AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್: ಆರೋಪಪಟ್ಟಿ ಸಲ್ಲಿಕೆ, 8 ನಿಮಿಷದಲ್ಲಿ ನಡೆದಿತ್ತು ಹತ್ಯೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಬರೋಬ್ಬರಿ 600 ಪುಟಗಳ ಚಾರ್ಜ್​ಶೀಟ್​ ಅನ್ನು ಕೋರ್ಟ್​ಗೆ ಸಲ್ಲಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಮಹತ್ವದ ಅಂಶಗಳನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಹಾಗಾದ್ರೆ, ಚಾರ್ಜ್​ಶೀಟ್​ನಲ್ಲಿ ಏನೆಲ್ಲಾ ಉಲ್ಲೇಖಿಸಿದ್ದಾರೆ ಎನ್ನುವ ವಿವರ ಇಲ್ಲಿದೆ.

ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್: ಆರೋಪಪಟ್ಟಿ ಸಲ್ಲಿಕೆ, 8 ನಿಮಿಷದಲ್ಲಿ ನಡೆದಿತ್ತು ಹತ್ಯೆ
Shivaprasad B
| Edited By: |

Updated on: Feb 04, 2024 | 6:21 PM

Share

ಬೆಂಗಳೂರು, (ಫೆಬ್ರವರಿ.4): ಮೂರು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸರು ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ. ಹಂತಕ ಕಿರಣ್ ವಿರುದ್ಧ ಸಾಕ್ಷ್ಯಾಧಾರಗಳ ಮೂಲಕ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಚಾರ್ಜ್ ಶೀಟ್ ನಲ್ಲಿ ಕೊಲೆಗೆ ಪೂರಕವಾದ ಸಾಕ್ಷಿ ಬಗ್ಗೆ ಮಾಹಿತಿ ನೀಡಲಾಗಿದೆ.

ಆರೋಪ ಪಟ್ಟಿಯಲ್ಲಿ ಏನಿದೆ?

ಹಂತಕ ಕಿರಣ್ ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೊಲೆಗೆ ಸಂಚು ರೂಪಿಸಿದ್ದ. ನ 3ರಂದು ಹತ್ಯೆಗೆ ಸಂಚು ರೂಪಿಸಿದ್ದ ಮತ್ತೆ ನವೆಂಬರ್ 4ರಂದು ಕೊಲೆಗೆ ಸಂಚು ರೂಪಿಸಿ ಮನೆ ಮೇಲೆ ಅವಿತು ಕುಳಿತಿದ್ದ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಸಾಂಧರ್ಬಿಕ ಸಾಕ್ಷಿಗಳ ಕಲೆ, ಪೋನ್ ಲೊಕೇಷನ್ ಎವಿಡೆನ್ಸ್, ಸಿಸಿಟಿವಿ ಎವಿಡೆನ್ಸ್ ದಾಖಲು ಮಾಡಲಾಗಿದೆ.

ಹಂತಕ ಕಿರಣ್ ಅಧಿಕಾರಿ ಪ್ರತಿಮಾರನ್ನು 8 ನಿಮಿಷದಲ್ಲಿ ಕೊಲೆ ಮಾಡಿದ್ದ. ಮನೆ ಡೋರ್ ಓಪನ್ ಮಾಡುತ್ತಿದ್ದಂತೆ ಹಿಂಬದಿಯಿಂದ ಅಟ್ಯಾಕ್ ಮಾಡಿ ಮೈಮೇಲಿದ್ದ ದುಪ್ಪಟದಿಂದ ಕತ್ತು ಬಿಗಿದು ನಂತರ ಚಾಕುವಿನಿಂದ ಕತ್ತುಕೊಯ್ದು ಕೊಲೆ ಮಾಡಿದ್ದ. ಮಾತ್ರವಲ್ಲ ಮೈಮೇಲಿದ್ದ ಬಳೆ, ಬ್ರಾಸ್ಲೈಟ್ ಮೂಗುತಿ, ಕಬೋರ್ಡ್ ನಲ್ಲಿದ್ದ ಐದು ಲಕ್ಷ ರೂ, ಹಣದೊಂದಿಗೆ ದೋಚಿ ಪರಾರಿಯಾಗಿದ್ದ.

ಸ್ನೇಹಿತನಿಗೆ ಹಣ ಕೊಟ್ಟು ಮತ್ತಿಬ್ಬರ ಜೊತೆ ಮಲೈಮಹದೇಶ್ವರ ಬೆಟ್ಟಕ್ಕೆ ಪರಾರಿಯಾಗಿದ್ದ, ಲೊಕೇಶನ್ ಟ್ರ್ಯಾಪ್ ಮೂಲಕ ಆರೋಪಿಯನ್ನು ಬಂಧನ ಮಾಡಲಾಗಿತ್ತು. ಇವೆಲ್ಲ ಮಾಹಿತಿಯನ್ನು ಪೊಲೀಸರು ಸಲ್ಲಿಸಿರುವ 600 ಪುಟಗಳ ಚಾರ್ಜ್ ಶೀಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ