AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕಳ್ಳತನಕ್ಕೆ ಬಂದವನ ಕಾಲಿಗೆ ಗುಂಡು ಹಾರಿಸಿ ಪೊಲೀಸರಿಗೆ ಒಪ್ಪಿಸಿದ ಮನೆ ಮಾಲಿಕ

ಮನೆಗೆ ಕನ್ನಾ ಹಾಕಲು ಕಾಂಪೌಂಡ್ ಹಾಕಿದಾಗ ಮನೆ ಮಾಲೀಕನನ್ನು ನಾಯಿ ಎಚ್ಚರಿಸಿದೆ, ಕೂಡಲೇ ಗನ್ ಹಿಡಿದು ಮಹಡಿಗೆ ತೆರಳಿದ ಮಾಲೀಕ ಕಳ್ಳನ ಕಾಲಿಗೆ ಗುಂಡು ಹಾರಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆ ಕಳ್ಳತನಕ್ಕೆ ಬಂದವನ ಕಾಲಿಗೆ ಗುಂಡು ಹಾರಿಸಿ ಪೊಲೀಸರಿಗೆ ಒಪ್ಪಿಸಿದ ಮನೆ ಮಾಲಿಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 17, 2022 | 9:05 AM

Share

ಬೆಂಗಳೂರು: ಅದೊಂದು ಈಗಿನ್ನೂ ಅಭಿವೃದ್ಧಿಯಾಗುತ್ತಿರುವ ಏರಿಯಾದಲ್ಲಿರುವ ಒಂಟಿ ಮನೆ. ಆ ಮನೆ ಮೇಲೆ ಕಣ್ಣು ಹಾಕಿದ್ದ ಕಳ್ಳನೊಬ್ಬ ಮಧ್ಯರಾತ್ರಿ ಕಳ್ಳತನ (Theft)ಕ್ಕೆಂದು ಬಂದು ‌ಮನೆ ಮಾಲೀಕನಿಂದ ಗುಂಡೇಟು (Firing) ತಿಂದು ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ಇಂಥದ್ದೊಂದು ಘಟನೆ ನಡೆದಿರುವುದು ನಗರದ ಜಕ್ಕೂರು ಸಮೀಪದ ರಾಚೇನಹಳ್ಳಿಯಲ್ಲಿ. ಮಾಲೀಕ ವೆಂಕಟೇಶ್ ಅವರಿಂದ ಗುಂಡೇಟು ತಿಂದ ಆರೋಪಿ ಲಕ್ಷ್ಮಣ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ರಾಚೇನಹಳ್ಳಿಯಲ್ಲಿರುವ ವೆಂಕಟೇಶ್ ಎಂಬವರ ಮನೆ ಮೇಲೆ ಕಣ್ಣು ಹಾಕಿದ್ದ ಕಳ್ಳನೊಬ್ಬ ಡಿಸೆಂಬರ್ 12ರಂದು ಮಧ್ಯರಾತ್ರಿ ವೇಳೆ ಬೀಗ ಹೊಡೆಯಲು ಬೇಕಾದ ಗ್ಯಾಸ್ ಕಟ್ಟರ್ ಸೇರಿದಂತೆ ಬೇಕಾದ ಎಲ್ಲಾ ಸಾಮಗ್ರಿಗಳೊಂದಿಗೆ ಸಜ್ಜಾಗಿಯೇ ಬಂದಿದ್ದ. ಅದರಂತೆ ವೆಂಕಟೇಶ್ ಅವರ ಮನೆಯ ಮುಂಭಾಗದ ಕಾಂಪೌಂಡ್ ಹಾರಿದಾಗ ಎಚ್ಚರಗೊಂಡ ನಾಯಿ ಬೊಗಳಲು ಆರಂಭಿಸಿ ಮಾಲೀಕನನ್ನು ಎಚ್ಚರಿಸಿದೆ. ತಕ್ಷಣ ಎದ್ದು ಪರಿಶೀಲಿಸಿದಾಗ ಮನೆ ಬಳಿ ಕಳ್ಳ ಓಡಾಡುತ್ತಿರುವುದು ಮಾಲೀಕ ವಂಕಟೇಶ್ ಕಣ್ಣಿಗೆ ಬಿದ್ದಿದೆ.

ಇದನ್ನೂ ಓದಿ: ಕ್ಯಾಲಿಫೋರ್ನಿಯದ ಡುಡ್ಲೀ ಹೆಸರಿನ ವ್ಯಕ್ತಿ ತುಂಬು ಗರ್ಭಿಣಿಯಾಗಿದ್ದ ಒಡಹುಟ್ಟಿದ ತಂಗಿ ಮತ್ತು ಭ್ರೂಣವನ್ನು ತಿವಿದು ಕೊಂದ ಅರೋಪದಲ್ಲಿ ಅರೆಸ್ಟ್ ಆಗಿದ್ದಾನೆ

ಬಾಗಿಲು ತೆರೆದು ಎದುರಿಸಿಯೇ ಬಿಡೋಣ ಅಂದುಕೊಂಡರೂ ಹೊರಗೆ ಎಷ್ಟು ಜನ ಇದ್ದಾರೋ ಎಂಬ ಭಯ ಕಾಡಿತು. ತಕ್ಷಣ ಎಚ್ಚೆತ್ತ ವೆಂಕಟೇಶ್ ಮನೆಯಲ್ಲಿದ್ದ ಲೈಸೆನ್ಸ್ ಹೊಂದಿದ್ದ ಡಬ್ಬಲ್ ಬ್ಯಾರಲ್ ಗನ್ ಕೈಗೆತ್ತಿಕೊಂಡು ಮೊದಲ‌ ಮಹಡಿಗೆ ತೆರಳಿ ಕಳ್ಳನ‌ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮ ನಾಯಿ ಬೊಗಳುವುದನ್ನು ಕೇಳಿ ಕಾಂಪೌಂಡ್ ಹತ್ತುತ್ತಿದ್ದ ಕಳ್ಳನ ಎಡಗಾಲಿಗೆ ತಗುಲಿ ನೆಲಕ್ಕುರುಳಿದ್ದಾನೆ.

ಹೇಳಿಕೇಳಿ ಡಬಲ್ ಬ್ಯಾರಲ್ ಗನ್ ಸಾಮಾನ್ಯ ಗನ್ ಅಥವಾ ಪಿಸ್ತೂಲಿನಂತಲ್ಲ. ಫೈರ್ ಆದಾಗ ಕೇವಲ ಒಂದು ಕಡೆ ಹಾನಿ ಮಾಡುವುದಿಲ್ಲ. ಸಿಡಿಯುವಾಗ ಒಂದೇ ಗುಂಡು ಸಿಡಿದರೂ ಗುರಿ ತಲುಪುವ ವೇಳೆಗೆ ಚಿಕ್ಕ ಚಿಕ್ಕ ತುಂಡುಗಳಾಗಿ ಗುರಿಯನ್ನ ಸೀಳಿರುತ್ತದೆ. ಅದೇ ರೀತಿ ವೆಂಕಟೇಶ್ ಸಿಡಿಸಿದ ಒಂದು ಗುಂಡು ಕಳ್ಳನ ಎಡಗಾಲು, ತೊಡೆಯ ಭಾಗಕ್ಕೆ ತಗುಲಿದೆ. ಬಳಿಕ ವೆಂಕಟೇಶ್ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡು ಬಿದ್ದಿದ್ದ ಕಳ್ಳನನ್ನ ವಿಚಾರಿಸಿದಾಗ ಆತನ ಹೆಸರು ಲಕ್ಷ್ಮಣ್, ಬಾಗಲಕೋಟೆ ಮೂಲದವನು ಅನ್ನೋದು ತಿಳಿದು ಬಂದಿದೆ.

ಇದನ್ನೂ ಓದಿ: ಹೊಡೆದು ಬಡಿದು ಹಸಿವಿನಿಂದ ಸಾಯುವಂತೆ ಮಾಡುವುದಕ್ಕೆ ಕ್ಯಾಲಿಫೋರ್ನಿಯಾದ ಈ ದುಷ್ಟ ಮತ್ತು ಕ್ರೂರ ಕುಟುಂಬ ಮೂರು ಮಕ್ಕಳನ್ನು ದತ್ತು ಪಡೆಯಿತೇ?

ಘಟನೆ ಸುದ್ದಿ ತಿಳಿದು ಹಿರಿಯ ಅಧಿಕಾರಿಗಳು, ಎಫ್ಎಸ್​ಎಲ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನ ವಶಕ್ಕೆ ಪಡೆದಿರುವ ಸಂಪಿಗೇಹಳ್ಳಿ ಪೊಲೀಸರು ಬೌರಿಂಗ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಆರೋಪಿ ಲಕ್ಷ್ಮಣ್ ವಿರುದ್ಧ ಇರುವ ಇತರೇ ಕಳ್ಳತನ ಪ್ರಕರಣಗಳ ಕುರಿತು ತನಿಖೆ ಮುಂದುವರೆದಿದೆ.

ವರದಿ: ಪ್ರಜ್ವಲ್, ಟಿವಿ9 ಬೆಂಗಳೂರು

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 am, Sat, 17 December 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!