AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿದ್ದ ಕೇಸ್: ಕೊಲೆಗೆ ಕಾರಣ ಬಿಚ್ಚಿಟ್ಟ ಪತಿ​

ಬೆಂಗಳೂರಿನ ಹುಳಿಮಾವು ಸಮೀಪದಲ್ಲಿ ನಡೆದ ಗೌರಿ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ನಡೆಸುತ್ತಿದ್ದಾರೆ. ಪತ್ನಿ ಗೌರಿಯನ್ನು ಕೊಲೆ ಮಾಡಿರುವ ಪತಿ, ಆರೋಪಿ ರಾಕೇಶ್​ನನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಪತ್ನಿ ಗೌರಿಯನ್ನು ಕೊಲೆ ಮಾಡಲು ಕಾರಣವೇನು ಎಂದು ಪತಿ, ಆರೋಪಿ ರಾಕೇಶ್​ ಬಾಯಿಬಿಟ್ಟಿದ್ದಾನೆ. ಇನ್ನು ಗೌರಿ ಮತ್ತು ರಾಕೇಶ್ ಪ್ರೀತಿಸಿ ಮದುವೆಯಾಗಿದ್ದರು.

ಪತ್ನಿ ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿದ್ದ ಕೇಸ್: ಕೊಲೆಗೆ ಕಾರಣ ಬಿಚ್ಚಿಟ್ಟ ಪತಿ​
ಕೊಲೆಯಾದ ಗೌರಿ, ಆರೋಪಿ ರಾಕೇಶ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 02, 2025 | 4:05 PM

Share

ಬೆಂಗಳೂರು, ಏಪ್ರಿಲ್​ 02: ಬೆಂಗಳೂರಿನ (Bengaluru) ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯ ಗೌರಿ (Gowri) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ರಾಕೇಶ್​ನನ್ನು​ ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪತ್ನಿ ಗೌರಿಯನ್ನು ಕೊಲೆ ಮಾಡಿ, ಶವವನ್ನು ಸೂಟ್​ಕೇಸ್​ನಲ್ಲಿ ತುಂಬಿ ಪರಾರಿಯಾಗಲು ಯತ್ನಿಸಿದ್ದ ಪತಿ ರಾಕೇಶ್​ನನ್ನು ಬೆಂಗಳೂರು ಪೊಲೀಸರು ಪುಣೆಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಆರೋಪಿ ರಾಕೇಶ್​ನನ್ನು 9ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆರೋಪಿ ರಾಕೇಶ್​ ಹಲವು ವಿಚಾರಾಗಳನ್ನು ಪೊಲೀಸರ ಮುಂದೆ ಬಾಯಿಟ್ಟಿದ್ದಾನೆ. “ ಗೌರಿ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ” ಹೇಳಿದ್ದಾನೆ. ಇಷ್ಟೇ ಅಲ್ಲದೇ, ಆರೋಪಿ ರಾಕೇಶ್​ ಇನ್ನೂ ಹಲವು ವಿಚಾರಗಳನ್ನು ಪೊಲೀಸರ ಮುಂದೆ ಹೇಳಿದ್ದಾನೆ.

ಕುಟುಂಬದ ಒಳಗೆ ದಬ್ಬಾಳಿಕೆ ಮಾಡುತ್ತಿದ್ದಳು ಗೌರಿ

“ಗೌರಿ ನನ್ನ ಕುಟುಂಬದ ಜೊತೆಗೆ ಹೊಂದಾಣಿಕೆ ಆಗಲಿಲ್ಲ. ಆಕೆ ಕುಟುಂಬದ ಒಳಗೆ ದಬ್ಬಾಳಿಕೆ ಮಾಡುತ್ತಿದ್ದಳು. ಕುಟುಂಬದ ಯಾವ ಸದಸ್ಯರ ಜೊತೆಗೆ ಹೊಂದಿಕೊಳ್ಳಲಿಲ್ಲಾ. ಬದಲಾಗಿ ಬೆಂಗಳೂರಿಗೆ ಹೋಗುವ, ಅಲ್ಲಿಯೇ ಇಬ್ಬರು ಕೆಲಸ ಮಾಡುವ ಎಂದು ಒತ್ತಾಯ ಮಾಡಿ ಇಲ್ಲಿಗೆ ಕರೆಸಿದಳು. ಒಂದು ತಿಂಗಳಾದರೂ ಆಕೆಗೆ ಕೆಲಸ ಸಿಗಲಿಲ್ಲ. ಕೆಲಸ ಹುಡುಕಲು ಆಕೆಗೆ ಸಹಾಯ ಮಾಡಿದರೂ ನೀನು ನನಗೆ ಕೆಲಸ ಹುಡುಕಲು ಸಹಾಯ ಮಾಡಿಲ್ಲ ಎಂದು ಪದೇ ಪದೇ ಗಲಾಟೆ ಮಾಡುತ್ತಿದ್ದಳು” ಎಂದು ಪತಿ, ಆರೋಪಿ ರಾಕೇಶ್​ ಹೇಳಿದ್ದಾನೆ.

ಇದನ್ನೂ ಓದಿ
Image
ಒಂದು ಕಿಸ್​ಗೆ 50 ಸಾವಿರ! ಲಕ್ಷ ರೂ. ಸುಲಿಗೆ: ಟೀಚರ್ ಹಾಗೂ ಗ್ಯಾಂಗ್ ಬಂಧನ
Image
ರನ್ಯಾ ಪ್ರಕರಣ: ಡಿಜಿಟಲ್ ಸಾಕ್ಷಿಯಲ್ಲಿ ಸ್ಮಗ್ಲಿಂಗ್ ರಹಸ್ಯ ಬಯಲು
Image
ರನ್ಯಾ ಪೊಲೀಸ್​ ಪ್ರೋಟೋಕಾಲ್​ ಬಳಸುತ್ತಿದ್ದು DGP ರಾಮಚಂದ್ರಗೆ ಗೊತ್ತಿತ್ತಾ?
Image
ಪತ್ನಿ ಕೊಂದು ಟ್ರ್ಯಾಲಿ ಬ್ಯಾಗ್‌ಗೆ ತುಂಬಿದ್ದ ಗಂಡ: 14 ದಿನ ನ್ಯಾಯಾಂಗ ಬಂಧನ

ಇದನ್ನೂ ಓದಿ: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು

“ನಾನು ಮನೆಯಿಂದಲೇ (Work From Home) ಕೆಲಸ ಮಾಡುತ್ತಿದ್ದ ಕಾರಣ ಗಲಾಟೆ ಮಾಡುತ್ತಿದ್ದಳು. ಆಕೆಯದ್ದೇ ನಡೆಯಬೇಕು ಎನ್ನುವ ರೀತಿಯಲ್ಲಿ ಇದ್ದಳು. ಆ ದಿನ (ಮಾ.26) ರಂದು ಸಹ ಇದೇ ವಿಚಾರಗಳುಗೆ ಜೋರು ಜಗಳಕ್ಕೆ ಕಾರಣವಾದವು. ಈ ವೇಳೆ ಆಕೆ ನನಗೆ ಚಾಕುವಿನಿಂದ ಹೊಡೆದಳು. ಬಳಿಕ ನಾನು ಚಾಕುವಿನಿಂದ ಆಕೆಯ ಕುತ್ತಿಗೆಗೆ ಚುಚ್ಚಿದೆ. ನಾನು ಸೆಲ್ಫ್ ಡಿಫೆನ್ಸ್​ಗಾಗಿ ಕೊಲೆ ಮಾಡಿದೆ. ನಂತರ ಕೃತ್ಯ ಮುಚ್ಚಿಹಾಕಲು ಬ್ಯಾಗ್​ಗೆ ತುಂಬಿದೆ. ಆದರೆ,  ಮೃತದೇಹ ಸಾಗಿಸುವುದು ಕಷ್ಟವಾದ ಕಾರಣ ಅಲ್ಲಿಯೇ ಬಿಟ್ಟು ಹೋದೆ” ಎಂದು ಬಾಯಿಬಿಟ್ಟಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು