AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪತ್ನಿಯನ್ನ ಕೊಲೆ ಮಾಡಿ ಅಸ್ಪತ್ರೆಗೆ ತಂದ ಪತಿ; ತನಿಖೆ ಬಳಿಕ ಬಯಲಾಯ್ತು ಅಸಲಿ ಕಥೆ

ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿತ್ತು.

Bengaluru News: ಪತ್ನಿಯನ್ನ ಕೊಲೆ ಮಾಡಿ ಅಸ್ಪತ್ರೆಗೆ ತಂದ ಪತಿ; ತನಿಖೆ ಬಳಿಕ ಬಯಲಾಯ್ತು ಅಸಲಿ ಕಥೆ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 03, 2023 | 10:11 AM

ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆ(hospital)ಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರ(Yeswanthpur)ದಲ್ಲಿ ನಡೆದಿತ್ತು. ಇನ್ನು ಗಂಡನ ಗೋಳಾಟ ಕಂಡು ವೈದ್ಯರು ಮೊದಲು ಚಿಕಿತ್ಸೆ ನೀಡಲು ಕರೆದೊಯ್ದಿದ್ದಾರೆ. ಚೆಕಪ್ ಮಾಡಿದಾಗ ಮಹಿಳೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಬಳಿಕ ಈ ಬಗ್ಗೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಿದ್ದರು. ನಂತರ ಪೊಲೀಸರ ತನಿಖೆ ವೇಳೆ ಗಂಡನ ಅಸಲಿ ಕಥೆ ಬಯಲಾಗಿದೆ.

ಪತ್ನಿಯನ್ನ ಕೊಲೆ ಮಾಡಿ ಹೈಡ್ರಾಮ ಮಾಡಿದ್ದ ಗಂಡ

ಪತ್ನಿಯನ್ನ ಕೊಲೆ ಮಾಡಿ ಶವದೊಂದಿಗೆ ಆಸ್ಪತ್ರೆಗೆ ಬಂದು ಗಂಡ ಶರತ್ ಹೈಡ್ರಾಮ ಮಾಡಿದ್ದ. ಹೌದು ಆರೋಪಿ ಗಂಡ ಶರತ್​ಗೆ ಎರಡು ಮದುವೆಯಾಗಿತ್ತು. ಮೊದಲ ಪತ್ನಿ ಇದ್ದರೂ ಎರಡನೇ ಪತ್ನಿ ಪ್ರಿಯಾ ಎನ್ನುವವರನ್ನ ಮದುವೆಯಾಗಿದ್ದನು. ಇದೇ ವಿಚಾರಕ್ಕೆ ಮೊದಲ ಪತ್ನಿ ಬಳಿ ಹೋಗ್ತಿಯಾ ಎಂದು ಎರಡನೇ ಪತ್ನಿ ಪ್ರಿಯಾ ಪದೇ ಪದೇ ಜಗಳವಾಡುತ್ತಿದ್ದಳು. ಇದೇ ವಿಚಾರ ಕೆಲ ದಿನಗಳಿಂದ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆ ಕೂಡ ಶರತ್ ಮತ್ತು ಪ್ರಿಯಾ ಜಗಳವಾಡಿದ್ದರು. ಈ ವೇಳೆ ಪತ್ನಿ ಪ್ರಿಯಾಗೆ ಶರತ್ ಥಳಿಸಿದ್ದ. ಹೊಡೆತದ ರಭಸಕ್ಕೆ ಕೆಳಗೆ ಬಿದ್ದು ಪ್ರಿಯಾ ಸಾವನ್ನಪ್ಪಿದ್ದಳು.

ಇದನ್ನೂ ಓದಿ:ಕಾರಿನಲ್ಲಿ ಕರೆದೊಯ್ದು ಉಸಿರುಗಟ್ಟಿಸಿ ಅವಳಿ ಮಕ್ಕಳ ಕೊಲೆಗೈದ ತಂದೆ; ಪೊಲೀಸರು ಪ್ರಕರಣ ಬಯಲಿಗೆಳೆದದ್ದು ಹೀಗೆ

ಎರಡು ದಿನಗಳ ಬಳಿಕ ಅಸಲಿ ಸಂಗತಿ ಬಯಲಿಗೆ

ಗಾಬರಿಯಿಂದ ಘಟನೆ ಮುಚ್ಚಿಡಲು ಪ್ರಯತ್ನಿಸಿದ್ದ ಆರೋಪಿ ಪತಿ ಶರತ್​ನ ಹೈಡ್ರಾಮ ನೋಡಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಶವವನ್ನ ವೈದ್ಯರಿಂದ ಪರಿಶೀಲನೆ ನಡೆಸಿದಾಗ ಕುತ್ತಿಗೆಯ ಬಳಿ ಇರುವ ಪಕ್ಕೆಲುಬು ಮುರಿದಿತ್ತು. ಈ ಕುರಿತು ವೈದ್ಯರು ಪ್ರಿಯಾ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ಅಸಹಜ ಸಾವು ಪ್ರಕರಣ ಕೊಲೆ ಕೇಸ್ ಆಗಿ ಬದಲಾವಣೆ ಆಗಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶರತ್​ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್