AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಂಗಳೂರಿನ ಮಾನ್ಯತಾ ಟೆಕ್​ಪಾರ್ಕ್​ ಬಳಿ ಮಧ್ಯರಾತ್ರಿ ದಂಪತಿ ತಡೆದ ಹೊಯ್ಸಳ ಪೊಲೀಸರು ಸುಲಿಗೆ ಮಾಡಿದ ಆರೋಪ ಸಂಬಂಧ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಹೊಯ್ಸಳ ವಾಹನ (ಸಾಂದರ್ಭಿಕ ಚಿತ್ರ)Image Credit source: flickriver.com
TV9 Web
| Edited By: Rakesh Nayak Manchi|

Updated on:Dec 11, 2022 | 1:35 PM

Share

ಬೆಂಗಳೂರು: ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ ಸಂಬಂಧ ಸಂಪಿಗೆಹಳ್ಳಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ (DCP (Northeast) Anoop Shetty), ಸುಲಿಗೆ ಸಂಬಂಧ ಡಿಸೆಂಬರ್ 8ರಂದು ಸಂತ್ರಸ್ತರು ಟ್ವೀಟರ್ ಮೂಲಕ ಬೆಂಗಳೂರು ಪೊಲೀಸರಿಗೆ (Bengaluru Police) ದೂರು ನೀಡಿದ್ದರು. 1000 ಹಣವನ್ನು ಸಂತ್ರಸ್ಥರಿಂದ ಕ್ಯೂ ಆರ್ ಕೋಡ್ ಮೂಲಕ ಪಡೆದಿದ್ದಾರೆ. ಹೀಗಾಗಿ ಸಂಪಿಗೆ ಹಳ್ಳಿ ಠಾಣೆಯ ರಾಜೇಶ್ ಹೆಚ್ ಸಿ, ಪಿಸಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಘಟನೆಗೆ ಸಂಬಂದಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದೆ. ರಾತ್ರಿ ವೇಳೆ ಅನವಶ್ಯಕವಾಗಿ ತಿರುಗಾಡ್ತಿದ್ದೀರಿ ಎಂದು ದಂಡ ವಿಧಿಸುತ್ತಿರುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಶಿವಮೊಗ್ಗ ಸಮೀಪ ಲಾರಿ-ಕಾರು ಮುಖಾಮುಖಿಯಲ್ಲಿ ಮೂವರ ಸಾವು, ಬೆಂಗಳೂರು ಕ್ಯಾಸಿನೊ ಮೇಲೆ ಪೊಲೀಸರ ದಾಳಿ

ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್​ಪಾರ್ಕ್​ ಬಳಿ ಕಾರ್ತಿಕ್ ಪೆತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮಧ್ಯರಾತ್ರಿ ವಾಪಸ್ ಆಗುತ್ತಿದ್ದರು. ಈ ವೇಳೆ ದಂಪತಿಯನ್ನು ತಡೆದ ಹೊಯ್ಸಳ ಸಿಬ್ಬಂದಿ 3,000 ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಇದನ್ನು ದಂಪತಿ ನಿರಾಕರಿಸಿದಾಗ ಪೊಲೀಸರು ಬೆದರಿಕೆ ಹಾಕಿರುವುದಾಗು ಆರೋಪಿಸಲಾಗಿದೆ.

ಪೊಲೀಸರು ಬೆದರಿಕೆ ಹಿನ್ನಲೆ ದಂಪತಿ 1,000 ರೂಪಾಯಿಯನ್ನು ಡಿಜಿಟಲ್ ಪೇಮೆಂಟ್ (ಕ್ಯೂಆರ್ ಕೋಡ್ ಮೂಲಕ)​ ಪಾವತಿ ಮಾಡಿದ್ದಾರೆ. ಬಳಿಕ ಪೊಲೀಸರು ದಂಪತಿಯನ್ನು ಬಿಟ್ಟು ಕಳುಹಿಸಿದ್ದಾರೆ. ಈ ಬಗ್ಗೆ ಸಂತ್ರಸ್ತ ಕಾರ್ತಿಕ್ ಟ್ವೀಟ್ ಮೂಲಕ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಟ್ವೀಟ್ ಗಮನಿಸಿದ ಪೊಲೀಸರು, ಈ ಬಗ್ಗೆ ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 11 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ