AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 6 ಲಕ್ಷ ರೂ ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ

ಬೆಂಗಳೂರಿನ ಕಡಬಗೆರೆ ಕ್ರಾಸ್‌ನಲ್ಲಿರುವ ಆರ್.ಆರ್. ಇಂಡಸ್ಟ್ರೀಸ್ ಮಾಲೀಕನನ್ನು ತಂದೆ-ಮಗ ಹತ್ಯೆಗೈದಿದ್ದಾರೆ. ಸದ್ಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೀಕ ಅವರಿಗೆ 6 ಲಕ್ಷ ರೂ ಅಡ್ವಾನ್ಸ್ ನೀಡಿದ್ದರೂ, ಕೆಲಸ ಮಾಡದೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಜಗಳ ನಡೆದಿದ್ದು, ಈ ವೇಳೆ ಕೊಲೆ ಮಾಡಲಾಗಿದೆ.

ಬೆಂಗಳೂರು: 6 ಲಕ್ಷ ರೂ ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ
ಮೃತ ವ್ಯಕ್ತಿ, ಮಗ-ತಂದೆ
Shivaprasad B
| Edited By: |

Updated on:Mar 23, 2025 | 8:21 PM

Share

ಬೆಂಗಳೂರು, ಮಾರ್ಚ್​ 23: ಅಡ್ವಾನ್ಸ್​ ಹಣ ಕೊಟ್ಟಿದ್ದ ಮಾಲೀಕನನ್ನೇ ತಂದೆ-ಮಗ (father-son) ಹತ್ಯೆಗೈದಿರುವಂತಹ (death) ಘಟನೆ ಕಡಬಗೆರೆ ಕ್ರಾಸ್​ನ ಆರ್.ಆರ್.ಇಂಡಸ್ಟ್ರೀಸ್​​ನಲ್ಲಿ ನಡೆದಿದೆ. ರಮೇಶ್​​ ಕೊಲೆಯಾದ ಆರ್.ಆರ್.ಇಂಡಸ್ಟ್ರೀಸ್ ಮಾಲೀಕ. ಸೈಯದ್ ತಾಜುದ್ದೀನ್(50) ಮತ್ತು ಸೈಯದ್ ಅಯೂಬ್​ ಬಂಧಿತರು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್​ನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಲವರ್​​ ಜೊತೆಗಿದ್ದಾಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಬರ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಬಳಿ ನಡೆದಿದೆ. ಮಾರಿಕುಪ್ಪಂನ ರಿವೀಟರ್ಸ್ ಲೈನ್ ನಿವಾಸಿ ಶಿವಕುಮಾರ್ ಅಲಿಯಾಸ್‌ ತೇನ್ ಕೊಲೆಯಾದ ರೌಡಿಶೀಟರ್.

ಇದನ್ನೂ ಓದಿ: ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಲವರ್​ ಜೊತೆ ಕಾಮಸಮುದ್ರಕ್ಕೆ ಹೋಗುವಾಗ ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೊಲೆ ಮಾಡಲಾಗಿದೆ. ಲವರ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಲೆಯಾದ ಶಿವಕುಮಾರ್ ಆ್ಯಂಡರ್ಸನ್‌ ಪೇಟೆ ಠಾಣೆಯ ರೌಡಿಶೀಟರ್. ಶಿವಕುಮಾರ್ ವಿರುದ್ಧ ಮೂರು ಕೊಲೆ ಯತ್ನ, ಹಲ್ಲೆ ಪ್ರಕರಣಗಳಿದ್ದವು. ಕೊಲೆಗೈದು ಪರಾರಿಯಾಗಿರುವ ಹಂತಕರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಆ್ಯಂಡರ್ಸನ್‌ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿಡಿಲು ಬಡಿದು 65 ವರ್ಷದ ವೃದ್ಧೆ ಸಾವು

ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು 65 ವರ್ಷದ ವೃದ್ಧೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಮೂಲದ ನಾಗಮ್ಮ ಮೃತ ದುರ್ದೈವಿ. ಮಗಳ ಹೊಲದಲ್ಲಿ ಶುಂಠಿ ನಾಟಿ ಮಾಡಲು ನಾಗಮ್ಮ ಬಂದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

9 ಜನ ನಿಧಿಗಳ್ಳರ ಬಂಧನ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ವಿಭೂತಿಗುಡ್ಡದಲ್ಲಿ ನಿಧಿಗಳ್ಳತನಕ್ಕೆ ಸಂಚು ರೂಪಿಸಿದ್ದ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮೂಲದ ನಿಧಿಗಳ್ಳರ ಬಂಧನವಾಗಿದೆ.

ಇದನ್ನೂ ಓದಿ: ಬಿಸಿಲಿನ ಝಳಕ್ಕೆ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸಣ್ಣಪ್ಪ, ತಿಮ್ಮರಾಜು, ಮೈಲಾರಪ್ಪ, ರಾಮಾಂಜನೇಯಪ್ಪ, ವೆಂಕಟೇಶ್, ರವಿ, ಶ್ರೀನಿವಾಸಲು, ಆನಂದ್, ಮಂಜುನಾಥ‌ ಬಂಧಿತರು. ಇನೋವಾ ಕಾರು, ಜನರೇಟರ್, ಡ್ರಿಲ್ಲಿಂಗ್ ಮಷಿನ್​ ಸೇರಿ ನಿಧಿಗಳ್ಳತನಕ್ಕೆ‌ ಬಳಸಿದ್ದ ಸಾಮಗ್ರಿ ಜಪ್ತಿ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 pm, Sun, 23 March 25

Follow Us
Shivaprasad B
Shivaprasad B
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ