜಿ ಕೊಲೆಯ ಸುಳಿವು ನೀಡಿದ್ದ ಆರೋಪಿ! ಫೇಸ್​​ಬುಕ್​ ಪೋಸ್ಟ್​​ನಲ್ಲಿ ಏನಿದೆ?

ಅಲ್ಲದೆ ಕಿಡಿಗೇಡಿಗಳು ಒಂದು ಕೋಮಿನವರಿಗೆ ಸೇರಿದ ತರಕಾರಿಗಳನ್ನು ರಸ್ತೆಗೆ ಚೆಲ್ಲಿ, 2 ತಳ್ಳುವಗಾಡಿಗೆ ಬೆಂಕಿಹಚ್ಚಿದ್ದಾರೆ. ಗುಂಪು ಘರ್ಷಣೆ ವೇಳೆ 10 ಅಂಗಡಿ ಧ್ವಂಸವಾಗಿದ್ದು, 5 ಬೈಕ್​​ಗಳು ಜಖಂಗೊಂಡಿವೆ. ಕೆರೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ