AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ

ರಾಜಸ್ಥಾನದ ಉದಯಪುರದಲ್ಲಿ,  ಬೆಂಗಳೂರು ನಗರದ ಎಲೆಕ್ಟ್ರಾನಿಕ್​ಸಿಟಿ ಠಾಣೆ ಪೊಲೀಸರು ಮತ್ತು ರಾಜಸ್ಥಾನ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರ​ ಜಂಟಿ ಕಾರ್ಯಾಚರಣೆ: ಉದಯಪುರದಲ್ಲಿ ಗುಂಡು ಹಾರಿಸಿ 4 ದರೋಡೆಕೋರರ ಬಂಧನ, 3 ಕೆಜಿ ಚಿನ್ನ ವಶ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Jul 06, 2022 | 7:35 PM

Share

ಬೆಂಗಳೂರು/ ರಾಜಸ್ಥಾನ: ರಾಜಸ್ಥಾನದ (Rajsthan) ಉದಯಪುರದಲ್ಲಿ,  ಬೆಂಗಳೂರು (Bengaluru) ನಗರದ ಎಲೆಕ್ಟ್ರಾನಿಕ್​ಸಿಟಿ (Electronic City) ಠಾಣೆ ಪೊಲೀಸರು (Police) ಮತ್ತು ರಾಜಸ್ಥಾನ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಎಲೆಕ್ಟ್ರಾನಿಕ್​ಸಿಟಿ ಠಾಣೆ ಪೊಲೀಸರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ (Arrested). ಬೆಂಗಳೂರಿನ ಹಲವೆಡೆ ದರೋಡೆ ಮಾಡಿದ್ದ ಕುಖ್ಯಾತ  ದರೋಡೆಕೋರರ ಗುಂಪನ್ನು ಬಂಧಿಸಲು ಕಾರ್ಯಾಚರಣೆಗೆ ಇಳಿದಿದ್ದ  ಪೊಲೀಸರ ಮೇಲೆ ಗ್ಯಾಂಗ್​ ಗುಂಡುಹಾರಿಸಿದೆ.

ಇದನ್ನು ಓದಿ: Crime News: ಬಕ್ರೀದ್​ಗಾಗಿ 250 ಮೇಕೆ ಕದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್​..!

ಈ ವೇಳೆ  ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ‌ ಪೊಲೀಸರು ಪ್ರತಿದಾಳಿ ನಡೆಸಿ ನಾಲ್ವರು ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಕೆಜಿ ಚಿನ್ನ, 30 ಕೆಜಿ ಬೆಳ್ಳಿ, ಬಂದೂಕು, ಸಜೀವ ಗುಂಡುಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಪ್ರಾಣ ಪಣಕ್ಕಿಟ್ಟು ಎಲೆಕ್ಟ್ರಾನಿಕ್ ಸಿಟಿ‌ ಪೊಲೀಸರು ನಡೆಸಿದ ಕಾರ್ಯಾಚರಣೆಗೆ ರಾಜಸ್ಥಾನ ಪೊಲೀಸ್​​ ಅಭಿನಂದಿಸಿದ್ದಾರೆ.

ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಕೆರೂರಿನ ಮಾರ್ಕೆಟ್​ನಲ್ಲಿ ಗುಂಪು ಘರ್ಷಣೆ ಸಂಭವಿಸಿ ಇಬ್ಬರಿಗೆ ಚಾಕು ಇರಿಯಲಾಗಿದೆ. ದುಷ್ಕರ್ಮಿಗಳು ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ ಎಂಬುವರಿಗೆ ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ: 5 ದಿನಗಳ ಹಿಂದೆಯೇ ಚಂದ್ರಶೇಖರ್ ಗುರೂಜಿ ಕೊಲೆಯ ಸುಳಿವು ನೀಡಿದ್ದ ಆರೋಪಿ! ಫೇಸ್​​ಬುಕ್​ ಪೋಸ್ಟ್​​ನಲ್ಲಿ ಏನಿದೆ?

ಅಲ್ಲದೆ ಕಿಡಿಗೇಡಿಗಳು ಒಂದು ಕೋಮಿನವರಿಗೆ ಸೇರಿದ ತರಕಾರಿಗಳನ್ನು ರಸ್ತೆಗೆ ಚೆಲ್ಲಿ, 2 ತಳ್ಳುವಗಾಡಿಗೆ ಬೆಂಕಿಹಚ್ಚಿದ್ದಾರೆ. ಗುಂಪು ಘರ್ಷಣೆ ವೇಳೆ 10 ಅಂಗಡಿ ಧ್ವಂಸವಾಗಿದ್ದು, 5 ಬೈಕ್​​ಗಳು ಜಖಂಗೊಂಡಿವೆ. ಕೆರೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ