ಬೆಂಗಳೂರು: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಕಲಹ, ಕೊಲೆಯಲ್ಲಿ ಅಂತ್ಯ

ಸಾಂಬಾರ್ ಮಾಡುವ ವಿಷಯದಲ್ಲಿ ಉಂಟಾದ ಜಗಳದಿಂದಾಗಿ ನೇಪಾಳ ಮೂಲದ ಬಹದ್ದೂರ್ ಎಂಬಾತನ ಕೊಲೆಯಾಗಿದೆ. ಆತನ ಸ್ನೇಹಿತ ಮಹೇಂದ್ರ ಕೊಲೆ ಆರೋಪಿಯಾಗಿದ್ದಾನೆ. ರವಿವಾರ ರಾತ್ರಿ ಸಂಭವಿಸಿದ ಈ ಘಟನೆಯಲ್ಲಿ, ಸಣ್ಣ ವಿವಾದವು ಮಾರಕ ಹಲ್ಲೆಯಾಗಿ ಬದಲಾಯಿತು. ಬಹದ್ದೂರ್ ಸೆಕ್ಯೂರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದನು ಮತ್ತು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ತಲಘಟ್ಟಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಕಲಹ, ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Jun 23, 2025 | 2:58 PM

ಬೆಂಗಳೂರು, ಜೂನ್​ 23: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್​ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆಯಾದ ಬಹದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೈಕ್​ ಸೆಟ್​ಬಾಕ್ಸ್​ನಿಂದ ಹೊಡೆದು ಭಿಕ್ಷುಕನ ಕೊಲೆ

ಹುಬ್ಬಳ್ಳಿ: ಮೈಕ್​ ಸೆಟ್​ಬಾಕ್ಸ್​ನಿಂದ ಹೊಡೆದು ಭಿಕ್ಷುಕನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಚೇತನ ಮಿತೇಶ್​ (36) ಕೊಲೆಯಾದ ಭಿಕ್ಷುಕ. ರಾಜೇಶ್ ಕೊಲೆ ಮಾಡಿದ ಆರೋಪಿ. ಕೊಲೆ ಆರೋಪಿ ರಾಜೇಶ್ ಕುಮಾರ್ ಸಹ ಬಿಹಾರ ಮೂಲದವನು. ಮಿತೇಶ್ ಮತ್ತು ರಾಜೇಶ್ ಒಂದೇ ಮನೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ 5 ವರ್ಷದ ಬಾಲಕನ ಹತ್ಯೆ
ಹಣಕಾಸಿನ ವಿಚಾರಕ್ಕೆ ಗಲಾಟೆ: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಹತ್ಯೆ
ರಜೆ ಮಜಾ ಮಾಡಲು ಹೋಗಿ ಸೈಬರ್ ವಂಚಕರ ಬಲೆಗೆ ಬಿದ್ದ
ಮಹಿಳೆಯ ಪ್ರಾಣ ತೆಗೆದ ಮೊಬೈಲ್: ಪತ್ನಿಯನ್ನೇ ಕೊಂದ ಪತಿ, ಮಕ್ಕಳು ಅನಾಥ

ಇಬ್ಬರೂ ವಿಶೇಷಚೇತನರಾಗಿದ್ದು ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ರವಿವಾರ (ಜೂ.22) ಮಿತೇಶ್ ಮದ್ಯ ಸೇವಿಸಿ ಬಂದು ರಾಜೇಶ್ ತಾಯಿಗೆ ಬೈದಿದ್ದನು. ಇದರಿಂದ ಕೋಪಗೊಂಡ ರಾಜೇಶ್ ಮೈಕ್​ ಸೆಟ್​ಅಪ್ ​ಬಾಕ್ಸ್​ನಿಂದ​ ಮಿತೇಶ್ ತಲೆಗೆ ಹೊಡೆದಿದ್ದಾನೆ. ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮಿತೇಶ್ ಮೃತಪಟ್ಟಿದ್ದಾನೆ. ಆರೋಪಿ ರಾಜೇಶ್ ಕುಮಾರ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗೊದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ