AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ಸ್ ಮಾರಿ ಸಂಪಾದಿಸಿದ್ದ ಹಣ ಮುಟ್ಟುಗೋಲು

ಆನೇಕಲ್​ ಬಳಿಯ ಬ್ಯಾಗಡದೇನಹಳ್ಳಿಯಲ್ಲಿನ 30X40 ಸೈಟ್, ಎರಡು 60X40 ಸೈಟ್​ಗಳು, ಒಂದು ಫ್ಲ್ಯಾಟ್, ಸ್ಕಾರ್ಪಿಯೊ,  ₹9.75 ಲಕ್ಷ ಹಣವಿದ್ದ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.

Crime News: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ಸ್ ಮಾರಿ ಸಂಪಾದಿಸಿದ್ದ ಹಣ ಮುಟ್ಟುಗೋಲು
ಅಜಯ್ ಕುಮಾರ್ ಸಿಂಗ್ ಮತ್ತು ಮಾದಕ ದ್ರವ್ಯ
TV9 Web
| Updated By: guruganesh bhat|

Updated on: Sep 04, 2021 | 4:51 PM

Share

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ಸ್ ಮಾರಿ ಸಂಪಾದಿಸಿದ್ದ ಸ್ಥಿರ ಮತ್ತು ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬಿಹಾರದ ಅಜಯ್​ ಕುಮಾರ್ ಸಿಂಗ್ ಎಂಬ ವ್ಯಕ್ತಿಯ ಆಸ್ತಿಯನ್ನೇ NDPS ಆ್ಯಕ್ಟ್ 1985ರ 5ಎ ಅಡಿ ಮುಟ್ಟುಗೋಲು ಹಾಕಿಕೊಂಡಿರುವುದು. ಆರೋಪಿಯನ್ನು ಬಂಧಿಸಿದ್ದ ಸೂರ್ಯನಗರ ಪೊಲೀಸರು ಅಕ್ರಮ ಆಸ್ತಿ ಗಳಿಕೆಯ ಆಯಾಮದಲ್ಲೂ ತನಿಖೆ ನಡೆಸಿದ್ದರು. ಆನೇಕಲ್​ ಬಳಿಯ ಬ್ಯಾಗಡದೇನಹಳ್ಳಿಯಲ್ಲಿನ 30X40 ಸೈಟ್, ಎರಡು 60X40 ಸೈಟ್​ಗಳು, ಒಂದು ಫ್ಲ್ಯಾಟ್, ಸ್ಕಾರ್ಪಿಯೊ,  ₹9.75 ಲಕ್ಷ ಹಣವಿದ್ದ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.

2019ರಲ್ಲಿ ಸೂರ್ಯನಗರ ಪೊಲೀಸ್ ಠಾಣೆಯ ಪೊಲೀಸರು ಅಜಯ್ ಕುಮಾರ್ ಸಿಂಗ್​ನನ್ನು ಬಂಧಿಸಿದ್ದರು. ಈತ ಮತ್ತು ಈತನ ಸಹಚರರಿಂದ ಒಟ್ಟು 2 ಕೋಟಿ ಮೌಲ್ಯದ 822 ಕೆಜಿ ಗಾಂಜಾ ಜಪ್ತಿ ಮಾಡಲಾಗಿತ್ತು. ಈ ಹಿಂದೆ ಬಿಹಾರದಲ್ಲೂ ಸಹ ಇಂತಹುದೇ ಕೃತ್ಯ ಎಸಗಿದ್ದ ಆರೋಪಿ ಬಿಹಾರದಲ್ಲಿ ದಾಖಲಾಗಿದ್ದ ಐದು ಪ್ರಕರಣಕ್ಕೆ ಸಂಬಂಧಧಿಸಿದಂತೆ ಸಜೆ ಅನುಭವಿಸಿದ್ದ. ಬಿಡುಗಡೆಗೊಂಡ ಬಳಿಕ ದೆಹಲಿಯಲ್ಲೂ ತನ್ನ ದುಷ್ಕತ್ಯವನ್ನು ಮುಂದುವರೆಸಿದ್ದ. ಬಳಿಕ 2016ರಲ್ಲಿ ಆನೇಕಲ್ ತಾಲೂಕಿಗೆ ವಲಸೆ ಬಂದಿದ್ದ ಅಜಯ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಾಂಜಾ ಮಾರಾಟವನ್ನು ಮುಂದುವರೆಸಿದ್ದ. ಸದ್ಯ ಆರೋಪಿ ಅಜಯ್ ಮತ್ತು ಆತನ ಕುಟುಂಬದ ಆಸ್ತಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.

ಗಾಂಜಾ ಮಾರಾಟವನ್ನೇ ಉದ್ಯೋಗವನ್ನಾಗಿಸಿಕೊಂಡಿದ್ದವನ ಬಂಧನ ಹಲವು ಸಲ ಜೈಲಿಗೆ ಹೋಗಿದ್ದರೂ ಗಾಂಜಾ ಮಾರುತ್ತಿದ್ದ ಈತನನ್ನು 2020ರಲ್ಲಿ ಗೂಂಡಾ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದರು. ಆದರೆ 8 ತಿಂಗಳು ಜೈಲಿನಲ್ಲಿದ್ದು ಬಿಡುಗಡೆಯಾದ ಬಳಿಕವೂ ಗಾಂಜಾ ಮಾರಾಟ ದಂದೆಯನ್ನು ಈತ ಮುಂದುವರೆಸಿದ್ದ. ವಸೀಂ ಮೇಲೆ ಬೆಂಗಳೂರು ನಗರ, ಗ್ರಾಮಾಂತರದಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಸದ್ಯ ಬಂಧಿತನಾಗಿರುವ ವಸೀಂ ಮೇಲೆ PIT NDPS ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:

ಬೆಂಗಳೂರಿನ ಮಾದಕ ದ್ರವ್ಯ ಜಾಲದಲ್ಲಿ ಸಕ್ರಿಯರಾಗಿದ್ದ ನಾಲ್ವರು ನೈಜೀರಿಯಾ ಪ್ರಜೆಗಳ ಬಂಧನ

2500 ಕೋಟಿ ರೂ.ಮೌಲ್ಯದ ಹೆರಾಯಿನ್​ ವಶಪಡಿಸಿಕೊಂಡ ದೆಹಲಿ ಪೊಲೀಸರು; ಅಫ್ಘಾನಿಸ್ತಾನದಿಂದ ಪೂರೈಕೆ, ಪಾಕಿಸ್ತಾನದಿಂದ ಧನ ಸಹಾಯ !

(Bengaluru First time in Karnataka that money was seized earned by drugs)

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್