Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 6 ಲಕ್ಷ ರೂ ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ

ಬೆಂಗಳೂರಿನ ಕಡಬಗೆರೆ ಕ್ರಾಸ್‌ನಲ್ಲಿರುವ ಆರ್.ಆರ್. ಇಂಡಸ್ಟ್ರೀಸ್ ಮಾಲೀಕನನ್ನು ತಂದೆ-ಮಗ ಹತ್ಯೆಗೈದಿದ್ದಾರೆ. ಸದ್ಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೀಕ ಅವರಿಗೆ 6 ಲಕ್ಷ ರೂ ಅಡ್ವಾನ್ಸ್ ನೀಡಿದ್ದರೂ, ಕೆಲಸ ಮಾಡದೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಜಗಳ ನಡೆದಿದ್ದು, ಈ ವೇಳೆ ಕೊಲೆ ಮಾಡಲಾಗಿದೆ.

ಬೆಂಗಳೂರು: 6 ಲಕ್ಷ ರೂ ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ
ಮೃತ ವ್ಯಕ್ತಿ, ಮಗ-ತಂದೆ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on:Mar 23, 2025 | 8:21 PM

ಬೆಂಗಳೂರು, ಮಾರ್ಚ್​ 23: ಅಡ್ವಾನ್ಸ್​ ಹಣ ಕೊಟ್ಟಿದ್ದ ಮಾಲೀಕನನ್ನೇ ತಂದೆ-ಮಗ (father-son) ಹತ್ಯೆಗೈದಿರುವಂತಹ (death) ಘಟನೆ ಕಡಬಗೆರೆ ಕ್ರಾಸ್​ನ ಆರ್.ಆರ್.ಇಂಡಸ್ಟ್ರೀಸ್​​ನಲ್ಲಿ ನಡೆದಿದೆ. ರಮೇಶ್​​ ಕೊಲೆಯಾದ ಆರ್.ಆರ್.ಇಂಡಸ್ಟ್ರೀಸ್ ಮಾಲೀಕ. ಸೈಯದ್ ತಾಜುದ್ದೀನ್(50) ಮತ್ತು ಸೈಯದ್ ಅಯೂಬ್​ ಬಂಧಿತರು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್​ನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

ಲವರ್​​ ಜೊತೆಗಿದ್ದಾಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಬರ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಬರ್ಬರ ಕೊಲೆ ಮಾಡಿರುವಂತಹ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಬಳಿ ನಡೆದಿದೆ. ಮಾರಿಕುಪ್ಪಂನ ರಿವೀಟರ್ಸ್ ಲೈನ್ ನಿವಾಸಿ ಶಿವಕುಮಾರ್ ಅಲಿಯಾಸ್‌ ತೇನ್ ಕೊಲೆಯಾದ ರೌಡಿಶೀಟರ್.

ಇದನ್ನೂ ಓದಿ: ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಲವರ್​ ಜೊತೆ ಕಾಮಸಮುದ್ರಕ್ಕೆ ಹೋಗುವಾಗ ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೊಲೆ ಮಾಡಲಾಗಿದೆ. ಲವರ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಲೆಯಾದ ಶಿವಕುಮಾರ್ ಆ್ಯಂಡರ್ಸನ್‌ ಪೇಟೆ ಠಾಣೆಯ ರೌಡಿಶೀಟರ್. ಶಿವಕುಮಾರ್ ವಿರುದ್ಧ ಮೂರು ಕೊಲೆ ಯತ್ನ, ಹಲ್ಲೆ ಪ್ರಕರಣಗಳಿದ್ದವು. ಕೊಲೆಗೈದು ಪರಾರಿಯಾಗಿರುವ ಹಂತಕರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಆ್ಯಂಡರ್ಸನ್‌ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿಡಿಲು ಬಡಿದು 65 ವರ್ಷದ ವೃದ್ಧೆ ಸಾವು

ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು 65 ವರ್ಷದ ವೃದ್ಧೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಮೂಲದ ನಾಗಮ್ಮ ಮೃತ ದುರ್ದೈವಿ. ಮಗಳ ಹೊಲದಲ್ಲಿ ಶುಂಠಿ ನಾಟಿ ಮಾಡಲು ನಾಗಮ್ಮ ಬಂದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

9 ಜನ ನಿಧಿಗಳ್ಳರ ಬಂಧನ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ವಿಭೂತಿಗುಡ್ಡದಲ್ಲಿ ನಿಧಿಗಳ್ಳತನಕ್ಕೆ ಸಂಚು ರೂಪಿಸಿದ್ದ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮೂಲದ ನಿಧಿಗಳ್ಳರ ಬಂಧನವಾಗಿದೆ.

ಇದನ್ನೂ ಓದಿ: ಬಿಸಿಲಿನ ಝಳಕ್ಕೆ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸಣ್ಣಪ್ಪ, ತಿಮ್ಮರಾಜು, ಮೈಲಾರಪ್ಪ, ರಾಮಾಂಜನೇಯಪ್ಪ, ವೆಂಕಟೇಶ್, ರವಿ, ಶ್ರೀನಿವಾಸಲು, ಆನಂದ್, ಮಂಜುನಾಥ‌ ಬಂಧಿತರು. ಇನೋವಾ ಕಾರು, ಜನರೇಟರ್, ಡ್ರಿಲ್ಲಿಂಗ್ ಮಷಿನ್​ ಸೇರಿ ನಿಧಿಗಳ್ಳತನಕ್ಕೆ‌ ಬಳಸಿದ್ದ ಸಾಮಗ್ರಿ ಜಪ್ತಿ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:20 pm, Sun, 23 March 25

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್